<p>ನರಗುಂದ: ರೆಡ್ ಕ್ರಾಸ್ ಸಂಸ್ಥೆ ಅಂತರರಾಷ್ಟ್ರೀಯ ಮಾನವೀಯ ಸೇವಾ ಸಂಸ್ಥೆಯಾಗಿದೆ. ಇದರಲ್ಲಿ ಹೆಚ್ಚೆಚ್ಚು ಸ್ವಯಂ ಸೇವಕರು ಭಾಗವಹಿಸುವಂತೆ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ರಾಮು ಎಂ.ಎಸ್. ಹೇಳಿದರು.</p>.<p>ಪಟ್ಟಣದ ಶ್ರೀ ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾಕೋತ್ತರ ಅಧ್ಯಯನ ಕೇಂದ್ರದಲ್ಲಿ ಯುವ ರೆಡ್ ಕ್ರಾಸ್ ಘಟಕದ ಅಡಿಯಲ್ಲಿ ಶುಕ್ರವಾರ ನಡೆದ ವಿಶ್ವ ರೆಡ್ ಕ್ರಾಸ್ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಈ ಸಂಸ್ಥೆಯ ಮುಖ್ಯ ಉದ್ದೇಶಗಳಾದ ಯುದ್ಧ ಹಾಗೂ ಪ್ರಕೃತಿ ವಿಕೋಪಗಳಲ್ಲಿ ನೆರವು ನೀಡುವುದು, ರಕ್ತದಾನ ಶಿಬಿರಗಳನ್ನು ಆಯೋಜಿಸುವುದು, ಪ್ರಥಮ ಚಿಕಿತ್ಸೆ ತರಬೇತಿ ನೀಡುವುದು, ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವುದಾಗಿದೆ. ನಿರಾಶ್ರಿತರು ಮತ್ತು ಬಡವರಿಗೆ ಸಹಾಯ ಮಾಡುವುದರಲ್ಲಿ ಹೆಚ್ಚು ಹೆಚ್ಚು ಸ್ವಯಂ ಸೇವಕರು ಪಾಲ್ಗೊಳ್ಳುವಂತೆ ರಾಮು ಹೇಳಿದರು.</p>.<p>ಪ್ರಾಚಾರ್ಯ ಆನಂದ ಕುಮಾರ ಲಾಲಸಂಗಿ ಮಾತನಾಡಿ, ವಿಶ್ವದಲ್ಲಿ ಶಾಂತಿ ಸ್ಥಾಪಿಸುವಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಪಾತ್ರ ಮಹತ್ವದ್ದಾಗಿದೆ ಎಂದು ಸ್ಮರಿಸಿದರು. ನೊಬೆಲ್ ಪುರಸ್ಕೃತರಾದ ಹೆನ್ರಿ ಡುನಾಂಟ್ ರವರ ಪರಿಶ್ರಮದಿಂದಾಗಿ ಇಂದು ಪ್ರಪಂಚದಾದ್ಯಂತ ರೆಡ್ ಕ್ರಾಸ್ ಸಂಸ್ಥೆಯು ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ನಿಸ್ವಾರ್ಥ ಸೇವೆಯಿಂದಾಗಿ ಜನ ಮನ್ನಣೆಯನ್ನು ಗಳಿಸಿದೆ ಎಂದರು.</p>.<p>ಪ್ರಾಧ್ಯಾಪಕರಾದ ಲಿಂಗರಾಜ ಅಂಗಡಿ, ಐಕ್ಯೂಎಸಿ ಸಂಚಾಲಕಿ ಯಶೋಧ ಅಂಗಡಿ ಮತ್ತು ಯುವ ರೆಡ್ ಕ್ರಾಸ್ ಘಟಕದ ಸ್ವಯಂ ಸೇವಕರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-23-781030653</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಗುಂದ: ರೆಡ್ ಕ್ರಾಸ್ ಸಂಸ್ಥೆ ಅಂತರರಾಷ್ಟ್ರೀಯ ಮಾನವೀಯ ಸೇವಾ ಸಂಸ್ಥೆಯಾಗಿದೆ. ಇದರಲ್ಲಿ ಹೆಚ್ಚೆಚ್ಚು ಸ್ವಯಂ ಸೇವಕರು ಭಾಗವಹಿಸುವಂತೆ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ರಾಮು ಎಂ.ಎಸ್. ಹೇಳಿದರು.</p>.<p>ಪಟ್ಟಣದ ಶ್ರೀ ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾಕೋತ್ತರ ಅಧ್ಯಯನ ಕೇಂದ್ರದಲ್ಲಿ ಯುವ ರೆಡ್ ಕ್ರಾಸ್ ಘಟಕದ ಅಡಿಯಲ್ಲಿ ಶುಕ್ರವಾರ ನಡೆದ ವಿಶ್ವ ರೆಡ್ ಕ್ರಾಸ್ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಈ ಸಂಸ್ಥೆಯ ಮುಖ್ಯ ಉದ್ದೇಶಗಳಾದ ಯುದ್ಧ ಹಾಗೂ ಪ್ರಕೃತಿ ವಿಕೋಪಗಳಲ್ಲಿ ನೆರವು ನೀಡುವುದು, ರಕ್ತದಾನ ಶಿಬಿರಗಳನ್ನು ಆಯೋಜಿಸುವುದು, ಪ್ರಥಮ ಚಿಕಿತ್ಸೆ ತರಬೇತಿ ನೀಡುವುದು, ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವುದಾಗಿದೆ. ನಿರಾಶ್ರಿತರು ಮತ್ತು ಬಡವರಿಗೆ ಸಹಾಯ ಮಾಡುವುದರಲ್ಲಿ ಹೆಚ್ಚು ಹೆಚ್ಚು ಸ್ವಯಂ ಸೇವಕರು ಪಾಲ್ಗೊಳ್ಳುವಂತೆ ರಾಮು ಹೇಳಿದರು.</p>.<p>ಪ್ರಾಚಾರ್ಯ ಆನಂದ ಕುಮಾರ ಲಾಲಸಂಗಿ ಮಾತನಾಡಿ, ವಿಶ್ವದಲ್ಲಿ ಶಾಂತಿ ಸ್ಥಾಪಿಸುವಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಪಾತ್ರ ಮಹತ್ವದ್ದಾಗಿದೆ ಎಂದು ಸ್ಮರಿಸಿದರು. ನೊಬೆಲ್ ಪುರಸ್ಕೃತರಾದ ಹೆನ್ರಿ ಡುನಾಂಟ್ ರವರ ಪರಿಶ್ರಮದಿಂದಾಗಿ ಇಂದು ಪ್ರಪಂಚದಾದ್ಯಂತ ರೆಡ್ ಕ್ರಾಸ್ ಸಂಸ್ಥೆಯು ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ನಿಸ್ವಾರ್ಥ ಸೇವೆಯಿಂದಾಗಿ ಜನ ಮನ್ನಣೆಯನ್ನು ಗಳಿಸಿದೆ ಎಂದರು.</p>.<p>ಪ್ರಾಧ್ಯಾಪಕರಾದ ಲಿಂಗರಾಜ ಅಂಗಡಿ, ಐಕ್ಯೂಎಸಿ ಸಂಚಾಲಕಿ ಯಶೋಧ ಅಂಗಡಿ ಮತ್ತು ಯುವ ರೆಡ್ ಕ್ರಾಸ್ ಘಟಕದ ಸ್ವಯಂ ಸೇವಕರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-23-781030653</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>