<p>ರಾಯಚೂರು: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉನ್ನತ ಗುರಿಯನ್ನು ಇಟ್ಟುಕೊಳ್ಳಬೇಕು. ಆ ಮೂಲಕ ನಿರಂತರ ಪರಿಶ್ರಮ ಹಾಗೂ ಪ್ರಯತ್ನದ ಮೂಲಕ ಗುರಿ ಸಾಧಿಸಲು ಪ್ರಯತ್ನಿಸಬೇಕು’ ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.</p>.<p>ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳುಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯ, ಸಂಸ್ಕಾರಗಳನ್ನು ರೂಢಿಸಿಕೊಳ್ಳಬೇಕು. ಚೆನ್ನಾಗಿ ಓದಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಯಶ ಸಾಧಿಸಿ ನಾಗರಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ವಿದ್ಯಾರ್ಥಿಗಳು ಓದಿನ ಮಧ್ಯೆ ಶಾಲೆಯನ್ನು ಬಿಡದಂತೆ ಶಿಕ್ಷಕರು ನೋಡಿಕೊಳ್ಳಬೇಕು. ಶಾಲೆ ಬಿಟ್ಟಲ್ಲಿ ಮರಳಿ ಶಾಲೆಗೆ ಕರೆ ತರುವ ಕೆಲಸ ಮಾಡಬೇಕು‘ ಎಂದು ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕುಮಾರ ಕಾಂದೂ ಮಾತನಾಡಿ, ‘ಶಾಲೆ ಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ನೋಡಿ ನನಗೆ ಸಂತೋಷವಾಗಿದೆ. ಮಕ್ಕಳನ್ನು ನೋಡಿ, ನಮ್ಮ ಬಾಲ್ಯದ ನೆನಪು ಆಗುತ್ತದೆ. ಮಕ್ಕಳು ಒಂದು ಗುರಿಯನ್ನು ಇಟ್ಟಕೊಳ್ಳಬೇಕು. ಆ ಗುರಿಯನ್ನು ಸಾಧಿಸಲು ಸತತ ಪ್ರಯತ್ನ ಮಾಡಬೇಕು’ ಎಂದರು.</p>.<p>‘ಶಾಲೆಯಲ್ಲಿ ಕಿಶೋರಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಅಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿ, ಮಾಹಿತಿ ಪಡೆಯಬೇಕು. ಅಲ್ಲದೆ ನಿಮ್ಮ ಸಹಪಾಠಿಗಳೊಂದಿಗೆ ಈ ಮಾಹಿತಿಯನ್ನು ಹಂಚಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಸಾಂಕೇತಿಕವಾಗಿ ಶಾಲಾ ಮಕ್ಕಳಿಗೆ ಬಟ್ಟೆ ಹಾಗೂ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.</p>.<p>ಕವಿತಾಳ: ಪಟ್ಟಣ ಸೇರಿದಂತೆ ಸುತ್ತಲಿನ ಹಳ್ಳಿಗಳ ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಹೂಗುಚ್ಛ ನೀಡಿ ಸ್ವಾಗತಿಸುವ ಮೂಲಕ ಸೋಮವಾರ ಶಾಲಾ ಪ್ರಾರಂಭೋತ್ಸವಕ್ಕೆ ಸಂಭ್ರಮದ ಚಾಲನೆ ನೀಡಲಾಯಿತು.</p>.<p>ಸಮೀಪದ ವಟಗಲ್ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಅಲಂಕೃತ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ಕರೆ ತಂದು ಮಕ್ಕಳಿಗೆ ಹೂಗುಚ್ಛ ನೀಡಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ಸೇರಿದಂತೆ ಸಿಹಿ ವಿತರಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಅಮರೇಶ ಸಾನಬಾಳ, ಮುಖ್ಯ ಶಿಕ್ಷಕ ಬಸವರಾಜ ಪಲಕನಮರಡಿ, ಶಿಕ್ಷಕರಾದ ಮಮತಾ, ಸರೋಜಿನಿ, ಹನುಮೇಶ ಮಡಿವಾಳ, ಜ್ಯೋತಿ ಮತ್ತು ದೀಪಾ ಮತ್ತಿತರರು ಉಪಸ್ಥಿತರಿದ್ದರು.</p>.<p>ಕವಿತಾಳದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳನ್ನುಶಿಕ್ಷಕರು ಹೂಗುಚ್ಛ ನೀಡಿ ಸ್ವಾಗತಿಸಿದರು. ಕೊಠಡಿ ಗಳನ್ನು ತೋರಣಗಳಿಂದ ಅಲಂಕರಿಸಲಾಗಿತ್ತು.</p>.<p>ಡಯಟ್ ಉಪನ್ಯಾಸಕ ಜೀವನಸಾಬ್ ಮಾತನಾಡಿ, ‘ಕಲಿಕೆಯ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಭಿನ್ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮಕ್ಕಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು’ ಎಂದರು.</p>.<p>ಮುಖ್ಯ ಶಿಕ್ಷಕಿ ಮಂಜುಳಾ ಅಂಗಡಿ, ಶಿಕ್ಷಕರಾದ ಸಿದ್ರಾಮೇಶ, ಶಂಕ್ರಯ್ಯಸ್ವಾಮಿ, ಪ್ರಾಣೇಶ, ಗಿರೀಶ ಅಂಗಡಿ, ರಂಗಣ್ಣ, ಶಾರದಾ, ಪುಷ್ಪಾ, ರೇಣುಕಾ, ನೇತ್ರಾ, ಬಸಮ್ಮ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-32-1724161984</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉನ್ನತ ಗುರಿಯನ್ನು ಇಟ್ಟುಕೊಳ್ಳಬೇಕು. ಆ ಮೂಲಕ ನಿರಂತರ ಪರಿಶ್ರಮ ಹಾಗೂ ಪ್ರಯತ್ನದ ಮೂಲಕ ಗುರಿ ಸಾಧಿಸಲು ಪ್ರಯತ್ನಿಸಬೇಕು’ ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.</p>.<p>ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳುಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯ, ಸಂಸ್ಕಾರಗಳನ್ನು ರೂಢಿಸಿಕೊಳ್ಳಬೇಕು. ಚೆನ್ನಾಗಿ ಓದಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಯಶ ಸಾಧಿಸಿ ನಾಗರಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ವಿದ್ಯಾರ್ಥಿಗಳು ಓದಿನ ಮಧ್ಯೆ ಶಾಲೆಯನ್ನು ಬಿಡದಂತೆ ಶಿಕ್ಷಕರು ನೋಡಿಕೊಳ್ಳಬೇಕು. ಶಾಲೆ ಬಿಟ್ಟಲ್ಲಿ ಮರಳಿ ಶಾಲೆಗೆ ಕರೆ ತರುವ ಕೆಲಸ ಮಾಡಬೇಕು‘ ಎಂದು ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕುಮಾರ ಕಾಂದೂ ಮಾತನಾಡಿ, ‘ಶಾಲೆ ಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ನೋಡಿ ನನಗೆ ಸಂತೋಷವಾಗಿದೆ. ಮಕ್ಕಳನ್ನು ನೋಡಿ, ನಮ್ಮ ಬಾಲ್ಯದ ನೆನಪು ಆಗುತ್ತದೆ. ಮಕ್ಕಳು ಒಂದು ಗುರಿಯನ್ನು ಇಟ್ಟಕೊಳ್ಳಬೇಕು. ಆ ಗುರಿಯನ್ನು ಸಾಧಿಸಲು ಸತತ ಪ್ರಯತ್ನ ಮಾಡಬೇಕು’ ಎಂದರು.</p>.<p>‘ಶಾಲೆಯಲ್ಲಿ ಕಿಶೋರಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಅಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿ, ಮಾಹಿತಿ ಪಡೆಯಬೇಕು. ಅಲ್ಲದೆ ನಿಮ್ಮ ಸಹಪಾಠಿಗಳೊಂದಿಗೆ ಈ ಮಾಹಿತಿಯನ್ನು ಹಂಚಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಸಾಂಕೇತಿಕವಾಗಿ ಶಾಲಾ ಮಕ್ಕಳಿಗೆ ಬಟ್ಟೆ ಹಾಗೂ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.</p>.<p>ಕವಿತಾಳ: ಪಟ್ಟಣ ಸೇರಿದಂತೆ ಸುತ್ತಲಿನ ಹಳ್ಳಿಗಳ ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಹೂಗುಚ್ಛ ನೀಡಿ ಸ್ವಾಗತಿಸುವ ಮೂಲಕ ಸೋಮವಾರ ಶಾಲಾ ಪ್ರಾರಂಭೋತ್ಸವಕ್ಕೆ ಸಂಭ್ರಮದ ಚಾಲನೆ ನೀಡಲಾಯಿತು.</p>.<p>ಸಮೀಪದ ವಟಗಲ್ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಅಲಂಕೃತ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ಕರೆ ತಂದು ಮಕ್ಕಳಿಗೆ ಹೂಗುಚ್ಛ ನೀಡಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ಸೇರಿದಂತೆ ಸಿಹಿ ವಿತರಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಅಮರೇಶ ಸಾನಬಾಳ, ಮುಖ್ಯ ಶಿಕ್ಷಕ ಬಸವರಾಜ ಪಲಕನಮರಡಿ, ಶಿಕ್ಷಕರಾದ ಮಮತಾ, ಸರೋಜಿನಿ, ಹನುಮೇಶ ಮಡಿವಾಳ, ಜ್ಯೋತಿ ಮತ್ತು ದೀಪಾ ಮತ್ತಿತರರು ಉಪಸ್ಥಿತರಿದ್ದರು.</p>.<p>ಕವಿತಾಳದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳನ್ನುಶಿಕ್ಷಕರು ಹೂಗುಚ್ಛ ನೀಡಿ ಸ್ವಾಗತಿಸಿದರು. ಕೊಠಡಿ ಗಳನ್ನು ತೋರಣಗಳಿಂದ ಅಲಂಕರಿಸಲಾಗಿತ್ತು.</p>.<p>ಡಯಟ್ ಉಪನ್ಯಾಸಕ ಜೀವನಸಾಬ್ ಮಾತನಾಡಿ, ‘ಕಲಿಕೆಯ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಭಿನ್ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮಕ್ಕಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು’ ಎಂದರು.</p>.<p>ಮುಖ್ಯ ಶಿಕ್ಷಕಿ ಮಂಜುಳಾ ಅಂಗಡಿ, ಶಿಕ್ಷಕರಾದ ಸಿದ್ರಾಮೇಶ, ಶಂಕ್ರಯ್ಯಸ್ವಾಮಿ, ಪ್ರಾಣೇಶ, ಗಿರೀಶ ಅಂಗಡಿ, ರಂಗಣ್ಣ, ಶಾರದಾ, ಪುಷ್ಪಾ, ರೇಣುಕಾ, ನೇತ್ರಾ, ಬಸಮ್ಮ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-32-1724161984</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>