<p>ರಬಕವಿ ಬನಹಟ್ಟಿ: ಇಂದಿನ ದಿನಗಳಲ್ಲಿ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ. ಮಹಿಳೆಯರು ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಅವರಲ್ಲಿ ಛಲ ಮತ್ತು ಗುರಿ ಅವಶ್ಯಕವಾಗಿದೆ ಎಂದು ಅಥಣಿಯ ಉಪನ್ಯಾಸಕಿ ಪ್ರಿಯಾ ಹುಲಗಬಾಳಿ ತಿಳಿಸಿದರು.</p>.<p>ಅವರು ಭಾನುವಾರ ರಬಕವಿಯ ಬಣಜಿಗ ಸಮಾಜದ ಶ್ರೀದೇವಿ ಮಹಿಳಾ ಮಂಡಳದ ರಜತ ಮಹೋತ್ಸವ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಬಣಜಿಗ ಸಮಾಜದ ಮಹಿಳೆಯರು 25 ವರ್ಷಗಳಿಂದ ಸಂಘಟಿತರಾಗಿ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಲಿಂಗ ತಾರತಮ್ಯ ನೀತಿಯನ್ನು ತೊಡೆದು ಹಾಕಿ ಶರಣ ಪರಂಪರೆಯಿಂದ ಪ್ರೇರಿತ ಸಮಾಜದಲ್ಲಿ ಮಹಿಳೆಯರ ಕಾರ್ಯಕ್ರಮಕ್ಕೆ ಸಮಾಜದ ಪುರುಷರು ಕೂಡ ಸಹಕಾರ ನೀಡುತ್ತಿದ್ದಾರೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಮಹಾಲಿಂಗಪುರದ ಮುಖಂಡರಾದ ಕವಿತಾ ಕೊಣ್ಣೂರ ಮಾತನಾಡಿದರು. ಮಹಿಳಾ ಮಂಡಳದ ಹಿರಿಯರಾದ ಪಾರ್ವತಮ್ಮ ಮುತ್ತೂರ ಅಧ್ಯಕ್ಷತೆ ವಹಿಸಿದ್ದರು. ಶೋಭಾ ನಾಶಿ, ಶಿಲ್ಪಾ ಮುತ್ತೂರ, ಮಧು ಢಪಳಾಪುರ, ರೇಖಾ ತೆಗ್ಗಿ, ಎಂ.ಎಸ್. ಗಡೆನ್ನವರ, ಸುಹಾನಿ ಮುತ್ತೂರ, ಶ್ರೀದೇವಿ ಪರಮಶೆಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-19-1166776647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಬಕವಿ ಬನಹಟ್ಟಿ: ಇಂದಿನ ದಿನಗಳಲ್ಲಿ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ. ಮಹಿಳೆಯರು ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಅವರಲ್ಲಿ ಛಲ ಮತ್ತು ಗುರಿ ಅವಶ್ಯಕವಾಗಿದೆ ಎಂದು ಅಥಣಿಯ ಉಪನ್ಯಾಸಕಿ ಪ್ರಿಯಾ ಹುಲಗಬಾಳಿ ತಿಳಿಸಿದರು.</p>.<p>ಅವರು ಭಾನುವಾರ ರಬಕವಿಯ ಬಣಜಿಗ ಸಮಾಜದ ಶ್ರೀದೇವಿ ಮಹಿಳಾ ಮಂಡಳದ ರಜತ ಮಹೋತ್ಸವ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಬಣಜಿಗ ಸಮಾಜದ ಮಹಿಳೆಯರು 25 ವರ್ಷಗಳಿಂದ ಸಂಘಟಿತರಾಗಿ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಲಿಂಗ ತಾರತಮ್ಯ ನೀತಿಯನ್ನು ತೊಡೆದು ಹಾಕಿ ಶರಣ ಪರಂಪರೆಯಿಂದ ಪ್ರೇರಿತ ಸಮಾಜದಲ್ಲಿ ಮಹಿಳೆಯರ ಕಾರ್ಯಕ್ರಮಕ್ಕೆ ಸಮಾಜದ ಪುರುಷರು ಕೂಡ ಸಹಕಾರ ನೀಡುತ್ತಿದ್ದಾರೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಮಹಾಲಿಂಗಪುರದ ಮುಖಂಡರಾದ ಕವಿತಾ ಕೊಣ್ಣೂರ ಮಾತನಾಡಿದರು. ಮಹಿಳಾ ಮಂಡಳದ ಹಿರಿಯರಾದ ಪಾರ್ವತಮ್ಮ ಮುತ್ತೂರ ಅಧ್ಯಕ್ಷತೆ ವಹಿಸಿದ್ದರು. ಶೋಭಾ ನಾಶಿ, ಶಿಲ್ಪಾ ಮುತ್ತೂರ, ಮಧು ಢಪಳಾಪುರ, ರೇಖಾ ತೆಗ್ಗಿ, ಎಂ.ಎಸ್. ಗಡೆನ್ನವರ, ಸುಹಾನಿ ಮುತ್ತೂರ, ಶ್ರೀದೇವಿ ಪರಮಶೆಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-19-1166776647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>