<p>ಬಿಡದಿ: ಇಲ್ಲಿನ ಅಮೃತ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ಸೈನ್ಸ್ ಸಂಸ್ಥೆಯಲ್ಲಿ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ‘ನೆಕ್ಸೋರಾ-2026’ ಯಶಸ್ವಿಯಾಗಿ ಮುಕ್ತಾಯಗೊಂಡಿತು.</p>.<p>ದೇಶದ ವಿವಿಧ ರಾಜ್ಯಗಳಿಂದ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮ ತಾರ್ಕಿಕ ಕೃತಕ ಬುದ್ಧಿಮತ್ತೆ ಮತ್ತು ನೈಜ ಜಗತ್ತಿಗೆ ಅನುಷ್ಠಾನಗೊಳಿಸಬಹುದಾದ ಎ.ಐ ವಿಷಯದ ಮೇಲೆ ಕೇಂದ್ರೀಕರಿಸಿತ್ತು. ವಿ.ಎಲ್.ಎಸ್.ಐ ಮತ್ತು ಎಂಬೆಡೆಡ್ ಸಿಸ್ಟಮ್, ಸೈಬರ್ ಸುರಕ್ಷತೆ ಮತ್ತು ಬ್ಲಾಕ್ಚೈನ್, ರೋಬೋಟಿಕ್ಸ್ ಮತ್ತು ಕೈಗಾರಿಕಾ ಅನ್ವಯ ವಿಭಾಗಗಳಲ್ಲಿ ವಿದ್ಯಾರ್ಥಿಗಳು ತಮ್ಮ ಕೌಶಲ ಪ್ರದರ್ಶಿಸಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ವಿಟಿಯು ಡಿಜಿಟೈಸೇಶನ್ ಕೇಂದ್ರದ ಮುಖ್ಯ ಸಂಯೋಜಕ ಡಾ.ಸುದರ್ಶನ ರೆಡ್ಡಿ, ವಿದ್ಯಾರ್ಥಿಗಳು ಶಾರ್ಟ್ಕಟ್ಗಳ ಮೊರೆ ಹೋಗದೆ ಸ್ವಂತ ಆಲೋಚನೆಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದರು.</p>.<p>ಗೌರವ ಅತಿಥಿಗಳಾಗಿದ್ದ ರಂಗನಾಥ್ ಜಿ.ಎಚ್ ಮತ್ತು ಡಾ.ಸಂಗಪ್ಪ ಎಸ್.ಬಿ ಮಾತನಾಡಿದರು.</p>.<p>ಸಂಸ್ಥೆ ಪ್ರಾಂಶುಪಾಲ ಡಾ.ಸಂತೋಷ್ ಎಂ.ಮುರನಾಳ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಅಕಾಡೆಮಿಕ್ ಡೀನ್ ಡಾ.ರಾಜೇಶ್ವರ್ ಕಾಡದೇವಮಠ, ಡಾ.ವಿರೇಶ್ ಪಾಟೀಲ, ಡಾ.ಬಿ.ಐ.ಡಿ ಕುಮಾರ್ ಮತ್ತು ಶ್ರೀ ವಿಕಾಸ್ ಶೆಟ್ಟರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-14-1733403987</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಿಡದಿ: ಇಲ್ಲಿನ ಅಮೃತ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ಸೈನ್ಸ್ ಸಂಸ್ಥೆಯಲ್ಲಿ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ‘ನೆಕ್ಸೋರಾ-2026’ ಯಶಸ್ವಿಯಾಗಿ ಮುಕ್ತಾಯಗೊಂಡಿತು.</p>.<p>ದೇಶದ ವಿವಿಧ ರಾಜ್ಯಗಳಿಂದ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮ ತಾರ್ಕಿಕ ಕೃತಕ ಬುದ್ಧಿಮತ್ತೆ ಮತ್ತು ನೈಜ ಜಗತ್ತಿಗೆ ಅನುಷ್ಠಾನಗೊಳಿಸಬಹುದಾದ ಎ.ಐ ವಿಷಯದ ಮೇಲೆ ಕೇಂದ್ರೀಕರಿಸಿತ್ತು. ವಿ.ಎಲ್.ಎಸ್.ಐ ಮತ್ತು ಎಂಬೆಡೆಡ್ ಸಿಸ್ಟಮ್, ಸೈಬರ್ ಸುರಕ್ಷತೆ ಮತ್ತು ಬ್ಲಾಕ್ಚೈನ್, ರೋಬೋಟಿಕ್ಸ್ ಮತ್ತು ಕೈಗಾರಿಕಾ ಅನ್ವಯ ವಿಭಾಗಗಳಲ್ಲಿ ವಿದ್ಯಾರ್ಥಿಗಳು ತಮ್ಮ ಕೌಶಲ ಪ್ರದರ್ಶಿಸಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ವಿಟಿಯು ಡಿಜಿಟೈಸೇಶನ್ ಕೇಂದ್ರದ ಮುಖ್ಯ ಸಂಯೋಜಕ ಡಾ.ಸುದರ್ಶನ ರೆಡ್ಡಿ, ವಿದ್ಯಾರ್ಥಿಗಳು ಶಾರ್ಟ್ಕಟ್ಗಳ ಮೊರೆ ಹೋಗದೆ ಸ್ವಂತ ಆಲೋಚನೆಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದರು.</p>.<p>ಗೌರವ ಅತಿಥಿಗಳಾಗಿದ್ದ ರಂಗನಾಥ್ ಜಿ.ಎಚ್ ಮತ್ತು ಡಾ.ಸಂಗಪ್ಪ ಎಸ್.ಬಿ ಮಾತನಾಡಿದರು.</p>.<p>ಸಂಸ್ಥೆ ಪ್ರಾಂಶುಪಾಲ ಡಾ.ಸಂತೋಷ್ ಎಂ.ಮುರನಾಳ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಅಕಾಡೆಮಿಕ್ ಡೀನ್ ಡಾ.ರಾಜೇಶ್ವರ್ ಕಾಡದೇವಮಠ, ಡಾ.ವಿರೇಶ್ ಪಾಟೀಲ, ಡಾ.ಬಿ.ಐ.ಡಿ ಕುಮಾರ್ ಮತ್ತು ಶ್ರೀ ವಿಕಾಸ್ ಶೆಟ್ಟರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-14-1733403987</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>