<p>ನಾಯಕನಹಟ್ಟಿ: ಕಾಲೇಜು ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಮತ್ತು ಸೇವಾ ಮನೋಭಾವ ಬೆಳೆಸಲು ಎನ್ಎಸ್ಎಸ್ ಶಿಬಿರ ಸಹಕಾರಿಯಾಗಲಿದೆ ಎಂದು ಎಸ್ಟಿಎಸ್ಆರ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ.ವೈ.ಟಿ. ಸ್ವಾಮಿ ಹೇಳಿದರು.</p>.<p>ಹೋಬಳಿಯ ಮನುಮೈನಹಟ್ಟಿ ಗ್ರಾಮದಲ್ಲಿ ನಾಯಕನಹಟ್ಟಿಯ ಎಚ್ಎಂಟಿ ಪ್ರಥಮದರ್ಜೆ ಕಾಲೇಜಿನಿಂದ ಹಮ್ಮಿಕೊಂಡಿರುವ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟಿಸಿ ಮಂಗಳವಾರ ಮಾತನಾಡಿದರು.</p>.<p>ಸಂಸ್ಥೆಯ ಮೂಲ ತತ್ವವು ವಿದ್ಯಾರ್ಥಿಗಳಿಗೆ ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ಭಾಗಿಯಾಗುವ ಅನುಭವವನ್ನು ನೀಡುವುದು ಹಾಗೂ ರಾಷ್ಟ್ರಪ್ರೇಮ ಮತ್ತು ಸೇವಾ ಮನೋಭಾವ ಬೆಳೆಸುವುದಾಗಿದೆ. ಹಾಗಾಗಿ ಎನ್ಎಸ್ಎಸ್ ‘ನನಗಲ್ಲ, ನಿನಗೆ’ ಎಂಬ ಧ್ಯೇಯವಾಕ್ಯವನ್ನು ಹೊಂದಿದೆ.</p>.<p>ಪ್ರತಿಯೊಬ್ಬರೂ ನಿಸ್ವಾರ್ಥ ಸೇವೆಯ ಜೊತೆಗೆ ಸಮಾಜದೊಂದಿಗೆ ಬೆರೆತು ಮಾನವೀಯತೆ ಎತ್ತಿ ಹಿಡಿಯುವ ಅಗತ್ಯವನ್ನು ಎನ್ಎಸ್ಎಸ್ ಬಿಂಬಿಸುತ್ತದೆ. ಆ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಪರಿಸರ ಸಂರಕ್ಷಣೆ, ಗ್ರಾಮೀಣ ಜನರಲ್ಲಿ ಆರೋಗ್ಯ, ಶ್ರಮದಾನ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಜಾಗೃತಿ ಮೂಡಿಸಲಾಗುತ್ತದೆ. ಶಿಬಿರದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಎನ್ಎಸ್ಎಸ್ ಧ್ಯೇಯವನ್ನು ಪಾಲಿಸಬೇಕು ಎಂದರು.</p>.<p>ಮುಖಂಡ ಎಚ್.ಶಿವಣ್ಣ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಸ್ಥರಾದ ಜಿ.ಪಿ. ಬಸವರಾಜ್, ಕೆ.ಮಂಜುನಾಥ, ಎಂ.ಪಾಲಯ್ಯ, ರವಿಕುಮಾರ್, ಆರೋಗ್ಯ ಇಲಾಖೆಯ ಸುಧಾ, ಶಿಕ್ಷಕ ಜಿ.ವೈ.ತಿಪ್ಪೇಸ್ವಾಮಿ, ಎಚ್.ಸಿ. ರಾಜೆಂದ್ರ, ಪ್ರಾಚಾರ್ಯರಾದ ಸಂಗೀತ, ಪದ್ಮನಾಭ್ಶಾಸ್ತ್ರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-44-1973059088</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಯಕನಹಟ್ಟಿ: ಕಾಲೇಜು ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಮತ್ತು ಸೇವಾ ಮನೋಭಾವ ಬೆಳೆಸಲು ಎನ್ಎಸ್ಎಸ್ ಶಿಬಿರ ಸಹಕಾರಿಯಾಗಲಿದೆ ಎಂದು ಎಸ್ಟಿಎಸ್ಆರ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ.ವೈ.ಟಿ. ಸ್ವಾಮಿ ಹೇಳಿದರು.</p>.<p>ಹೋಬಳಿಯ ಮನುಮೈನಹಟ್ಟಿ ಗ್ರಾಮದಲ್ಲಿ ನಾಯಕನಹಟ್ಟಿಯ ಎಚ್ಎಂಟಿ ಪ್ರಥಮದರ್ಜೆ ಕಾಲೇಜಿನಿಂದ ಹಮ್ಮಿಕೊಂಡಿರುವ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟಿಸಿ ಮಂಗಳವಾರ ಮಾತನಾಡಿದರು.</p>.<p>ಸಂಸ್ಥೆಯ ಮೂಲ ತತ್ವವು ವಿದ್ಯಾರ್ಥಿಗಳಿಗೆ ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ಭಾಗಿಯಾಗುವ ಅನುಭವವನ್ನು ನೀಡುವುದು ಹಾಗೂ ರಾಷ್ಟ್ರಪ್ರೇಮ ಮತ್ತು ಸೇವಾ ಮನೋಭಾವ ಬೆಳೆಸುವುದಾಗಿದೆ. ಹಾಗಾಗಿ ಎನ್ಎಸ್ಎಸ್ ‘ನನಗಲ್ಲ, ನಿನಗೆ’ ಎಂಬ ಧ್ಯೇಯವಾಕ್ಯವನ್ನು ಹೊಂದಿದೆ.</p>.<p>ಪ್ರತಿಯೊಬ್ಬರೂ ನಿಸ್ವಾರ್ಥ ಸೇವೆಯ ಜೊತೆಗೆ ಸಮಾಜದೊಂದಿಗೆ ಬೆರೆತು ಮಾನವೀಯತೆ ಎತ್ತಿ ಹಿಡಿಯುವ ಅಗತ್ಯವನ್ನು ಎನ್ಎಸ್ಎಸ್ ಬಿಂಬಿಸುತ್ತದೆ. ಆ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಪರಿಸರ ಸಂರಕ್ಷಣೆ, ಗ್ರಾಮೀಣ ಜನರಲ್ಲಿ ಆರೋಗ್ಯ, ಶ್ರಮದಾನ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಜಾಗೃತಿ ಮೂಡಿಸಲಾಗುತ್ತದೆ. ಶಿಬಿರದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಎನ್ಎಸ್ಎಸ್ ಧ್ಯೇಯವನ್ನು ಪಾಲಿಸಬೇಕು ಎಂದರು.</p>.<p>ಮುಖಂಡ ಎಚ್.ಶಿವಣ್ಣ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಸ್ಥರಾದ ಜಿ.ಪಿ. ಬಸವರಾಜ್, ಕೆ.ಮಂಜುನಾಥ, ಎಂ.ಪಾಲಯ್ಯ, ರವಿಕುಮಾರ್, ಆರೋಗ್ಯ ಇಲಾಖೆಯ ಸುಧಾ, ಶಿಕ್ಷಕ ಜಿ.ವೈ.ತಿಪ್ಪೇಸ್ವಾಮಿ, ಎಚ್.ಸಿ. ರಾಜೆಂದ್ರ, ಪ್ರಾಚಾರ್ಯರಾದ ಸಂಗೀತ, ಪದ್ಮನಾಭ್ಶಾಸ್ತ್ರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-44-1973059088</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>