<p>ಪುತ್ತೂರು: ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಿದಾಗ ಅವರ ಪೋಷಕರಿಗೆ ಎಲ್ಲರಿಗಿಂತ ಹೆಚ್ಚು ಸಂತೋಷವಾಗುತ್ತದೆ. ನಾವು ಸಾಧಕರನ್ನು ಸನ್ಮಾನಿಸುವುದರಿಂದ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗುತ್ತದೆ. ಸಾಧನೆ ಮಾಡಬೇಕಾದರೆ ಸರಿಯಾದ ಮಾರ್ಗದರ್ಶನ, ಪ್ರೋತ್ಸಾಹ ಅಗತ್ಯ ಎಂದು ಕೆನರಾ ಕಾಲೇಜಿನ ಸಂಚಾಲಕ ಜಗನ್ನಾಥ್ ಕಾಮತ್ ಹೇಳಿದರು.</p>.<p>ಪುತ್ತೂರಿನ ಸೇಂಟ್ ಫಿಲೋಮಿನಾ ಸ್ವಾಯತ್ತ ಕಾಲೇಜಿನ ರಜತ ಮಹೋತ್ಸವ ಸಭಾಂಗಣದಲ್ಲಿ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಫಾ.ಲಾರೆನ್ಸ್ ಮಸ್ಕರೇನ್ಹಸ್ ಅವರು, ಅವಕಾಶಗಳು ಎಲ್ಲರಿಗೂ ಸಿಗುತ್ತವೆ. ಇಂದು ಹಿಂದೆಂದಿಗಿಂತಲೂ ಹೆಚ್ಚು ಅವಕಾಶಗಳು ಲಭ್ಯವಿದೆ. ಆದರೆ, ನಾವು ಅದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ. ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವುದು ನಮ್ಮ ಕೈಯಲ್ಲಿದೆ ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ಫಾ.ಆ್ಯಂಟನಿ ಪ್ರಕಾಶ್ ಮೊಂತೆರೊ ಮಾತನಾಡಿದರು.</p>.<p>ಮಂಗಳೂರು ವಿಶ್ವವಿದ್ಯಾನಿಲಯವು 2024-25ನೇ ಸಾಲಿನಲ್ಲಿ ನಡೆಸಿದ ಪದವಿ ಪರೀಕ್ಷೆಗಳಲ್ಲಿ ಎಂಎಸ್ಸಿ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದ ಶ್ರೀದೇವಿ, ಮತ್ತು 4ನೇ ರ್ಯಾಂಕ್ ಗಳಿಸಿರುವ ಆಯಿಷತ್ ಸಮ ಅವರನ್ನು ಗೌರವಿಸಲಾಯಿತು.</p>.<p>ಬಿಎ ವಿಭಾಗದಲ್ಲಿ 8ನೇ ರ್ಯಾಂಕ್ ಪಡೆದ ಮಾದ್ರಿ ಅರ್ಚನಾ ಮತ್ತು ಬಿಬಿಎ ವಿಭಾಗದಲ್ಲಿ 10ನೇ ರ್ಯಾಂಕ್ ಗಳಿಸಿದ ಶಾಯಿರಿನ್ ಬಾನು ಅವರನ್ನು ಅಭಿನಂದಿಸಲಾಯಿತು. ವಿಜ್ಞಾನ ವಿಭಾಗದ ಮುಖ್ಯಸ್ಥೆ ಮಾಲಿನಿ, ಉಪನ್ಯಾಸಕರಾದ ಪ್ರಶಾಂತ್ ರೈ ಸಾಧಕರನ್ನು ಪರಿಚಯಿಸಿದರು.</p>.<p>ಬಿಎ ವಿಭಾಗದ ಮುಖ್ಯಸ್ಥ ನೋರ್ಬರ್ಟ್ ಮಸ್ಕರೇನ್ಹಸ್ ಇದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಾಧಾಕೃಷ್ಣ ಗೌಡ ಸ್ವಾಗತಿಸಿದರು. ಸ್ಪರ್ಲ್ ಫಿಯೋನಾ ಪಿರೇರಾ ವಂದಿಸಿದರು. ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಶ್ರೀವಿದ್ಯಾ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-29-1710110934</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಿದಾಗ ಅವರ ಪೋಷಕರಿಗೆ ಎಲ್ಲರಿಗಿಂತ ಹೆಚ್ಚು ಸಂತೋಷವಾಗುತ್ತದೆ. ನಾವು ಸಾಧಕರನ್ನು ಸನ್ಮಾನಿಸುವುದರಿಂದ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗುತ್ತದೆ. ಸಾಧನೆ ಮಾಡಬೇಕಾದರೆ ಸರಿಯಾದ ಮಾರ್ಗದರ್ಶನ, ಪ್ರೋತ್ಸಾಹ ಅಗತ್ಯ ಎಂದು ಕೆನರಾ ಕಾಲೇಜಿನ ಸಂಚಾಲಕ ಜಗನ್ನಾಥ್ ಕಾಮತ್ ಹೇಳಿದರು.</p>.<p>ಪುತ್ತೂರಿನ ಸೇಂಟ್ ಫಿಲೋಮಿನಾ ಸ್ವಾಯತ್ತ ಕಾಲೇಜಿನ ರಜತ ಮಹೋತ್ಸವ ಸಭಾಂಗಣದಲ್ಲಿ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಫಾ.ಲಾರೆನ್ಸ್ ಮಸ್ಕರೇನ್ಹಸ್ ಅವರು, ಅವಕಾಶಗಳು ಎಲ್ಲರಿಗೂ ಸಿಗುತ್ತವೆ. ಇಂದು ಹಿಂದೆಂದಿಗಿಂತಲೂ ಹೆಚ್ಚು ಅವಕಾಶಗಳು ಲಭ್ಯವಿದೆ. ಆದರೆ, ನಾವು ಅದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ. ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವುದು ನಮ್ಮ ಕೈಯಲ್ಲಿದೆ ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ಫಾ.ಆ್ಯಂಟನಿ ಪ್ರಕಾಶ್ ಮೊಂತೆರೊ ಮಾತನಾಡಿದರು.</p>.<p>ಮಂಗಳೂರು ವಿಶ್ವವಿದ್ಯಾನಿಲಯವು 2024-25ನೇ ಸಾಲಿನಲ್ಲಿ ನಡೆಸಿದ ಪದವಿ ಪರೀಕ್ಷೆಗಳಲ್ಲಿ ಎಂಎಸ್ಸಿ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದ ಶ್ರೀದೇವಿ, ಮತ್ತು 4ನೇ ರ್ಯಾಂಕ್ ಗಳಿಸಿರುವ ಆಯಿಷತ್ ಸಮ ಅವರನ್ನು ಗೌರವಿಸಲಾಯಿತು.</p>.<p>ಬಿಎ ವಿಭಾಗದಲ್ಲಿ 8ನೇ ರ್ಯಾಂಕ್ ಪಡೆದ ಮಾದ್ರಿ ಅರ್ಚನಾ ಮತ್ತು ಬಿಬಿಎ ವಿಭಾಗದಲ್ಲಿ 10ನೇ ರ್ಯಾಂಕ್ ಗಳಿಸಿದ ಶಾಯಿರಿನ್ ಬಾನು ಅವರನ್ನು ಅಭಿನಂದಿಸಲಾಯಿತು. ವಿಜ್ಞಾನ ವಿಭಾಗದ ಮುಖ್ಯಸ್ಥೆ ಮಾಲಿನಿ, ಉಪನ್ಯಾಸಕರಾದ ಪ್ರಶಾಂತ್ ರೈ ಸಾಧಕರನ್ನು ಪರಿಚಯಿಸಿದರು.</p>.<p>ಬಿಎ ವಿಭಾಗದ ಮುಖ್ಯಸ್ಥ ನೋರ್ಬರ್ಟ್ ಮಸ್ಕರೇನ್ಹಸ್ ಇದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಾಧಾಕೃಷ್ಣ ಗೌಡ ಸ್ವಾಗತಿಸಿದರು. ಸ್ಪರ್ಲ್ ಫಿಯೋನಾ ಪಿರೇರಾ ವಂದಿಸಿದರು. ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಶ್ರೀವಿದ್ಯಾ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-29-1710110934</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>