<p>ರಬಕವಿ ಬನಹಟ್ಟಿ: ‘ಇಂದಿನ ದಿನಗಳಲ್ಲಿ ನಾವು ಹಣ ಸಂಪಾದನೆಗಾಗಿ ಶಿಕ್ಷಣ ಪಡೆದುಕೊಳ್ಳದೆ ಜ್ಞಾನವನ್ನು ಪಡೆದುಕೊಳ್ಳುವುದಕ್ಕಾಗಿ ಶಿಕ್ಷಣವನ್ನು ಪಡೆದುಕೊಳ್ಳಬೇಕು. ಜಗತ್ತಿನಲ್ಲಿ ಜ್ಞಾನದಿಂದ ಎಲ್ಲವನ್ನು ಸಾಧಿಸಬಹುದಾಗಿದೆ’ ಎಂದು ಜಮಖಂಡಿ ಬಿ ಎಲ್ ಡಿ ಇ ಕಾಲೇಜಿನ ಪ್ರಾಚಾರ್ಯ ಪಿ.ಡಿ.ಪೋಳ ತಿಳಿಸಿದರು.</p>.<p>ಅವರು ಸೋಮವಾರ ಇಲ್ಲಿನ ಎಸ್ ಟಿ ಸಿ ಕಾಲೇಜಿನ ಪ್ರಸ್ತುತ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>ಪ್ರಾಚಾರ್ಯ ಜಿ.ಆರ್.ಜುನ್ನಾಯ್ಕರ್, ಮಹಾವಿದ್ಯಾಲಯವು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದರು.</p>.<p>ನಿವೃತ್ತ ಪ್ರಾಚಾರ್ಯೆ ದಾಕ್ಷಾಯಣಿ ಕುಳ್ಳಿ ಅವರು ಬರೆದ ಅಂತರರಾಷ್ಟ್ರೀಯ ಗಣಿತ ತಜ್ಞ ಡಾ.ವಿ.ಆರ್. ಕುಳ್ಳಿ ಗ್ರಂಥವನ್ನು ಪಿ.ಡಿ.ಪೋಳ ಲೋಕಾರ್ಪಣೆ ಮಾಡಿದರು. ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ ನೀಡಿದ ಉಪನ್ಯಾಸಕರನ್ನು ಸನ್ಮಾನಿಸಲಾಯಿತು.</p>.<p>ಮಂಜುನಾಥ ಬೆನ್ನೂರ, ಮನೋಹರ ಶಿರಹಟ್ಟಿ, ಸುರೇಶ ನಡೋಣಿ, ರೇಶ್ಮಾ ಗಜಾಕೋಶ, ಜಿ.ಎಸ್.ಪಾಟೀಲ, ವಿ.ವೈ.ಪಾಟೀಲ, ವಿಜಯಲಕ್ಷ್ಮಿ ಮಾಚಕನೂರ ಮಾತನಾಡಿದರು.</p>.<p>ಜೆಎಸ್ಎಸ್ ಸಂಘದ ಆಡಳಿತ ಮಂಡಳಿಯ ಸದಸ್ಯ ಶ್ರೀಶೈಲ ಯಾದವಾಡ ಅಧ್ಯಕ್ಷತೆ ವಹಿಸಿದ್ದರು.</p>.<p>ವಿ.ಆರ್.ಕುಳ್ಳಿ, ಪಂಡಿತ ಹನಗಂಡಿ, ಮಹಾದೇವಿ ಕೊಳಕಿ, ಉಪನ್ಯಾಸಕರಾದ ಜಿ.ಎಸ್.ಸಜ್ಜನ, ಎಸ್.ಬಿ.ಉಕ್ಕಲಿ, ರಮೇಶ ಮಾಗುರಿ, ರಶ್ಮಿ ಕೊಕಟನೂರ, ಓಂಕಾರ ಯರಗಟ್ಟಿಕರ, ಶ್ವೇತಾ ಮಠದ, ಕಾವೇರಿ ಜಗದಾಳ, ಲತಾ ಹುನಗುಂದ ಸೇರಿದಂತೆ ಅನೇಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-19-1666928422</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಬಕವಿ ಬನಹಟ್ಟಿ: ‘ಇಂದಿನ ದಿನಗಳಲ್ಲಿ ನಾವು ಹಣ ಸಂಪಾದನೆಗಾಗಿ ಶಿಕ್ಷಣ ಪಡೆದುಕೊಳ್ಳದೆ ಜ್ಞಾನವನ್ನು ಪಡೆದುಕೊಳ್ಳುವುದಕ್ಕಾಗಿ ಶಿಕ್ಷಣವನ್ನು ಪಡೆದುಕೊಳ್ಳಬೇಕು. ಜಗತ್ತಿನಲ್ಲಿ ಜ್ಞಾನದಿಂದ ಎಲ್ಲವನ್ನು ಸಾಧಿಸಬಹುದಾಗಿದೆ’ ಎಂದು ಜಮಖಂಡಿ ಬಿ ಎಲ್ ಡಿ ಇ ಕಾಲೇಜಿನ ಪ್ರಾಚಾರ್ಯ ಪಿ.ಡಿ.ಪೋಳ ತಿಳಿಸಿದರು.</p>.<p>ಅವರು ಸೋಮವಾರ ಇಲ್ಲಿನ ಎಸ್ ಟಿ ಸಿ ಕಾಲೇಜಿನ ಪ್ರಸ್ತುತ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>ಪ್ರಾಚಾರ್ಯ ಜಿ.ಆರ್.ಜುನ್ನಾಯ್ಕರ್, ಮಹಾವಿದ್ಯಾಲಯವು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದರು.</p>.<p>ನಿವೃತ್ತ ಪ್ರಾಚಾರ್ಯೆ ದಾಕ್ಷಾಯಣಿ ಕುಳ್ಳಿ ಅವರು ಬರೆದ ಅಂತರರಾಷ್ಟ್ರೀಯ ಗಣಿತ ತಜ್ಞ ಡಾ.ವಿ.ಆರ್. ಕುಳ್ಳಿ ಗ್ರಂಥವನ್ನು ಪಿ.ಡಿ.ಪೋಳ ಲೋಕಾರ್ಪಣೆ ಮಾಡಿದರು. ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ ನೀಡಿದ ಉಪನ್ಯಾಸಕರನ್ನು ಸನ್ಮಾನಿಸಲಾಯಿತು.</p>.<p>ಮಂಜುನಾಥ ಬೆನ್ನೂರ, ಮನೋಹರ ಶಿರಹಟ್ಟಿ, ಸುರೇಶ ನಡೋಣಿ, ರೇಶ್ಮಾ ಗಜಾಕೋಶ, ಜಿ.ಎಸ್.ಪಾಟೀಲ, ವಿ.ವೈ.ಪಾಟೀಲ, ವಿಜಯಲಕ್ಷ್ಮಿ ಮಾಚಕನೂರ ಮಾತನಾಡಿದರು.</p>.<p>ಜೆಎಸ್ಎಸ್ ಸಂಘದ ಆಡಳಿತ ಮಂಡಳಿಯ ಸದಸ್ಯ ಶ್ರೀಶೈಲ ಯಾದವಾಡ ಅಧ್ಯಕ್ಷತೆ ವಹಿಸಿದ್ದರು.</p>.<p>ವಿ.ಆರ್.ಕುಳ್ಳಿ, ಪಂಡಿತ ಹನಗಂಡಿ, ಮಹಾದೇವಿ ಕೊಳಕಿ, ಉಪನ್ಯಾಸಕರಾದ ಜಿ.ಎಸ್.ಸಜ್ಜನ, ಎಸ್.ಬಿ.ಉಕ್ಕಲಿ, ರಮೇಶ ಮಾಗುರಿ, ರಶ್ಮಿ ಕೊಕಟನೂರ, ಓಂಕಾರ ಯರಗಟ್ಟಿಕರ, ಶ್ವೇತಾ ಮಠದ, ಕಾವೇರಿ ಜಗದಾಳ, ಲತಾ ಹುನಗುಂದ ಸೇರಿದಂತೆ ಅನೇಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-19-1666928422</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>