<p>ತೆಕ್ಕಲಕೋಟೆ (ಬಳ್ಳಾರಿ ಜಿಲ್ಲೆ): ನಿಟ್ಟೂರು ಗ್ರಾಮದ ಸುಕ್ರದಪ್ಪನ ಬೆಟ್ಟದ ಬಳಿ ಹೊಲದಲ್ಲಿ ಬಂಡೆಗಲ್ಲು ಶಾಸನ ಪತ್ತೆಯಾಗಿದೆ.</p>.<p>ನಿಟ್ಟೂರಿನಲ್ಲಿರುವ ಅಶೋಕನ ಶಿಲಾಶಾಸನ ಪತ್ತೆಯಾಗಿರುವ ಸ್ಥಳದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿರುವ ಈ ಬಂಡೆಗಲ್ಲು ಶಾಸನವನ್ನು ಸಂಶೋಧನಾರ್ಥಿಗಳಾದ ಅಶೋಕ್ ಅಬಕಾರಿ, ಮನೋಹರ ಸಿ.ಎಂ ಗುರುತಿಸಿ, ಕ್ಷೇತ್ರ ಅಧ್ಯಯನಕ್ಕೆ ಧಾರವಾಡದ ಲಿಪಿತಜ್ಞ ಮಾರುತಿ ಭಜಂತ್ರಿ ಹಾಗೂ ಹಿರೇಬೆಣಕಲ್ ಮಂಜುನಾಥ ದೊಡ್ಡಮನಿ ಅವರ ಗಮನಕ್ಕೆ ತಂದರು.</p>.<p>ಶಾಸನವು ಬಂಡೆಯೊಂದರ ಮೇಲೆ ಪ್ರಾಚೀನ ಲಿಪಿಯಲ್ಲಿ ಬರೆಯಲ್ಪಟ್ಟಿದ್ದು, ಏಳು ಸಾಲುಗಳಿವೆ. ಮೌರ್ಯರ ಆಳ್ವಿಕೆಯನ್ನು ಒಳಗೊಂಡಿರುವ ಪ್ರದೇಶವೆಂದು ಗುರುತಿಸಲಾಗಿತ್ತು. ಸದ್ಯ ಪತ್ತೆಯಾದ ಶಾಸನದ ಲಿಪಿಯ ಆಧಾರದ ಮೇಲೆ ಇದು ಏಳನೇ ಶತಮಾನ ಬಾದಾಮಿ ಚಾಲುಕ್ಯರ ಕಾಲದಿಂದ ರಾಷ್ಟ್ರಕೂಟರ ಕಾಲಘಟ್ಟಕ್ಕೆ ಸೇರಿದ್ದು ಎಂದು ಅಂದಾಜಿಸಲಾಗಿದೆ.</p>.<p>‘ಇತಿಹಾಸ ಸಂಶೋಧಕ ಗಂಗಾವತಿಯ ಶರಣಬಸಪ್ಪ ಕೋಲ್ಕರ ಮಾರ್ಗದರ್ಶನದಲ್ಲಿ ಶಾಸನದ ಅಧ್ಯಯನ ನಡೆಸುತ್ತಿದ್ದು, ಶಾಸನದ ಕುರಿತು ಶೀಘ್ರವೇ ಮಾಹಿತಿ ಒದಗಿಸಲಾಗುವುದು’ ಎಂದು ಲಿಪಿತಜ್ಞ ಮಾರುತಿ ಭಜಂತ್ರಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-51-1524792715</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೆಕ್ಕಲಕೋಟೆ (ಬಳ್ಳಾರಿ ಜಿಲ್ಲೆ): ನಿಟ್ಟೂರು ಗ್ರಾಮದ ಸುಕ್ರದಪ್ಪನ ಬೆಟ್ಟದ ಬಳಿ ಹೊಲದಲ್ಲಿ ಬಂಡೆಗಲ್ಲು ಶಾಸನ ಪತ್ತೆಯಾಗಿದೆ.</p>.<p>ನಿಟ್ಟೂರಿನಲ್ಲಿರುವ ಅಶೋಕನ ಶಿಲಾಶಾಸನ ಪತ್ತೆಯಾಗಿರುವ ಸ್ಥಳದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿರುವ ಈ ಬಂಡೆಗಲ್ಲು ಶಾಸನವನ್ನು ಸಂಶೋಧನಾರ್ಥಿಗಳಾದ ಅಶೋಕ್ ಅಬಕಾರಿ, ಮನೋಹರ ಸಿ.ಎಂ ಗುರುತಿಸಿ, ಕ್ಷೇತ್ರ ಅಧ್ಯಯನಕ್ಕೆ ಧಾರವಾಡದ ಲಿಪಿತಜ್ಞ ಮಾರುತಿ ಭಜಂತ್ರಿ ಹಾಗೂ ಹಿರೇಬೆಣಕಲ್ ಮಂಜುನಾಥ ದೊಡ್ಡಮನಿ ಅವರ ಗಮನಕ್ಕೆ ತಂದರು.</p>.<p>ಶಾಸನವು ಬಂಡೆಯೊಂದರ ಮೇಲೆ ಪ್ರಾಚೀನ ಲಿಪಿಯಲ್ಲಿ ಬರೆಯಲ್ಪಟ್ಟಿದ್ದು, ಏಳು ಸಾಲುಗಳಿವೆ. ಮೌರ್ಯರ ಆಳ್ವಿಕೆಯನ್ನು ಒಳಗೊಂಡಿರುವ ಪ್ರದೇಶವೆಂದು ಗುರುತಿಸಲಾಗಿತ್ತು. ಸದ್ಯ ಪತ್ತೆಯಾದ ಶಾಸನದ ಲಿಪಿಯ ಆಧಾರದ ಮೇಲೆ ಇದು ಏಳನೇ ಶತಮಾನ ಬಾದಾಮಿ ಚಾಲುಕ್ಯರ ಕಾಲದಿಂದ ರಾಷ್ಟ್ರಕೂಟರ ಕಾಲಘಟ್ಟಕ್ಕೆ ಸೇರಿದ್ದು ಎಂದು ಅಂದಾಜಿಸಲಾಗಿದೆ.</p>.<p>‘ಇತಿಹಾಸ ಸಂಶೋಧಕ ಗಂಗಾವತಿಯ ಶರಣಬಸಪ್ಪ ಕೋಲ್ಕರ ಮಾರ್ಗದರ್ಶನದಲ್ಲಿ ಶಾಸನದ ಅಧ್ಯಯನ ನಡೆಸುತ್ತಿದ್ದು, ಶಾಸನದ ಕುರಿತು ಶೀಘ್ರವೇ ಮಾಹಿತಿ ಒದಗಿಸಲಾಗುವುದು’ ಎಂದು ಲಿಪಿತಜ್ಞ ಮಾರುತಿ ಭಜಂತ್ರಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-51-1524792715</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>