<p>ನರಗುಂದ: ‘ಸರ್ಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳನ್ನುನೀಡಲಾಗುತ್ತಿದೆ. ಇದರ ಜೊತೆಗೆ ಉತ್ತಮ ಬೋಧನೆ ನಡೆಯುತ್ತಿದೆ.ಇದನ್ನು ಪಾಲಕರಿಗೆ ಮನವರಿಕೆ ಮಾಡಿಕೊಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ದಾಖಲಾತಿ ಆಗುವಂತೆ ಮುಖ್ಯಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕು’ ಎಂದು ಗದಗ ಜಿಲ್ಲಾ ಡಿಡಿಪಿಐ ಆರ್.ಎಸ್.ಬುರಡಿ ಹೇಳಿದರು.</p>.<p>ಪಟ್ಟಣದ ರೋಟ್ರಾಕ್ಟ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಶನಿವಾರ ನಡೆದ ತಾಲ್ಲೂಕಿನ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು.</p>.<p>2025 26ನೇ ಸಾಲಿನ ವಿಶೇಷ ದಾಖಲಾತಿ ಜಾಗೃತಿ ಅಭಿಯಾನದಯಡಿ ಸರ್ಕಾರಿ ಶಾಲೆಗಳಿಗೆ 2026– 27ನೇ ಸಾಲಿಗೆ ಒಂದನೇ ತರಗತಿಗೆ ಹೆಚ್ಚು ಮಕ್ಕಳನ್ನು ದಾಖಲು ಮಾಡಿಕೊಳ್ಳಲು ಎಲ್ಲ ಶಿಕ್ಷಕರು ಶ್ರಮ ಹಾಕಬೇಕು ಎಂದರು.</p>.<p>ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ದಾಖಲಾತಿ ಆದರೆ ಶ್ರಮಕ್ಕೆ ಪ್ರತಿಫಲ ದೊರೆಯುತ್ತದೆ. ಗುಣಮಟ್ಟದ ಶಿಕ್ಷಣಕ್ಕೆ, ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು, ಏಳು ದಿನ ಗೈರು ಇರುವ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕಾರ್ಯಕ್ರಮದ ಕುರಿತು ಸಮಗ್ರವಾಗಿ ವಿವರಿಸಿದರು.</p>.<p>ಸಭೆಯಲ್ಲಿ ಡಯಟ್ ಉಪನ್ಯಾಸಕ ಹಾಗೂ ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಎಚ್.ಬಿ.ರಡ್ಡೇರ ಮಾತನಾಡಿ, ‘ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನಕ್ಕೆ ತಮ್ಮ ಶಾಲೆಯ ಶಿಕ್ಷಕರನ್ನು ಎಪ್ರಿಲ್ 8ರಂದು ಬಿಡುಗಡೆ ಮಾಡಬೇಕು’ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಕಂಬಳಿ ಮಾತನಾಡಿದರು. ಸಭೆಯಲ್ಲಿ ರೋಟ್ರಾಕ್ಟ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪಿ.ವಿ.ಕೆಂಚನಗೌಡ್ರ, ಬಿಆರ್ಪಿ ಬಿ.ಆರ್.ರಾಯನಗೌಡ್ರ, ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಿಆರ್ಪಿ ಮತ್ತು ಬಿಆರ್ಪಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-23-1748186425</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಗುಂದ: ‘ಸರ್ಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳನ್ನುನೀಡಲಾಗುತ್ತಿದೆ. ಇದರ ಜೊತೆಗೆ ಉತ್ತಮ ಬೋಧನೆ ನಡೆಯುತ್ತಿದೆ.ಇದನ್ನು ಪಾಲಕರಿಗೆ ಮನವರಿಕೆ ಮಾಡಿಕೊಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ದಾಖಲಾತಿ ಆಗುವಂತೆ ಮುಖ್ಯಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕು’ ಎಂದು ಗದಗ ಜಿಲ್ಲಾ ಡಿಡಿಪಿಐ ಆರ್.ಎಸ್.ಬುರಡಿ ಹೇಳಿದರು.</p>.<p>ಪಟ್ಟಣದ ರೋಟ್ರಾಕ್ಟ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಶನಿವಾರ ನಡೆದ ತಾಲ್ಲೂಕಿನ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು.</p>.<p>2025 26ನೇ ಸಾಲಿನ ವಿಶೇಷ ದಾಖಲಾತಿ ಜಾಗೃತಿ ಅಭಿಯಾನದಯಡಿ ಸರ್ಕಾರಿ ಶಾಲೆಗಳಿಗೆ 2026– 27ನೇ ಸಾಲಿಗೆ ಒಂದನೇ ತರಗತಿಗೆ ಹೆಚ್ಚು ಮಕ್ಕಳನ್ನು ದಾಖಲು ಮಾಡಿಕೊಳ್ಳಲು ಎಲ್ಲ ಶಿಕ್ಷಕರು ಶ್ರಮ ಹಾಕಬೇಕು ಎಂದರು.</p>.<p>ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ದಾಖಲಾತಿ ಆದರೆ ಶ್ರಮಕ್ಕೆ ಪ್ರತಿಫಲ ದೊರೆಯುತ್ತದೆ. ಗುಣಮಟ್ಟದ ಶಿಕ್ಷಣಕ್ಕೆ, ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು, ಏಳು ದಿನ ಗೈರು ಇರುವ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕಾರ್ಯಕ್ರಮದ ಕುರಿತು ಸಮಗ್ರವಾಗಿ ವಿವರಿಸಿದರು.</p>.<p>ಸಭೆಯಲ್ಲಿ ಡಯಟ್ ಉಪನ್ಯಾಸಕ ಹಾಗೂ ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಎಚ್.ಬಿ.ರಡ್ಡೇರ ಮಾತನಾಡಿ, ‘ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನಕ್ಕೆ ತಮ್ಮ ಶಾಲೆಯ ಶಿಕ್ಷಕರನ್ನು ಎಪ್ರಿಲ್ 8ರಂದು ಬಿಡುಗಡೆ ಮಾಡಬೇಕು’ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಕಂಬಳಿ ಮಾತನಾಡಿದರು. ಸಭೆಯಲ್ಲಿ ರೋಟ್ರಾಕ್ಟ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪಿ.ವಿ.ಕೆಂಚನಗೌಡ್ರ, ಬಿಆರ್ಪಿ ಬಿ.ಆರ್.ರಾಯನಗೌಡ್ರ, ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಿಆರ್ಪಿ ಮತ್ತು ಬಿಆರ್ಪಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-23-1748186425</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>