<p>ರಬಕವಿ ಬನಹಟ್ಟಿ: ‘ವಿದ್ಯಾರ್ಥಿಗಳು ದಿನನಿತ್ಯ ಗುರುವಿನ ಸ್ಮರಣೆ ಮಾಡಬೇಕು. ಶಿಷ್ಯರು ಮಾಡುವ ಸಾಧನೆಯಿಂದ ಗುರುವಿನ ಗೌರವ ಹೆಚ್ಚಾಗುತ್ತದೆ’ ಎಂದು ಬನಹಟ್ಟಿಯ ಹಿರೇಮಠದ ಶರಣಬಸವ ಶಿವಾಚಾರ್ಯರು ತಿಳಿಸಿದರು.</p>.<p>ಇಲ್ಲಿನ ಲಕ್ಷ್ಮಿ ನಗರದ ಲಕ್ಷ್ಮಿ ದೇವಿ ಸಮುದಾಯ ಭವನದಲ್ಲಿ ಸ್ಥಳೀಯ ಎಸ್.ಆರ್.ಎ ಹೈಸ್ಕೂಲಿನಲ್ಲಿ 1988-89 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪೂರೈಸಿದ ವಿದ್ಯಾರ್ಥಿಗಳು ಭಾನುವಾರ ಹಮ್ಮಿಕೊಂಡಿದ್ದ ಗುರುವಂದನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಮಕ್ಕಳ ಸಾಹಿತಿ ಜಯವಂತ ಕಾಡದೇವರ ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ವಿದ್ಯಾರ್ಥಿಗಳು ತಮಗೆ ಕಲಿಸಿದ ಶಿಕ್ಷಕರನ್ನು ಗೌರವಿಸುತ್ತಿರುವುದು ಸ್ತುತ್ಯಾರ್ಹ’ ಎಂದರು.</p>.<p>ನಿವೃತ್ತ ಉಪ ಪ್ರಾಚಾರ್ಯಅಶೋಕ ಪತ್ತಾರ ಅಧ್ಯಕ್ಷತೆ ವಹಿಸಿದ್ದರು. ಹಳೆಯ ವಿದ್ಯಾರ್ಥಿಗಳು ತಮ್ಮ ನೆನಪುಗಳನ್ನು ಮೆಲುಕು ಹಾಕಿದರು.</p>.<p>ವರ್ಧಮಾನ ಯಲಗುದ್ರಿ, ಆರ್ಥಿಕವಾಗಿ ಹಿಂದುಳಿದ ಸ್ನೇಹಿತನ ಮಗನ ಶಿಕ್ಷಣಕ್ಕಾಗಿ ಪ್ರತಿ ವರ್ಷ ₹5 ಸಾವಿರ ನೀಡುವುದಾಗಿ ಮತ್ತು ಕೆಲವರ ಮಕ್ಕಳಿಗೆ ಉದ್ಯೋಗ ನೀಡುವುದಾಗಿ ತಿಳಿಸಿದರು. ಅಶೋಕ ಹಳ್ಳಿ, ಎಸ್.ಆರ್.ಕಲಾದಗಿ, ಪವನ ಲಡ್ಡಾ, ಕಾಡು ಹಳಿಂಗಳಿ, ಮಲ್ಲಿಕಾರ್ಜುನ ಕುಂಚನೂರ, ಬಸವರಾಜ ಅಮಟಿ, ಉಜ್ವಲಾ ಬಾಣಕಾರ, ಭಾರತಿ ಜಾಡಗೌಡ, ಅನಿತಾ ಕೋಲಾರ, ದಾಕ್ಷಾಯಣಿ ಹುನ್ನೂರು ಮತ್ತು ಮುಳೆಗಾವಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-19-995657505</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಬಕವಿ ಬನಹಟ್ಟಿ: ‘ವಿದ್ಯಾರ್ಥಿಗಳು ದಿನನಿತ್ಯ ಗುರುವಿನ ಸ್ಮರಣೆ ಮಾಡಬೇಕು. ಶಿಷ್ಯರು ಮಾಡುವ ಸಾಧನೆಯಿಂದ ಗುರುವಿನ ಗೌರವ ಹೆಚ್ಚಾಗುತ್ತದೆ’ ಎಂದು ಬನಹಟ್ಟಿಯ ಹಿರೇಮಠದ ಶರಣಬಸವ ಶಿವಾಚಾರ್ಯರು ತಿಳಿಸಿದರು.</p>.<p>ಇಲ್ಲಿನ ಲಕ್ಷ್ಮಿ ನಗರದ ಲಕ್ಷ್ಮಿ ದೇವಿ ಸಮುದಾಯ ಭವನದಲ್ಲಿ ಸ್ಥಳೀಯ ಎಸ್.ಆರ್.ಎ ಹೈಸ್ಕೂಲಿನಲ್ಲಿ 1988-89 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪೂರೈಸಿದ ವಿದ್ಯಾರ್ಥಿಗಳು ಭಾನುವಾರ ಹಮ್ಮಿಕೊಂಡಿದ್ದ ಗುರುವಂದನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಮಕ್ಕಳ ಸಾಹಿತಿ ಜಯವಂತ ಕಾಡದೇವರ ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ವಿದ್ಯಾರ್ಥಿಗಳು ತಮಗೆ ಕಲಿಸಿದ ಶಿಕ್ಷಕರನ್ನು ಗೌರವಿಸುತ್ತಿರುವುದು ಸ್ತುತ್ಯಾರ್ಹ’ ಎಂದರು.</p>.<p>ನಿವೃತ್ತ ಉಪ ಪ್ರಾಚಾರ್ಯಅಶೋಕ ಪತ್ತಾರ ಅಧ್ಯಕ್ಷತೆ ವಹಿಸಿದ್ದರು. ಹಳೆಯ ವಿದ್ಯಾರ್ಥಿಗಳು ತಮ್ಮ ನೆನಪುಗಳನ್ನು ಮೆಲುಕು ಹಾಕಿದರು.</p>.<p>ವರ್ಧಮಾನ ಯಲಗುದ್ರಿ, ಆರ್ಥಿಕವಾಗಿ ಹಿಂದುಳಿದ ಸ್ನೇಹಿತನ ಮಗನ ಶಿಕ್ಷಣಕ್ಕಾಗಿ ಪ್ರತಿ ವರ್ಷ ₹5 ಸಾವಿರ ನೀಡುವುದಾಗಿ ಮತ್ತು ಕೆಲವರ ಮಕ್ಕಳಿಗೆ ಉದ್ಯೋಗ ನೀಡುವುದಾಗಿ ತಿಳಿಸಿದರು. ಅಶೋಕ ಹಳ್ಳಿ, ಎಸ್.ಆರ್.ಕಲಾದಗಿ, ಪವನ ಲಡ್ಡಾ, ಕಾಡು ಹಳಿಂಗಳಿ, ಮಲ್ಲಿಕಾರ್ಜುನ ಕುಂಚನೂರ, ಬಸವರಾಜ ಅಮಟಿ, ಉಜ್ವಲಾ ಬಾಣಕಾರ, ಭಾರತಿ ಜಾಡಗೌಡ, ಅನಿತಾ ಕೋಲಾರ, ದಾಕ್ಷಾಯಣಿ ಹುನ್ನೂರು ಮತ್ತು ಮುಳೆಗಾವಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-19-995657505</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>