<p>ನವಲಗುಂದ: ‘ವಿದ್ಯಾರ್ಥಿಗಳು ಶಾಲೆಯಲ್ಲಿ ಸರ್ಕಾರದ ವತಿಯಿಂದ ದೊರೆಯುವ ಸೌಲಭ್ಯ ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಡಿ.ರಂಗಣ್ಣವರ ಹೇಳಿದರು.</p>.<p>ತಾಲ್ಲೂಕಿನ ಜಾವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶುಕ್ರವಾರ ಪಠ್ಯಪುಸ್ತಕಗಳನ್ನು ವಿತರಿಸಿ ಮಾತನಾಡಿ, ಶಿಕ್ಷಣದಿಂದ ಮಾತ್ರ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ ಹಿರೆಗಣ್ಣವರ ಮಾತನಾಡಿ, ‘ಸರ್ಕಾರದ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸ್ತಕ, ಸಮವಸ್ತ್ರ, ಬಿಸಿಯೂಟ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ನೀಡುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಿ ಎಂದರು.</p>.<p>ಶಿಕ್ಷಕರಾದ ಎಸ್.ಎನ್.ಅಕ್ಕಿಮರಡಿ, ಎಂ.ಪಿ.ಶಿವಪೂಜಿಮಠ, ಸರಿತಾ ಕೊಪ್ಪದ, ಎಂ.ಎಂ.ನಾಯ್ಕರ ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-24-192273135</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವಲಗುಂದ: ‘ವಿದ್ಯಾರ್ಥಿಗಳು ಶಾಲೆಯಲ್ಲಿ ಸರ್ಕಾರದ ವತಿಯಿಂದ ದೊರೆಯುವ ಸೌಲಭ್ಯ ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಡಿ.ರಂಗಣ್ಣವರ ಹೇಳಿದರು.</p>.<p>ತಾಲ್ಲೂಕಿನ ಜಾವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶುಕ್ರವಾರ ಪಠ್ಯಪುಸ್ತಕಗಳನ್ನು ವಿತರಿಸಿ ಮಾತನಾಡಿ, ಶಿಕ್ಷಣದಿಂದ ಮಾತ್ರ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ ಹಿರೆಗಣ್ಣವರ ಮಾತನಾಡಿ, ‘ಸರ್ಕಾರದ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸ್ತಕ, ಸಮವಸ್ತ್ರ, ಬಿಸಿಯೂಟ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ನೀಡುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಿ ಎಂದರು.</p>.<p>ಶಿಕ್ಷಕರಾದ ಎಸ್.ಎನ್.ಅಕ್ಕಿಮರಡಿ, ಎಂ.ಪಿ.ಶಿವಪೂಜಿಮಠ, ಸರಿತಾ ಕೊಪ್ಪದ, ಎಂ.ಎಂ.ನಾಯ್ಕರ ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-24-192273135</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>