<p><strong>ಬೆಂಗಳೂರು:</strong> ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾ.28ರಿಂದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿರುವ ಪಿಯು ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರು, 2020ನೇ ಸಾಲಿನ ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.</p>.<p>ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕ ಸಂಘವು ಭಾನುವಾರ ಸಭೆ ನಡೆಸಿ ಈ ನಿರ್ಣಯ ತೆಗೆದುಕೊಂಡಿದೆ.</p>.<p>‘ವಿವಿಧ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯಲು ನಾಲ್ಕು ಹಂತದ ಹೋರಾಟ ಮಾಡಿದ್ದೇವೆ. ಆದರೂ ಬೇಡಿಕೆಗಳು ಈಡೇರಿಲ್ಲ’ ಎಂದೂ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.</p>.<p><strong>ಬೇಡಿಕೆಗಳೇನು ?</strong></p>.<p>* ಪದವಿಪೂರ್ವ ಕಾಲೇಜುಗಳ ವೇತನ ತಾರತಮ್ಯ ಸರಿಪಡಿಸುವ ಸಂಬಂಧ ಕುಮಾರ್ನಾಯಕ್ ಸಮಿತಿ ನೀಡಿದ್ದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು</p>.<p>* ₹500 ವಿಶೇಷ ಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸಬೇಕು</p>.<p>* ಕಾಲಮಿತಿ ಬಡ್ತಿಯನ್ನು ಮಂಜೂರು ಮಾಡಬೇಕು</p>.<p>* ನೆಟ್, ಸ್ಲೆಟ್, ಪಿಎಚ್.ಡಿ ವಿದ್ಯಾರ್ಹತೆ ಹೊಂದಿರುವ ಉಪನ್ಯಾಸಕರಿಗೆ ಪದವಿ ಕಾಲೇಜಿಗೆ ಬಡ್ತಿ ನೀಡಬೇಕು</p>.<p>* ಮೌಲ್ಯಮಾಪನ ಸಂಭಾವನೆಯನ್ನು ಕೆ–2 ಬದಲು, ಚೆಕ್ ಮೂಲಕ ವಿತರಿಸಬೇಕು</p>.<p>* ನೇರ ನೇಮಕಾತಿ ಮತ್ತು ಪದೋನ್ನತಿಯ ಮೂಲಕ ಶೀಘ್ರವೇ ಉಪನ್ಯಾಸಕರನ್ನು ಪ್ರಾಂಶುಪಾಲರನ್ನಾಗಿ ನೇಮಿಸಬೇಕು</p>.<p>* ಪ್ರತಿ ಉಪನ್ಯಾಸಕರಿಗೆ ವಾರದಲ್ಲಿ 16 ಗಂಟೆಗಳ ಬೋಧನಾ ಅವಧಿ ಮುಂದುವರಿಸಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾ.28ರಿಂದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿರುವ ಪಿಯು ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರು, 2020ನೇ ಸಾಲಿನ ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.</p>.<p>ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕ ಸಂಘವು ಭಾನುವಾರ ಸಭೆ ನಡೆಸಿ ಈ ನಿರ್ಣಯ ತೆಗೆದುಕೊಂಡಿದೆ.</p>.<p>‘ವಿವಿಧ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯಲು ನಾಲ್ಕು ಹಂತದ ಹೋರಾಟ ಮಾಡಿದ್ದೇವೆ. ಆದರೂ ಬೇಡಿಕೆಗಳು ಈಡೇರಿಲ್ಲ’ ಎಂದೂ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.</p>.<p><strong>ಬೇಡಿಕೆಗಳೇನು ?</strong></p>.<p>* ಪದವಿಪೂರ್ವ ಕಾಲೇಜುಗಳ ವೇತನ ತಾರತಮ್ಯ ಸರಿಪಡಿಸುವ ಸಂಬಂಧ ಕುಮಾರ್ನಾಯಕ್ ಸಮಿತಿ ನೀಡಿದ್ದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು</p>.<p>* ₹500 ವಿಶೇಷ ಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸಬೇಕು</p>.<p>* ಕಾಲಮಿತಿ ಬಡ್ತಿಯನ್ನು ಮಂಜೂರು ಮಾಡಬೇಕು</p>.<p>* ನೆಟ್, ಸ್ಲೆಟ್, ಪಿಎಚ್.ಡಿ ವಿದ್ಯಾರ್ಹತೆ ಹೊಂದಿರುವ ಉಪನ್ಯಾಸಕರಿಗೆ ಪದವಿ ಕಾಲೇಜಿಗೆ ಬಡ್ತಿ ನೀಡಬೇಕು</p>.<p>* ಮೌಲ್ಯಮಾಪನ ಸಂಭಾವನೆಯನ್ನು ಕೆ–2 ಬದಲು, ಚೆಕ್ ಮೂಲಕ ವಿತರಿಸಬೇಕು</p>.<p>* ನೇರ ನೇಮಕಾತಿ ಮತ್ತು ಪದೋನ್ನತಿಯ ಮೂಲಕ ಶೀಘ್ರವೇ ಉಪನ್ಯಾಸಕರನ್ನು ಪ್ರಾಂಶುಪಾಲರನ್ನಾಗಿ ನೇಮಿಸಬೇಕು</p>.<p>* ಪ್ರತಿ ಉಪನ್ಯಾಸಕರಿಗೆ ವಾರದಲ್ಲಿ 16 ಗಂಟೆಗಳ ಬೋಧನಾ ಅವಧಿ ಮುಂದುವರಿಸಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>