<p>ನರಸಿಂಹರಾಜಪುರ: ‘1944ರ ಏ. 14ರಂದು ಮುಂಬೈ ವಿಕ್ಟೋರಿಯಾ ಬಂದರಿನಲ್ಲಿ ಸ್ಟೈಕಿನ್ ಎಂಬ ಹಡಗಿನಲ್ಲಿ ಸ್ಫೋಟಕ ಸಾಮಾಗ್ರಿ ಸಾಗಿಸುತ್ತಿದ್ದಾಗ ಬೆಂಕಿ ತಗಲಿತ್ತು. ಆ ಬೆಂಕಿ ನಂದಿಸಲು ತೆರಳಿದ್ದ ಅಗ್ನಿಶಾಮಕ ಅಧಿಕಾರಿ ಹಾಗೂ 67 ಸಿಬ್ಬಂದಿ ಮೃತಪಟ್ಟಿದ್ದರು. ಅವರ ಸ್ಮರಣಾರ್ಥ ಪ್ರತಿವರ್ಷ ರಾಷ್ಟ್ರದಾದ್ಯಂತ ಅಗ್ನಿಶಾಮಕ ಸೇವಾ ಸಪ್ತಾಹ ಆಚರಿಸಲಾಗುತ್ತಿದೆ’ ಎಂದು ಅಗ್ನಿಶಾಮಕ ದಳದ ಠಾಣಾಧಿಕಾರಿ ದೇವೇಂದ್ರನಾಯಕ್ ಹೇಳಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದ ಸಮೀಪವಿರುವ ಅಗ್ನಿಶಾಮಕ ಠಾಣಾ ಕಚೇರಿಯಲ್ಲಿ, ಮಂಗಳವಾರ ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಅಗ್ನಿಶಾಮಕ ಸೇವಾ ಸಪ್ತಾಹದಲ್ಲಿ ಶಾಲಾ–ಕಾಲೇಜು, ಸಂಘ–ಸಂಸ್ಥೆಗಳು, ಪೆಟ್ರೋಲ್ ಬಂಕ್, ಆಸ್ಪತ್ರೆ, ಗ್ರಾಮಗಳಿಗೆ ತೆರಳಿ ಅಗ್ನಿ ಆಕಸ್ಮಿಕದ ಬಗ್ಗೆ ಅರಿವು ಮೂಡಿಸಲಾಗುವುದು. ಕರಪತ್ರ ಹಂಚಿ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ನಡೆಸಿ ಜಾಗೃತಿ ಮೂಡಿಸಲಾಗುವುದು ಎಂದರು.</p>.<p>ಅಗ್ನಿಶಾಮಕ ಪ್ರಮುಖರಾದ ಡಿ.ಕೆ. ಸಂತೋಷ್ ಕುಮಾರ್, ಪಿ.ರಮೇಶ್, ಅಗ್ನಿಶಾಮಕ ಚಾಲಕ ಪ್ರವೀಣ್ ಮತ್ತು ಸಿಬ್ಬಂದಿ ಇದ್ದರು.</p>.<p>1944ರಲ್ಲಿ ಮೃತಪಟ್ಟಿದ್ದ 67 ಸಿಬ್ಬಂದಿಯ ಆತ್ಮಕ್ಕೆ ಶಾಂತಿ ಕೋರಿ 2 ನಿಮಿಷ ಮೌನಾಚರಣೆ ನಡೆಸಲಾಯಿತು. ನಂತರ ಬಿ.ಎಚ್. ಕೈಮರ, ಶಾಂತಿ ಭವನಕ್ಕೆ ತೆರಳಿ ಸಾರ್ವಜನಿಕರಿಗೆ ಕರಪತ್ರ ವಿತರಿಸಲಾಯಿತು.</p>.<p>ಬುಧವಾರ ಶೆಟ್ಟಿಕೊಪ್ಪದ ಗ್ರಂಥಾಲಯದಲ್ಲಿ ನಡೆಯುತ್ತಿದ್ದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಪ್ರಮುಖ ಅಗ್ನಿಶಾಮಕ ಡಿ.ಕೆ. ಸಂತೋಷ್ ಕುಮಾರ್, ಮಕ್ಕಳಿಗೆ ಅಗ್ನಿ ಆಕಸ್ಮಿಕ ಉಂಟಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-126-1032237946</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಸಿಂಹರಾಜಪುರ: ‘1944ರ ಏ. 14ರಂದು ಮುಂಬೈ ವಿಕ್ಟೋರಿಯಾ ಬಂದರಿನಲ್ಲಿ ಸ್ಟೈಕಿನ್ ಎಂಬ ಹಡಗಿನಲ್ಲಿ ಸ್ಫೋಟಕ ಸಾಮಾಗ್ರಿ ಸಾಗಿಸುತ್ತಿದ್ದಾಗ ಬೆಂಕಿ ತಗಲಿತ್ತು. ಆ ಬೆಂಕಿ ನಂದಿಸಲು ತೆರಳಿದ್ದ ಅಗ್ನಿಶಾಮಕ ಅಧಿಕಾರಿ ಹಾಗೂ 67 ಸಿಬ್ಬಂದಿ ಮೃತಪಟ್ಟಿದ್ದರು. ಅವರ ಸ್ಮರಣಾರ್ಥ ಪ್ರತಿವರ್ಷ ರಾಷ್ಟ್ರದಾದ್ಯಂತ ಅಗ್ನಿಶಾಮಕ ಸೇವಾ ಸಪ್ತಾಹ ಆಚರಿಸಲಾಗುತ್ತಿದೆ’ ಎಂದು ಅಗ್ನಿಶಾಮಕ ದಳದ ಠಾಣಾಧಿಕಾರಿ ದೇವೇಂದ್ರನಾಯಕ್ ಹೇಳಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದ ಸಮೀಪವಿರುವ ಅಗ್ನಿಶಾಮಕ ಠಾಣಾ ಕಚೇರಿಯಲ್ಲಿ, ಮಂಗಳವಾರ ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಅಗ್ನಿಶಾಮಕ ಸೇವಾ ಸಪ್ತಾಹದಲ್ಲಿ ಶಾಲಾ–ಕಾಲೇಜು, ಸಂಘ–ಸಂಸ್ಥೆಗಳು, ಪೆಟ್ರೋಲ್ ಬಂಕ್, ಆಸ್ಪತ್ರೆ, ಗ್ರಾಮಗಳಿಗೆ ತೆರಳಿ ಅಗ್ನಿ ಆಕಸ್ಮಿಕದ ಬಗ್ಗೆ ಅರಿವು ಮೂಡಿಸಲಾಗುವುದು. ಕರಪತ್ರ ಹಂಚಿ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ನಡೆಸಿ ಜಾಗೃತಿ ಮೂಡಿಸಲಾಗುವುದು ಎಂದರು.</p>.<p>ಅಗ್ನಿಶಾಮಕ ಪ್ರಮುಖರಾದ ಡಿ.ಕೆ. ಸಂತೋಷ್ ಕುಮಾರ್, ಪಿ.ರಮೇಶ್, ಅಗ್ನಿಶಾಮಕ ಚಾಲಕ ಪ್ರವೀಣ್ ಮತ್ತು ಸಿಬ್ಬಂದಿ ಇದ್ದರು.</p>.<p>1944ರಲ್ಲಿ ಮೃತಪಟ್ಟಿದ್ದ 67 ಸಿಬ್ಬಂದಿಯ ಆತ್ಮಕ್ಕೆ ಶಾಂತಿ ಕೋರಿ 2 ನಿಮಿಷ ಮೌನಾಚರಣೆ ನಡೆಸಲಾಯಿತು. ನಂತರ ಬಿ.ಎಚ್. ಕೈಮರ, ಶಾಂತಿ ಭವನಕ್ಕೆ ತೆರಳಿ ಸಾರ್ವಜನಿಕರಿಗೆ ಕರಪತ್ರ ವಿತರಿಸಲಾಯಿತು.</p>.<p>ಬುಧವಾರ ಶೆಟ್ಟಿಕೊಪ್ಪದ ಗ್ರಂಥಾಲಯದಲ್ಲಿ ನಡೆಯುತ್ತಿದ್ದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಪ್ರಮುಖ ಅಗ್ನಿಶಾಮಕ ಡಿ.ಕೆ. ಸಂತೋಷ್ ಕುಮಾರ್, ಮಕ್ಕಳಿಗೆ ಅಗ್ನಿ ಆಕಸ್ಮಿಕ ಉಂಟಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-126-1032237946</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>