<p>ನರೇಗಲ್: ‘ಹಿಂದುಳಿದ ಎಲ್ಲಾ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಸಂವಿಧಾನದ ಎಲ್ಲಾ ಕರ್ತವ್ಯ ಮತ್ತು ಕಾರ್ಯಗಳನ್ನು ಸರಿಯಾಗಿ ಓದಿ ಜೀವನವನ್ನು ಉಜ್ವಲಗೊಳಿಸಿಕೊಳ್ಳಬೇಕು’ ಎಂದು ರೋಣ ಸಿಪಿಐ ವಿಜಯಕುಮಾರ ಹೇಳಿದರು.</p>.<p>ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ತೋಟಗಂಟಿ ಗ್ರಾಮದಲ್ಲಿ ಈಚೆಗೆ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು.</p>.<p>‘ಬಾಬಾಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನ ಓದಿ ಎಲ್ಲಾ ಮಕ್ಕಳು ತಮ್ಮ ಜೀವನ ಬದಲಾಯಿಸಿಕೊಳ್ಳಬೇಕು. ಸಮಾಜದಲ್ಲಿ ಅಹಿತಕರ ಘಟನೆಯಲ್ಲಿ ಯಾರೂ ಭಾಗಿಯಾಗಬಾರದು. ಏನಾದರೂ ಸಮಸ್ಯೆಗಳಿದ್ದರೆ ನಮ್ಮ ಪೊಲೀಸ್ ಇಲಾಖೆಗೆ ತಿಳಿಸಬೇಕು. ನಾವು ಅದನ್ನು ಪರಿಶೀಲಿಸಿ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ’ ಎಂದರು.</p>.<p>ನರೇಗಲ್ ಪೊಲೀಸ್ ಠಾಣೆಯ ಪಿಎಸ್ಐ ಐಶ್ವರ್ಯ ನಾಗರಾಳ ಮಾತನಾಡಿ, ‘ಸಮಾಜದಲ್ಲಿ ಯಾರೂ ಮೇಲಲ್ಲ, ಯಾರು ಕೇಳಲ್ಲ ಎಲ್ಲರೂ ಒಂದೇ. ಎಲ್ಲಾ ಮಕ್ಕಳಿಗೆ ಶಿಕ್ಷಣ ಒದಗಿಸಬೇಕು ಜೊತೆಗೆ ಸಂಸ್ಕಾರ ಕಲಿಸಬೇಕು ಅಂದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ಸಿಬ್ಬಂದಿಗಳಾದ ಎಸ್.ಬಿ.ವಡ್ಡಟ್ಟಿ, ಷರೀಫ್ ಮುಲ್ಲಾ, ಬಿ.ಎಸ್.ಮಾಯಣ್ಣವರ, ಸಮಾಜದ ಹಿರಿಯರಾದ ಶಿವಾನಂದ ಗೋಗೇರಿ, ಲಕ್ಷ್ಮಪ್ಪ ಹಳ್ಳದಮನಿ, ದೇವಪ್ಪ ನೂಲ್ಕಿ, ಯಲ್ಲಪ್ಪ ಹಳ್ಳದಮನಿ, ಫಕೀರಪ್ಪ ಪೂಜಾರ, ಶರಣಪ್ಪ ಹಳ್ಳದಮನಿ, ಶೇಖಪ್ಪ ಡಂಬಳ, ಕಳಕಪ್ಪ ಡಂಬಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-23-1480502222</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರೇಗಲ್: ‘ಹಿಂದುಳಿದ ಎಲ್ಲಾ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಸಂವಿಧಾನದ ಎಲ್ಲಾ ಕರ್ತವ್ಯ ಮತ್ತು ಕಾರ್ಯಗಳನ್ನು ಸರಿಯಾಗಿ ಓದಿ ಜೀವನವನ್ನು ಉಜ್ವಲಗೊಳಿಸಿಕೊಳ್ಳಬೇಕು’ ಎಂದು ರೋಣ ಸಿಪಿಐ ವಿಜಯಕುಮಾರ ಹೇಳಿದರು.</p>.<p>ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ತೋಟಗಂಟಿ ಗ್ರಾಮದಲ್ಲಿ ಈಚೆಗೆ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು.</p>.<p>‘ಬಾಬಾಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನ ಓದಿ ಎಲ್ಲಾ ಮಕ್ಕಳು ತಮ್ಮ ಜೀವನ ಬದಲಾಯಿಸಿಕೊಳ್ಳಬೇಕು. ಸಮಾಜದಲ್ಲಿ ಅಹಿತಕರ ಘಟನೆಯಲ್ಲಿ ಯಾರೂ ಭಾಗಿಯಾಗಬಾರದು. ಏನಾದರೂ ಸಮಸ್ಯೆಗಳಿದ್ದರೆ ನಮ್ಮ ಪೊಲೀಸ್ ಇಲಾಖೆಗೆ ತಿಳಿಸಬೇಕು. ನಾವು ಅದನ್ನು ಪರಿಶೀಲಿಸಿ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ’ ಎಂದರು.</p>.<p>ನರೇಗಲ್ ಪೊಲೀಸ್ ಠಾಣೆಯ ಪಿಎಸ್ಐ ಐಶ್ವರ್ಯ ನಾಗರಾಳ ಮಾತನಾಡಿ, ‘ಸಮಾಜದಲ್ಲಿ ಯಾರೂ ಮೇಲಲ್ಲ, ಯಾರು ಕೇಳಲ್ಲ ಎಲ್ಲರೂ ಒಂದೇ. ಎಲ್ಲಾ ಮಕ್ಕಳಿಗೆ ಶಿಕ್ಷಣ ಒದಗಿಸಬೇಕು ಜೊತೆಗೆ ಸಂಸ್ಕಾರ ಕಲಿಸಬೇಕು ಅಂದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ಸಿಬ್ಬಂದಿಗಳಾದ ಎಸ್.ಬಿ.ವಡ್ಡಟ್ಟಿ, ಷರೀಫ್ ಮುಲ್ಲಾ, ಬಿ.ಎಸ್.ಮಾಯಣ್ಣವರ, ಸಮಾಜದ ಹಿರಿಯರಾದ ಶಿವಾನಂದ ಗೋಗೇರಿ, ಲಕ್ಷ್ಮಪ್ಪ ಹಳ್ಳದಮನಿ, ದೇವಪ್ಪ ನೂಲ್ಕಿ, ಯಲ್ಲಪ್ಪ ಹಳ್ಳದಮನಿ, ಫಕೀರಪ್ಪ ಪೂಜಾರ, ಶರಣಪ್ಪ ಹಳ್ಳದಮನಿ, ಶೇಖಪ್ಪ ಡಂಬಳ, ಕಳಕಪ್ಪ ಡಂಬಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-23-1480502222</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>