<p>ಪಾವಗಡ: ಹಸಿರು ಕ್ರಾಂತಿಯ ಹರಿಕಾರರಾಗಿ, ದೇಶದ ಉಪಪ್ರಧಾನಿಯಾಗಿ ಬಾಬು ಜಗಜೀವರಾಂ ಸೇವೆ ಸ್ಮರಣೀಯ ಎಂದು ತಹಶೀಲ್ದಾರ್ ವೈ. ರವಿ ತಿಳಿಸಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಭಾನುವಾರ ನಡೆದ ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜಗಜೀವನರಾಂ ದೇಶದ ದಮನಿತರಿಗಾಗಿ, ಸಮಾನತೆಗಾಗಿ ಶ್ರಮಿಸಿದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅವರು ಸಮಾಜ ಸುಧಾರಕರಾಗಿ ದೇಶಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ ಎಂದರು.</p>.<p>ಬಿಆರ್ಸಿಜಿ ವೆಂಕಟೇಶ್, ಜಗಜೀವನ್ ರಾಂ ಕೇವಲ ರಾಜಕಾರಣಿಯಾಗಿರಲಿಲ್ಲ, ಜವಾಹರಲಾಲ್ ನೆಹರೂ ಅವರ ಮೊದಲ ಸಂಪುಟದ ಸದಸ್ಯರಾಗಿದ್ದ ಅವರು ಅತ್ಯಂತ ಕಿರಿಯ ಸಚಿವರಾಗಿದ್ದರು. ಸಂವಿಧಾನ ಸಭೆಯ ಸದಸ್ಯರಾಗಿದ್ದರು. ಸಾಮಾಜಿಕ ನ್ಯಾಯದ ತತ್ವಗಳಿಗಾಗಿ ಶ್ರಮಿಸಿದ ಮಹನೀಯರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕುಮಾರ್, ನಾಗರಾಜು, ಅಧಿಕಾರಿಗಳು, ಇಸಿಒ ವೇಣುಗೋಪಾಲ್, ಕಂದಾಯ ನಿರೀಕ್ಷಕ ರಾಜಗೋಪಾಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-17-755367914</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾವಗಡ: ಹಸಿರು ಕ್ರಾಂತಿಯ ಹರಿಕಾರರಾಗಿ, ದೇಶದ ಉಪಪ್ರಧಾನಿಯಾಗಿ ಬಾಬು ಜಗಜೀವರಾಂ ಸೇವೆ ಸ್ಮರಣೀಯ ಎಂದು ತಹಶೀಲ್ದಾರ್ ವೈ. ರವಿ ತಿಳಿಸಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಭಾನುವಾರ ನಡೆದ ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜಗಜೀವನರಾಂ ದೇಶದ ದಮನಿತರಿಗಾಗಿ, ಸಮಾನತೆಗಾಗಿ ಶ್ರಮಿಸಿದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅವರು ಸಮಾಜ ಸುಧಾರಕರಾಗಿ ದೇಶಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ ಎಂದರು.</p>.<p>ಬಿಆರ್ಸಿಜಿ ವೆಂಕಟೇಶ್, ಜಗಜೀವನ್ ರಾಂ ಕೇವಲ ರಾಜಕಾರಣಿಯಾಗಿರಲಿಲ್ಲ, ಜವಾಹರಲಾಲ್ ನೆಹರೂ ಅವರ ಮೊದಲ ಸಂಪುಟದ ಸದಸ್ಯರಾಗಿದ್ದ ಅವರು ಅತ್ಯಂತ ಕಿರಿಯ ಸಚಿವರಾಗಿದ್ದರು. ಸಂವಿಧಾನ ಸಭೆಯ ಸದಸ್ಯರಾಗಿದ್ದರು. ಸಾಮಾಜಿಕ ನ್ಯಾಯದ ತತ್ವಗಳಿಗಾಗಿ ಶ್ರಮಿಸಿದ ಮಹನೀಯರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕುಮಾರ್, ನಾಗರಾಜು, ಅಧಿಕಾರಿಗಳು, ಇಸಿಒ ವೇಣುಗೋಪಾಲ್, ಕಂದಾಯ ನಿರೀಕ್ಷಕ ರಾಜಗೋಪಾಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-17-755367914</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>