<p>ಪಟ್ಟನಾಯಕನಹಳ್ಳಿ (ಶಿರಾ): ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಹಳೆ ನೆನಪುಗಳನ್ನು ಜೀವಂತಗೊಳಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ಪ್ರೇರಣೆಯಾಗುತ್ತದೆ ಎಂದು ನಿವೃತ್ತ ಶಿಕ್ಷಕ ಎಲ್.ಜಿ.ದಿಬ್ಬಯ್ಯ ಹೇಳಿದರು.</p>.<p>ತಾಲ್ಲೂಕಿನ ಪಟ್ಟನಾಯಕನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 2007-08ನೇ ಎಸ್ಎಸ್ಎಲ್ಸಿ ಸಾಲಿನ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ತಾನು ಕಲಿತ ಶಾಲೆ ಅಭಿವೃದ್ಧಿಗೆ ಸಹಕಾರ ನೀಡಿ ಕೃತಜ್ಞತಾ ಮನೋಭಾವ ಮೆರೆಯಬೇಕು ಎಂದರು.</p>.<p>ಹಳೆಯ ವಿದ್ಯಾರ್ಥಿ ಕೀರ್ತಿ ಗೌಡ ಮಾತನಾಡಿ, ಶಾಲೆಯಿಂದ ಕಲಿತ ಶಿಕ್ಷಣ ಮತ್ತು ಮೌಲ್ಯ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.</p>.<p>ಶಿಕ್ಷಕರಾದ ನರಸಿಂಹಯ್ಯ, ಇಂದಿರಮ್ಮ, ದಿವ್ಯ, ಸವಿತ, ಬಸವರಾಜು, ಜಯರಾಮು ಮತ್ತು ಹಳೆಯ ವಿದ್ಯಾರ್ಥಿಗಳಾದ ಶ್ರೀನಿವಾಸ್, ಫರೀದಾ, ಮಾರುತಿ, ವಸಂತ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-17-2000363201</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಟ್ಟನಾಯಕನಹಳ್ಳಿ (ಶಿರಾ): ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಹಳೆ ನೆನಪುಗಳನ್ನು ಜೀವಂತಗೊಳಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ಪ್ರೇರಣೆಯಾಗುತ್ತದೆ ಎಂದು ನಿವೃತ್ತ ಶಿಕ್ಷಕ ಎಲ್.ಜಿ.ದಿಬ್ಬಯ್ಯ ಹೇಳಿದರು.</p>.<p>ತಾಲ್ಲೂಕಿನ ಪಟ್ಟನಾಯಕನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 2007-08ನೇ ಎಸ್ಎಸ್ಎಲ್ಸಿ ಸಾಲಿನ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ತಾನು ಕಲಿತ ಶಾಲೆ ಅಭಿವೃದ್ಧಿಗೆ ಸಹಕಾರ ನೀಡಿ ಕೃತಜ್ಞತಾ ಮನೋಭಾವ ಮೆರೆಯಬೇಕು ಎಂದರು.</p>.<p>ಹಳೆಯ ವಿದ್ಯಾರ್ಥಿ ಕೀರ್ತಿ ಗೌಡ ಮಾತನಾಡಿ, ಶಾಲೆಯಿಂದ ಕಲಿತ ಶಿಕ್ಷಣ ಮತ್ತು ಮೌಲ್ಯ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.</p>.<p>ಶಿಕ್ಷಕರಾದ ನರಸಿಂಹಯ್ಯ, ಇಂದಿರಮ್ಮ, ದಿವ್ಯ, ಸವಿತ, ಬಸವರಾಜು, ಜಯರಾಮು ಮತ್ತು ಹಳೆಯ ವಿದ್ಯಾರ್ಥಿಗಳಾದ ಶ್ರೀನಿವಾಸ್, ಫರೀದಾ, ಮಾರುತಿ, ವಸಂತ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-17-2000363201</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>