<p>ರಬಕವಿ ಬನಹಟ್ಟಿ: ‘ವಿದ್ಯಾರ್ಥಿಗಳು ಸರಿಯಾದ ಮಾರ್ಗದಲ್ಲಿ ನಡೆದು ಒಳ್ಳೆಯ ಮತ್ತು ಹೊಸ ವಿಚಾರಗಳಲ್ಲಿ ಭಾಗಿಯಾಗಬೇಕು’ ಎಂದು ಸಿದ್ದಾಪುರದ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆಯ ಕಾರ್ಯ ನಿರ್ವಾಹಕ ನಿರ್ದೇಶಕ ವಿರೂಪಾಕ್ಷಯ್ಯ ಗುಡಗುಂಟಿಮಠ ತಿಳಿಸಿದರು.</p>.<p>ಇಲ್ಲಿನ ಕೆಎಲ್ಇ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶನಿವಾರ ನಡೆದ ಸೃಜನೋತ್ಸವ– 2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಗುರಿ, ಕಲಿಕೆ, ಧೈರ್ಯ ಈ ಮೂರು ವಿಚಾರಗಳನ್ನು ಎಂದಿಗೂ ಮರೆಯಬಾರದು. ಪಾಲಕರು ಮಕ್ಕಳ ಸೃಜನಶೀಲತೆಗೆ ಕೈಜೋಡಿಸಬೇಕು. ಮಾಡುವ ಕಾರ್ಯದಲ್ಲಿ ಮನಸ್ಸನ್ನು ತೊಡಗಿಸಿ ಕಾರ್ಯ ನಿರ್ವಹಿಸಿದರೆ ಗೆಲುವು ಸಾಧ್ಯ’ ಎಂದರು.</p>.<p>ಜಮಖಂಡಿ ಕೃಷಿ ಇಲಾಖೆ ಸಹಾಯಕ ನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ, ಕೆಎಲ್ಇ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಬಿ. ಪಾಟೀಲ ಮಾತನಾಡಿದರು. ಜಮಖಂಡಿ ಓಲೆಮಠದ ಆನಂದ ದೇವರು ಸಾನ್ನಿಧ್ಯ ವಹಿಸಿದ್ದರು. ಪ್ರಾಚಾರ್ಯ ಎಸ್.ಐ. ಕುಂದಗೊಳ ಅವರು ವಾರ್ಷಿಕ ವರದಿ ವಾಚಿಸಿದರು.</p>.<p>ಸ್ಥಳೀಯ ಸಂಸ್ಥೆಯ ನಿರ್ದೇಶಕ ಅಶೋಕ ಅಂಗಡಿ, ಉಮೇಶ ಹಾದಿಮನಿ, ವಂದನಾ ಪಾಸಾರ, ವಿವಿಧ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-19-956536932</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಬಕವಿ ಬನಹಟ್ಟಿ: ‘ವಿದ್ಯಾರ್ಥಿಗಳು ಸರಿಯಾದ ಮಾರ್ಗದಲ್ಲಿ ನಡೆದು ಒಳ್ಳೆಯ ಮತ್ತು ಹೊಸ ವಿಚಾರಗಳಲ್ಲಿ ಭಾಗಿಯಾಗಬೇಕು’ ಎಂದು ಸಿದ್ದಾಪುರದ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆಯ ಕಾರ್ಯ ನಿರ್ವಾಹಕ ನಿರ್ದೇಶಕ ವಿರೂಪಾಕ್ಷಯ್ಯ ಗುಡಗುಂಟಿಮಠ ತಿಳಿಸಿದರು.</p>.<p>ಇಲ್ಲಿನ ಕೆಎಲ್ಇ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶನಿವಾರ ನಡೆದ ಸೃಜನೋತ್ಸವ– 2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಗುರಿ, ಕಲಿಕೆ, ಧೈರ್ಯ ಈ ಮೂರು ವಿಚಾರಗಳನ್ನು ಎಂದಿಗೂ ಮರೆಯಬಾರದು. ಪಾಲಕರು ಮಕ್ಕಳ ಸೃಜನಶೀಲತೆಗೆ ಕೈಜೋಡಿಸಬೇಕು. ಮಾಡುವ ಕಾರ್ಯದಲ್ಲಿ ಮನಸ್ಸನ್ನು ತೊಡಗಿಸಿ ಕಾರ್ಯ ನಿರ್ವಹಿಸಿದರೆ ಗೆಲುವು ಸಾಧ್ಯ’ ಎಂದರು.</p>.<p>ಜಮಖಂಡಿ ಕೃಷಿ ಇಲಾಖೆ ಸಹಾಯಕ ನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ, ಕೆಎಲ್ಇ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಬಿ. ಪಾಟೀಲ ಮಾತನಾಡಿದರು. ಜಮಖಂಡಿ ಓಲೆಮಠದ ಆನಂದ ದೇವರು ಸಾನ್ನಿಧ್ಯ ವಹಿಸಿದ್ದರು. ಪ್ರಾಚಾರ್ಯ ಎಸ್.ಐ. ಕುಂದಗೊಳ ಅವರು ವಾರ್ಷಿಕ ವರದಿ ವಾಚಿಸಿದರು.</p>.<p>ಸ್ಥಳೀಯ ಸಂಸ್ಥೆಯ ನಿರ್ದೇಶಕ ಅಶೋಕ ಅಂಗಡಿ, ಉಮೇಶ ಹಾದಿಮನಿ, ವಂದನಾ ಪಾಸಾರ, ವಿವಿಧ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-19-956536932</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>