<p>ಮಾನ್ವಿ: ‘ಮಹಿಳೆಯರ ಮೇಲಿನ ಶೋಷಣೆ, ದೌರ್ಜನ್ಯ ತಡೆಯಲು ಸಂಘಟಿತ ಹೋರಾಟ ಹಾಗೂ ಜಾಗೃತಿ ಅಗತ್ಯ’ ಎಂದು ವಕೀಲೆ ಶ್ರೀದೇವಿ ಬಳಿಗಾರ ಹೇಳಿದರು.</p>.<p>ಪಟ್ಟಣದ ಶಾರದಾ ವಿದ್ಯಾನಿಕೇತನ ಬಿ.ಇಡಿ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆಯರ ರಕ್ಷಣೆಗಾಗಿ ಇರುವ ಕಾನೂನುಗಳ ಬಗ್ಗೆ ಇನ್ನೂ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ಹೆಣ್ಣುಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿರುವುದು ವಿಷಾದನೀಯ’ ಎಂದರು.</p>.<p>ಡಾ.ಕಾವ್ಯಾ, ಮಂಜುಳಾ ಕಿಶೋರಕುಮಾರ, ಉಪನ್ಯಾಸಕ ಈರಣ್ಣ ಮರ್ಲಟ್ಟಿ ಮಾತನಾಡಿದರು. ಶಾರದಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹೈoದವಿ ಮಧುಸೂದನ್ ಗುಪ್ತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ಸಂಸ್ಥೆಯ ಅಧ್ಯಕ್ಷೆ ಉಮಾಮಹೇಶ್ವರಿ ಮಧುಸೂದನ ಗುಪ್ತಾ, ಉಪ ಪ್ರಾಚಾರ್ಯ ವೀರಭದ್ರಯ್ಯ ಹಿರೇಮಠ, ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕಿ ವರ್ಷಿತಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-32-71118797</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾನ್ವಿ: ‘ಮಹಿಳೆಯರ ಮೇಲಿನ ಶೋಷಣೆ, ದೌರ್ಜನ್ಯ ತಡೆಯಲು ಸಂಘಟಿತ ಹೋರಾಟ ಹಾಗೂ ಜಾಗೃತಿ ಅಗತ್ಯ’ ಎಂದು ವಕೀಲೆ ಶ್ರೀದೇವಿ ಬಳಿಗಾರ ಹೇಳಿದರು.</p>.<p>ಪಟ್ಟಣದ ಶಾರದಾ ವಿದ್ಯಾನಿಕೇತನ ಬಿ.ಇಡಿ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆಯರ ರಕ್ಷಣೆಗಾಗಿ ಇರುವ ಕಾನೂನುಗಳ ಬಗ್ಗೆ ಇನ್ನೂ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ಹೆಣ್ಣುಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿರುವುದು ವಿಷಾದನೀಯ’ ಎಂದರು.</p>.<p>ಡಾ.ಕಾವ್ಯಾ, ಮಂಜುಳಾ ಕಿಶೋರಕುಮಾರ, ಉಪನ್ಯಾಸಕ ಈರಣ್ಣ ಮರ್ಲಟ್ಟಿ ಮಾತನಾಡಿದರು. ಶಾರದಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹೈoದವಿ ಮಧುಸೂದನ್ ಗುಪ್ತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ಸಂಸ್ಥೆಯ ಅಧ್ಯಕ್ಷೆ ಉಮಾಮಹೇಶ್ವರಿ ಮಧುಸೂದನ ಗುಪ್ತಾ, ಉಪ ಪ್ರಾಚಾರ್ಯ ವೀರಭದ್ರಯ್ಯ ಹಿರೇಮಠ, ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕಿ ವರ್ಷಿತಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-32-71118797</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>