<p>ನ್ಯಾಮತಿ: ಖಾಸಗಿ ಸಂಸ್ಥೆಯವರು ತಮ್ಮ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಸೆಳೆಯಲು ವಿವಿಧ ಮಾರ್ಗಗಳನ್ನು ಅನುಸರಿಸುತ್ತಾರೆ. ಆದರೆ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ (ಕೆಪಿಎಸ್) ಪ್ರೌಢಶಾಲೆ ವಿಭಾಗದ ಎಸ್ಡಿಎಂಸಿ ಸದಸ್ಯರು ಕಸ ಸಂಗ್ರಹ ವಾಹನ ಬಳಸಿಕೊಂಡು ವಿನೂತನ ಪ್ರಯೋಗ ನಡೆಸಿದ್ದಾರೆ.</p>.<p>ಕೆಪಿಎಸ್ ಪ್ರೌಢಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ, ಉತ್ತಮ ಶಿಕ್ಷಕರು, ಕ್ರೀಡಾಂಗಣ ಸೇರಿದಂತೆ ವಿವಿಧ ಸೌಲಭ್ಯಗಳಿವೆ. ಇವು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರಲಿವೆ ಎಂದು ಕಸ ಸಂಗ್ರಹಿಸುವ ವಾಹನದಲ್ಲಿ ಆಡಿಯೊ ಪ್ರಸಾರ ಮಾಡಿ ಪ್ರಚಾರ ಮಾಡಲಾಗುತ್ತಿದೆ.</p>.<p>ವಾಹನದಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಗೀತೆಯ ಜೊತೆಗೆ ಕೆಪಿಎಸ್ ಶಾಲೆಯ ಸೌಲಭ್ಯ, ಮಹತ್ವ ಸಾರುತ್ತಿರುವುದು ಸಾರ್ವಜನಿಕರ ಗಮನ ಸೆಳೆಯುತ್ತಿದೆ.</p>.<p>‘ಶಿಕ್ಷಣ ಇಲಾಖೆ ಕೊಟ್ಟಿರುವ ಆಡಿಯೊ ಬಳಸಿಕೊಂಡು ಪ್ರಚಾರ ಮಾಡುತ್ತಿದ್ದೇವೆ. ಇದರಿಂದ ಪೋಷಕರಿಗೆ ಬೇಗನೆ ಮಾಹಿತಿ ಸಿಗುತ್ತದೆ. ಈ ಕಾರ್ಯಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ಸಾಥ್ ನೀಡಿದ್ದಾರೆ ’ಎಂದು ಎಸ್ಡಿಎಂಸಿ ಕಾರ್ಯಾಧ್ಯಕ್ಷ ಎಂ.ಕರಿಬಸಪ್ಪ, ಉಪಾಧ್ಯಕ್ಷ ಮಧುರಾಜ, ಸದಸ್ಯ ಮಂಜುನಾಥ, ಪ್ರಭಾರ ಕಂದಾಯ ಅಧಿಕಾರಿ ಮನು ಆಚಾರ್ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-43-50772348</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನ್ಯಾಮತಿ: ಖಾಸಗಿ ಸಂಸ್ಥೆಯವರು ತಮ್ಮ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಸೆಳೆಯಲು ವಿವಿಧ ಮಾರ್ಗಗಳನ್ನು ಅನುಸರಿಸುತ್ತಾರೆ. ಆದರೆ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ (ಕೆಪಿಎಸ್) ಪ್ರೌಢಶಾಲೆ ವಿಭಾಗದ ಎಸ್ಡಿಎಂಸಿ ಸದಸ್ಯರು ಕಸ ಸಂಗ್ರಹ ವಾಹನ ಬಳಸಿಕೊಂಡು ವಿನೂತನ ಪ್ರಯೋಗ ನಡೆಸಿದ್ದಾರೆ.</p>.<p>ಕೆಪಿಎಸ್ ಪ್ರೌಢಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ, ಉತ್ತಮ ಶಿಕ್ಷಕರು, ಕ್ರೀಡಾಂಗಣ ಸೇರಿದಂತೆ ವಿವಿಧ ಸೌಲಭ್ಯಗಳಿವೆ. ಇವು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರಲಿವೆ ಎಂದು ಕಸ ಸಂಗ್ರಹಿಸುವ ವಾಹನದಲ್ಲಿ ಆಡಿಯೊ ಪ್ರಸಾರ ಮಾಡಿ ಪ್ರಚಾರ ಮಾಡಲಾಗುತ್ತಿದೆ.</p>.<p>ವಾಹನದಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಗೀತೆಯ ಜೊತೆಗೆ ಕೆಪಿಎಸ್ ಶಾಲೆಯ ಸೌಲಭ್ಯ, ಮಹತ್ವ ಸಾರುತ್ತಿರುವುದು ಸಾರ್ವಜನಿಕರ ಗಮನ ಸೆಳೆಯುತ್ತಿದೆ.</p>.<p>‘ಶಿಕ್ಷಣ ಇಲಾಖೆ ಕೊಟ್ಟಿರುವ ಆಡಿಯೊ ಬಳಸಿಕೊಂಡು ಪ್ರಚಾರ ಮಾಡುತ್ತಿದ್ದೇವೆ. ಇದರಿಂದ ಪೋಷಕರಿಗೆ ಬೇಗನೆ ಮಾಹಿತಿ ಸಿಗುತ್ತದೆ. ಈ ಕಾರ್ಯಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ಸಾಥ್ ನೀಡಿದ್ದಾರೆ ’ಎಂದು ಎಸ್ಡಿಎಂಸಿ ಕಾರ್ಯಾಧ್ಯಕ್ಷ ಎಂ.ಕರಿಬಸಪ್ಪ, ಉಪಾಧ್ಯಕ್ಷ ಮಧುರಾಜ, ಸದಸ್ಯ ಮಂಜುನಾಥ, ಪ್ರಭಾರ ಕಂದಾಯ ಅಧಿಕಾರಿ ಮನು ಆಚಾರ್ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-43-50772348</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>