<p>ರಾಣೆಬೆನ್ನೂರು: ಭಾರತೀಯ ಸಂಸ್ಕೃತಿ ಮತ್ತು ಪರಂಪರೆಗಳ ಮಹತ್ವವನ್ನು ಯುವಜನತೆಗೆ ಪರಿಚಯಿಸುವಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪಾತ್ರ ಮುಖ್ಯ. ಜ್ಞಾನವು ಕೇವಲ ಪುಸ್ತಕಗಳಿಗೆ ಸೀಮಿತವಾಗದೇ ಜೀವನದ ಎಲ್ಲಾ ಆಯಾಮಗಳಲ್ಲಿಯೂ ವಿಸ್ತರಿಸಬೇಕು ಎಂದು ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದರು.</p>.<p>ಇಲ್ಲಿನ ಹಲಗೇರಿ ರಸ್ತೆಯ ಗಾಯತ್ರಿ ಕ್ಯಾಂಪಸ್ನ ಬಿಎಜೆಎಸ್ಎಸ್ ಕಾನೂನು ಮಹಾವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಸಂಸ್ಥೆಯ ಆಡಳಿತಾಧಿಕಾರಿ ಆರ್.ಎಂ.ಕುಬೇರಪ್ಪ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ಶಿಸ್ತು, ಸಮಯ ಪಾಲನೆಯೊಂದಿಗೆ ಆಳವಾದ ಅಧ್ಯಯನ ಕೈಗೊಂಡು ಜ್ಞಾನದ ಹರವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.</p>.<p>ಸಾಂಸ್ಕೃತಿಕ ಹಬ್ಬದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಹಾಲೇಶಪ್ಪ ಎಂ.ಗೌಡಶಿವಣ್ಣನವರ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಕೀಲ ಸಲೀಂ ಎಂ. ಜವಳಿ, ಪ್ರೊ.ಕೆ.ಕೆ.ಹಾವಿನಾಳ, ಮಮತಾ ಓಲೇಕಾರ, ಮಂಗಳಾ ಅಣ್ಣಯ್ಯನವರ, ಹನುಮಂತಪ್ಪ ಬ್ಯಾಡಗಿ, ಸುನೀತಾ, ಎಲ್ಲಮ್ಮ, ಶ್ರೇಯಾ, ಶಕೀಲಾ ಶಿಡೇನೂರ, ತೇಜಸ್ವಿನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-22-2051915152</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ಭಾರತೀಯ ಸಂಸ್ಕೃತಿ ಮತ್ತು ಪರಂಪರೆಗಳ ಮಹತ್ವವನ್ನು ಯುವಜನತೆಗೆ ಪರಿಚಯಿಸುವಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪಾತ್ರ ಮುಖ್ಯ. ಜ್ಞಾನವು ಕೇವಲ ಪುಸ್ತಕಗಳಿಗೆ ಸೀಮಿತವಾಗದೇ ಜೀವನದ ಎಲ್ಲಾ ಆಯಾಮಗಳಲ್ಲಿಯೂ ವಿಸ್ತರಿಸಬೇಕು ಎಂದು ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದರು.</p>.<p>ಇಲ್ಲಿನ ಹಲಗೇರಿ ರಸ್ತೆಯ ಗಾಯತ್ರಿ ಕ್ಯಾಂಪಸ್ನ ಬಿಎಜೆಎಸ್ಎಸ್ ಕಾನೂನು ಮಹಾವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಸಂಸ್ಥೆಯ ಆಡಳಿತಾಧಿಕಾರಿ ಆರ್.ಎಂ.ಕುಬೇರಪ್ಪ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ಶಿಸ್ತು, ಸಮಯ ಪಾಲನೆಯೊಂದಿಗೆ ಆಳವಾದ ಅಧ್ಯಯನ ಕೈಗೊಂಡು ಜ್ಞಾನದ ಹರವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.</p>.<p>ಸಾಂಸ್ಕೃತಿಕ ಹಬ್ಬದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಹಾಲೇಶಪ್ಪ ಎಂ.ಗೌಡಶಿವಣ್ಣನವರ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಕೀಲ ಸಲೀಂ ಎಂ. ಜವಳಿ, ಪ್ರೊ.ಕೆ.ಕೆ.ಹಾವಿನಾಳ, ಮಮತಾ ಓಲೇಕಾರ, ಮಂಗಳಾ ಅಣ್ಣಯ್ಯನವರ, ಹನುಮಂತಪ್ಪ ಬ್ಯಾಡಗಿ, ಸುನೀತಾ, ಎಲ್ಲಮ್ಮ, ಶ್ರೇಯಾ, ಶಕೀಲಾ ಶಿಡೇನೂರ, ತೇಜಸ್ವಿನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-22-2051915152</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>