'ಪ್ರಜಾವಾಣಿ' ಪಾಲಿಗಿದು ಅಮೃತ ಮಹೋತ್ಸವದ ವರ್ಷ. 75 ವರ್ಷಗಳ ಹಾದಿಯಲ್ಲಿ ಜನಮುಖಿಯಾಗಿರುವ ಪತ್ರಿಕೆ, ನಮ್ಮ ನಡುವಿನ ಪ್ರತಿಭಾವಂತರನ್ನು ಗುರುತಿಸುವ ಕೆಲಸವನ್ನೂ ಲಾಗಾಯ್ತಿನಿಂದ ಮಾಡುತ್ತಾ ಬಂದಿದೆ. 2020ರಿಂದ ಪ್ರತಿವರ್ಷ ಆಯಾ ಇಸವಿಯ ಕೊನೆಯ ಎರಡು ಅಂಕಿಗಳಿಗೆ ಹೊಂದುವಷ್ಟು ಸಂಖ್ಯೆಯ ಸಾಧಕರನ್ನು ಆಯ್ಕೆ ಮಾಡಿ, ಸನ್ಮಾನಿಸುತ್ತಿರುವುದೇ ಇದಕ್ಕೆ ಸಾಕ್ಷಿ. ಶಿಕ್ಷಣ, ಸಮಾಜಸೇವೆ, ವಿಜ್ಞಾನ, ಕ್ರೀಡೆ, ಸಾಹಿತ್ಯ–ಕಲೆ–ಮನರಂಜನೆ, ಪರಿಸರ, ಉದ್ಯಮ, ಸಂಶೋಧನೆ, ಆಡಳಿತ, ಕನ್ನಡ ಕೈಂಕರ್ಯ ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮಷ್ಟಕ್ಕೆ ತಾವು ಮುಗುಮ್ಮಾಗಿ ಸೇವೆ ಸಲ್ಲಿಸುತ್ತಿರುವವರನ್ನು 23 ಸಾಧಕರನ್ನು 2023ರ ಹೊಸವರ್ಷಕ್ಕೆ ಸಾಂಕೇತಿಕವಾಗಿ ಮಾಡಲಾಗಿದೆ. ಸಾಧಕರ ಕಿರು ಪರಿಚಯವನ್ನು ಇಲ್ಲಿ ನೀಡಲಾಗಿದ್ದು, ಅವರ ಹೆಜ್ಜೆಗುರುತುಗಳು ಈ ಅಕ್ಷರಚೌಕಟ್ಟನ್ನೂ ಮೀರಿದ್ದು. ಹೊಸ ವರ್ಷವನ್ನು ಈ ಸಾಧಕರೊಟ್ಟಿಗೆ ಬರಮಾಡಿಕೊಳ್ಳುವುದಕ್ಕೆ ಪತ್ರಿಕಾ ಬಳಗ ಹರ್ಷಿಸುತ್ತದೆ.