<p>ಪೀಣ್ಯ ದಾಸರಹಳ್ಳಿ: ‘ಇತರರ ಸಾಧನೆ ಕಂಡು ಅಸೂಯೆ ಪಡದೆ ಅವರಂತೆ ನಾವೂ ಹೆಚ್ಚು ಅಂಕ ಪಡೆದು ಸಮಾಜಕ್ಕೆ ಕೀರ್ತಿ ತರಬೇಕು’ ಎಂದು ಸೋಮನಹಳ್ಳಿ ಎಜುಕೇಷನಲ್ ಸೊಸೈಟಿ ಅಧ್ಯಕ್ಷ ಆನಂದ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಭುವನೇಶ್ವರಿ ನಗರದ ಮಾಸ್ಟರ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ದ್ವಿತೀಯ ಪಿಯುನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ರೈತರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಪೋಷಕರು ತಮ್ಮ ಮಕ್ಕಳನ್ನು ಸ್ನೇಹಿತರಂತೆ ಭಾವಿಸಿ ಅವರಿಗೆ ಕಾಲೇಜಿನಲ್ಲಿ ನಡೆದ ಪಾಠ–ಪ್ರವಚನದ ಬಗ್ಗೆ ವಿಚಾರಿಸಬೇಕು. ಅವರ ವಿದ್ಯಾ ಭ್ಯಾಸದ ಮೇಲೆ ಗಮನ ಹರಿಸಬೇಕು’ ಎಂದರು.</p>.<p>ಪ್ರಾಂಶುಪಾಲ ಕೆ.ಎಸ್. ಮಲ್ಲಿಕಾರ್ಜುನ ಎಸ್. ಮಾತನಾಡಿ, ‘ರೈತರ ಶ್ರಮ ವಿದ್ಯಾರ್ಥಿಗಳಿಗೆ ಅರಿವಾಗಲಿ, ಹಾಗೆಯೇ ಅವರಿಗೆ ಗೌರವ ಕೊಡುವುದನ್ನು ಕಲಿಯಲಿ’ ಎಂದು ತಿಳಿಸಿದರು.</p>.<p>ರೈತ ಪಾಪಣ್ಣ ಮಾತನಾಡಿ, ‘ನಮಗೆ ಅಭಿನಂದಿಸಿರುವುದು ಹೆಮ್ಮೆಯ ಸಂಗತಿ. ಯಾರೊಬ್ಬರೂ ರೈತರ ಬಗ್ಗೆ ಗಮನ ಹರಿಸುತ್ತಿರಲಿಲ್ಲ. ಇದು ಎಲ್ಲರಿಗೂ ಮಾದರಿಯಾಗಲಿ’ ಎಂದರು. ಶೇ 95ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ತಲಾ ₹10 ಸಾವಿರ ನಗದು, ಪದಕ ನೀಡಿ ಸನ್ಮಾನಿಸ ಲಾಯಿತು. ಎನ್.ಜಿ. ಗಂಗಣ್ಣ, ಪಾಪಣ್ಣ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-4-1265982539</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪೀಣ್ಯ ದಾಸರಹಳ್ಳಿ: ‘ಇತರರ ಸಾಧನೆ ಕಂಡು ಅಸೂಯೆ ಪಡದೆ ಅವರಂತೆ ನಾವೂ ಹೆಚ್ಚು ಅಂಕ ಪಡೆದು ಸಮಾಜಕ್ಕೆ ಕೀರ್ತಿ ತರಬೇಕು’ ಎಂದು ಸೋಮನಹಳ್ಳಿ ಎಜುಕೇಷನಲ್ ಸೊಸೈಟಿ ಅಧ್ಯಕ್ಷ ಆನಂದ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಭುವನೇಶ್ವರಿ ನಗರದ ಮಾಸ್ಟರ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ದ್ವಿತೀಯ ಪಿಯುನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ರೈತರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಪೋಷಕರು ತಮ್ಮ ಮಕ್ಕಳನ್ನು ಸ್ನೇಹಿತರಂತೆ ಭಾವಿಸಿ ಅವರಿಗೆ ಕಾಲೇಜಿನಲ್ಲಿ ನಡೆದ ಪಾಠ–ಪ್ರವಚನದ ಬಗ್ಗೆ ವಿಚಾರಿಸಬೇಕು. ಅವರ ವಿದ್ಯಾ ಭ್ಯಾಸದ ಮೇಲೆ ಗಮನ ಹರಿಸಬೇಕು’ ಎಂದರು.</p>.<p>ಪ್ರಾಂಶುಪಾಲ ಕೆ.ಎಸ್. ಮಲ್ಲಿಕಾರ್ಜುನ ಎಸ್. ಮಾತನಾಡಿ, ‘ರೈತರ ಶ್ರಮ ವಿದ್ಯಾರ್ಥಿಗಳಿಗೆ ಅರಿವಾಗಲಿ, ಹಾಗೆಯೇ ಅವರಿಗೆ ಗೌರವ ಕೊಡುವುದನ್ನು ಕಲಿಯಲಿ’ ಎಂದು ತಿಳಿಸಿದರು.</p>.<p>ರೈತ ಪಾಪಣ್ಣ ಮಾತನಾಡಿ, ‘ನಮಗೆ ಅಭಿನಂದಿಸಿರುವುದು ಹೆಮ್ಮೆಯ ಸಂಗತಿ. ಯಾರೊಬ್ಬರೂ ರೈತರ ಬಗ್ಗೆ ಗಮನ ಹರಿಸುತ್ತಿರಲಿಲ್ಲ. ಇದು ಎಲ್ಲರಿಗೂ ಮಾದರಿಯಾಗಲಿ’ ಎಂದರು. ಶೇ 95ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ತಲಾ ₹10 ಸಾವಿರ ನಗದು, ಪದಕ ನೀಡಿ ಸನ್ಮಾನಿಸ ಲಾಯಿತು. ಎನ್.ಜಿ. ಗಂಗಣ್ಣ, ಪಾಪಣ್ಣ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-4-1265982539</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>