<p>ಪುತ್ತೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಪುತ್ತೂರು ತಾಲ್ಲೂಕು ಮಟ್ಟದಲ್ಲಿ ದಾಖಲಾತಿ ಆಂದೋಲನ ಆಯೋಜಿಸಲಾಗುತ್ತಿದ್ದು, ತಾಲ್ಲೂಕಿನಲ್ಲಿ ಕಳೆದ ವರ್ಷಕ್ಕಿಂತ ಶೇ 5ರಷ್ಟು ಹೆಚ್ಚು ದಾಖಲಾತಿ ಗುರಿ ಹೊಂದಲಾಗಿದೆ ಎಂದು ಪುತ್ತೂರು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ. ತಿಳಿಸಿದರು.</p>.<p>ಪುತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರಿ ಶಾಲೆಗಳಲ್ಲಿ ಸಿಗುವ ಗುಣಮಟ್ಟದ ಶಿಕ್ಷಣದ ಜತೆಗೆ ವಿವಿಧ ಸವಲತ್ತುಗಳ ಕುರಿತು ಪೋಷಕರ ಮನವೊಲಿಸಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದರು.</p>.<p>ರಾಜ್ಯದ 15 ಜಿಲ್ಲೆಗಳಲ್ಲಿ ದ್ವಿಭಾಷಾ ಬೋಧನಾ ಕಲಿಕೆಯನ್ನು ಸರ್ಕಾರ ಜಾರಿ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಬೋಧನೆ ಅನುಷ್ಠಾನಗೊಳ್ಳಲಿದೆ. ಈ ಬಾರಿ ಅವಿಭಜಿತ ಪುತ್ತೂರು ತಾಲ್ಲೂಕಿನಲ್ಲಿ ಎಸ್ಎಸ್ಎಲ್ಸಿಯಲ್ಲಿ ಶೇ 98.58 ಫಲಿತಾಂಶ ಬಂದಿದೆ. ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳ ಫಲಿತಾಂಶ ಶೇ 96 ಆಗಿದ್ದು, 23 ಶಾಲೆಗಳ ಪೈಕಿ 14 ಸರ್ಕಾರಿ ಶಾಲೆಗಳು ಶೇ 100 ಫಲಿತಾಂಶ ದಾಖಲಿಸಿವೆ ಎಂದು ಹೇಳಿದರು.</p>.<p>ಅವಿಭಜಿತ ತಾಲ್ಲೂಕಿನ 23 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ– ಯುಕೆಜಿ ತರಗತಿ ನಡೆಸಲಾಗುತ್ತಿದ್ದು, 2 ಕೆಪಿಎಸ್ ಶಾಲೆಗಳು, 3 ಪಿಎಂಶ್ರೀ ಶಾಲೆಗಳು ಕಾರ್ಯಾಚರಿಸುತ್ತಿವೆ. 210 ಶಿಕ್ಷಕರ ಕೊರತೆ ಇದ್ದು, ಅದನ್ನು ಜೂನ್ ಪ್ರಾರಂಭದಲ್ಲೇ ಅತಿಥಿ ಶಿಕ್ಷಕರ ನೇಮಕದ ಮೂಲಕ ಭರ್ತಿ ಮಾಡಲಾಗುತ್ತದೆ. ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿಗೆ ಸಂಬಂಧಿಸಿ ₹90 ಲಕ್ಷದ ಕ್ರಿಯಾಯೋಜನೆ ಕಳುಹಿಸಲಾಗಿದ್ದು, 52 ಕೊಠಡಿಗಳ ದುರಸ್ತಿಯ ಬೇಡಿಕೆ ಇದೆ ಎಂದು ಅವರು ತಿಳಿಸಿದರು.</p>.<p>ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ಸ್ಟೀಫನ್, ಪ್ರಭಾರ ದೈಹಿಕ ಶಿಕ್ಷಣ ಪರಿವೀಕ್ಷಕ ಚಕ್ರಪಾಣಿ ಎ.ವಿ., ಶಿಕ್ಷಣ ಸಂಯೋಜಕ ಹರಿಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-29-1439583534</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಪುತ್ತೂರು ತಾಲ್ಲೂಕು ಮಟ್ಟದಲ್ಲಿ ದಾಖಲಾತಿ ಆಂದೋಲನ ಆಯೋಜಿಸಲಾಗುತ್ತಿದ್ದು, ತಾಲ್ಲೂಕಿನಲ್ಲಿ ಕಳೆದ ವರ್ಷಕ್ಕಿಂತ ಶೇ 5ರಷ್ಟು ಹೆಚ್ಚು ದಾಖಲಾತಿ ಗುರಿ ಹೊಂದಲಾಗಿದೆ ಎಂದು ಪುತ್ತೂರು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ. ತಿಳಿಸಿದರು.</p>.<p>ಪುತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರಿ ಶಾಲೆಗಳಲ್ಲಿ ಸಿಗುವ ಗುಣಮಟ್ಟದ ಶಿಕ್ಷಣದ ಜತೆಗೆ ವಿವಿಧ ಸವಲತ್ತುಗಳ ಕುರಿತು ಪೋಷಕರ ಮನವೊಲಿಸಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದರು.</p>.<p>ರಾಜ್ಯದ 15 ಜಿಲ್ಲೆಗಳಲ್ಲಿ ದ್ವಿಭಾಷಾ ಬೋಧನಾ ಕಲಿಕೆಯನ್ನು ಸರ್ಕಾರ ಜಾರಿ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಬೋಧನೆ ಅನುಷ್ಠಾನಗೊಳ್ಳಲಿದೆ. ಈ ಬಾರಿ ಅವಿಭಜಿತ ಪುತ್ತೂರು ತಾಲ್ಲೂಕಿನಲ್ಲಿ ಎಸ್ಎಸ್ಎಲ್ಸಿಯಲ್ಲಿ ಶೇ 98.58 ಫಲಿತಾಂಶ ಬಂದಿದೆ. ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳ ಫಲಿತಾಂಶ ಶೇ 96 ಆಗಿದ್ದು, 23 ಶಾಲೆಗಳ ಪೈಕಿ 14 ಸರ್ಕಾರಿ ಶಾಲೆಗಳು ಶೇ 100 ಫಲಿತಾಂಶ ದಾಖಲಿಸಿವೆ ಎಂದು ಹೇಳಿದರು.</p>.<p>ಅವಿಭಜಿತ ತಾಲ್ಲೂಕಿನ 23 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ– ಯುಕೆಜಿ ತರಗತಿ ನಡೆಸಲಾಗುತ್ತಿದ್ದು, 2 ಕೆಪಿಎಸ್ ಶಾಲೆಗಳು, 3 ಪಿಎಂಶ್ರೀ ಶಾಲೆಗಳು ಕಾರ್ಯಾಚರಿಸುತ್ತಿವೆ. 210 ಶಿಕ್ಷಕರ ಕೊರತೆ ಇದ್ದು, ಅದನ್ನು ಜೂನ್ ಪ್ರಾರಂಭದಲ್ಲೇ ಅತಿಥಿ ಶಿಕ್ಷಕರ ನೇಮಕದ ಮೂಲಕ ಭರ್ತಿ ಮಾಡಲಾಗುತ್ತದೆ. ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿಗೆ ಸಂಬಂಧಿಸಿ ₹90 ಲಕ್ಷದ ಕ್ರಿಯಾಯೋಜನೆ ಕಳುಹಿಸಲಾಗಿದ್ದು, 52 ಕೊಠಡಿಗಳ ದುರಸ್ತಿಯ ಬೇಡಿಕೆ ಇದೆ ಎಂದು ಅವರು ತಿಳಿಸಿದರು.</p>.<p>ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ಸ್ಟೀಫನ್, ಪ್ರಭಾರ ದೈಹಿಕ ಶಿಕ್ಷಣ ಪರಿವೀಕ್ಷಕ ಚಕ್ರಪಾಣಿ ಎ.ವಿ., ಶಿಕ್ಷಣ ಸಂಯೋಜಕ ಹರಿಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-29-1439583534</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>