<p>ರಾಮದುರ್ಗ: ತೋಟಗಾರಿಕೆ ವಿದ್ಯಾರ್ಥಿಗಳ ಪ್ರಸಕ್ತ ಸಾಲಿನ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಮುಕ್ತಾಯ ಸಮಾರಂಭ ಗೊಡಚಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕ ತಮ್ಮಯ್ಯ ಎನ್. ಮಾತನಾಡಿ, ಗ್ರಾಮೀಣ ತೋಟಗಾರಿಕೆ ಶಿಬಿರದಲ್ಲಿ ಕೈಗೊಂಡ ಚಟುವಟಿಕೆಗಳ ಮಾಹಿತಿಯನ್ನು ಗಮನದಲ್ಲಿ ಇಟ್ಟುಕೊಂಡು ತಮ್ಮ ಭಾಗದ ರೈತರಿಗೆ ಸಲಹೆ ಸೂಚನೆ ನೀಡಬೇಕು ಎಂದು ತಿಳಿಸಿದರು.</p>.<p>ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಸಮಾರೋಪ ಸಮಾರಂಭ ಹಾಗೂ ತೋಟಗಾರಿಕಾ ವಸ್ತು ಪ್ರದರ್ಶನ (ನೇಗಿಲ ನೆರಳು) ಪ್ರದರ್ಶನಗೊಂಡಿತು. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಅರಭಾವಿಯ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ವಿಜ್ಞಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿಗಳನ್ನು ನೀಡಿದರು.</p>.<p>ತೊಂಡಿಕಟ್ಟಿ ಗ್ರಾಮದ ಅವಧೂತ ಗಾಳೇಶ್ವರ ಮಠದ ವೆಂಕಟೇಶ ಮಹಾರಾಜರು ಮಾತನಾಡಿ, ‘ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಉಪಯುಕ್ತಗೊಂಡು ಉತ್ತಮ ಸಂಸ್ಕಾರ ಬೆಳೆಸಲು ಅನುಕೂಲವಾಗಲಿದೆ’ ಎಂದು ಹೇಳಿದರು.</p>.<p>ಅರಭಾವಿಯ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಆನಂದ ಮಾಸ್ತಿಹೊಳಿ, ಶ್ರೀನಾಥ್ ಚಿಮ್ಮಲಗಿ, ಪ್ರಕಾಶ ಮುಗಳಕೋಡ ಮತ್ತು ಮಂಜುನಾಥ್ ದೇವರಡ್ಡಿ ಇದ್ದರು.</p>.<p>ಸಮಾರೋಪ ಸಮಾರಂಭದ ಅಂಗವಾಗಿ ತೋಟಗಾರಿಕೆ ವಸ್ತು ಪ್ರದರ್ಶನ, ನೂತನ ಕೃಷಿ ತಂತ್ರಜ್ಞಾನಗಳ ಪರಿಚಯ, ಸಮಗ್ರ ಕೀಟ ಹಾಗೂ ರೋಗ ನಿರ್ವಹಣಾ ಕ್ರಮಗಳು ಸೇರಿದಂತೆ ಆಯಾ ವಿಭಾಗಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರದರ್ಶನಗೊಂಡಿತು. ರೈತರಿಗೆ ಸಸಿಗಳನ್ನು ವಿತರಿಸಲಾಯಿತು.</p>.<p>ಅಂತಿಮ ವರ್ಷದ ವಿದ್ಯಾರ್ಥಿ ಶಂಕರಗೌಡ ಮತ್ತು ಸುನಿತಾ ನಿರೂಪಿಸಿದರು. ಜ್ಯೋತಿ ಸ್ವಾಗತಿಸಿದರು. ಇಮ್ರಾನ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-21-1825436815</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮದುರ್ಗ: ತೋಟಗಾರಿಕೆ ವಿದ್ಯಾರ್ಥಿಗಳ ಪ್ರಸಕ್ತ ಸಾಲಿನ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಮುಕ್ತಾಯ ಸಮಾರಂಭ ಗೊಡಚಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕ ತಮ್ಮಯ್ಯ ಎನ್. ಮಾತನಾಡಿ, ಗ್ರಾಮೀಣ ತೋಟಗಾರಿಕೆ ಶಿಬಿರದಲ್ಲಿ ಕೈಗೊಂಡ ಚಟುವಟಿಕೆಗಳ ಮಾಹಿತಿಯನ್ನು ಗಮನದಲ್ಲಿ ಇಟ್ಟುಕೊಂಡು ತಮ್ಮ ಭಾಗದ ರೈತರಿಗೆ ಸಲಹೆ ಸೂಚನೆ ನೀಡಬೇಕು ಎಂದು ತಿಳಿಸಿದರು.</p>.<p>ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಸಮಾರೋಪ ಸಮಾರಂಭ ಹಾಗೂ ತೋಟಗಾರಿಕಾ ವಸ್ತು ಪ್ರದರ್ಶನ (ನೇಗಿಲ ನೆರಳು) ಪ್ರದರ್ಶನಗೊಂಡಿತು. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಅರಭಾವಿಯ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ವಿಜ್ಞಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿಗಳನ್ನು ನೀಡಿದರು.</p>.<p>ತೊಂಡಿಕಟ್ಟಿ ಗ್ರಾಮದ ಅವಧೂತ ಗಾಳೇಶ್ವರ ಮಠದ ವೆಂಕಟೇಶ ಮಹಾರಾಜರು ಮಾತನಾಡಿ, ‘ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಉಪಯುಕ್ತಗೊಂಡು ಉತ್ತಮ ಸಂಸ್ಕಾರ ಬೆಳೆಸಲು ಅನುಕೂಲವಾಗಲಿದೆ’ ಎಂದು ಹೇಳಿದರು.</p>.<p>ಅರಭಾವಿಯ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಆನಂದ ಮಾಸ್ತಿಹೊಳಿ, ಶ್ರೀನಾಥ್ ಚಿಮ್ಮಲಗಿ, ಪ್ರಕಾಶ ಮುಗಳಕೋಡ ಮತ್ತು ಮಂಜುನಾಥ್ ದೇವರಡ್ಡಿ ಇದ್ದರು.</p>.<p>ಸಮಾರೋಪ ಸಮಾರಂಭದ ಅಂಗವಾಗಿ ತೋಟಗಾರಿಕೆ ವಸ್ತು ಪ್ರದರ್ಶನ, ನೂತನ ಕೃಷಿ ತಂತ್ರಜ್ಞಾನಗಳ ಪರಿಚಯ, ಸಮಗ್ರ ಕೀಟ ಹಾಗೂ ರೋಗ ನಿರ್ವಹಣಾ ಕ್ರಮಗಳು ಸೇರಿದಂತೆ ಆಯಾ ವಿಭಾಗಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರದರ್ಶನಗೊಂಡಿತು. ರೈತರಿಗೆ ಸಸಿಗಳನ್ನು ವಿತರಿಸಲಾಯಿತು.</p>.<p>ಅಂತಿಮ ವರ್ಷದ ವಿದ್ಯಾರ್ಥಿ ಶಂಕರಗೌಡ ಮತ್ತು ಸುನಿತಾ ನಿರೂಪಿಸಿದರು. ಜ್ಯೋತಿ ಸ್ವಾಗತಿಸಿದರು. ಇಮ್ರಾನ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-21-1825436815</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>