<p>ರಟ್ಟೀಹಳ್ಳಿ: ‘ಮನೆಗಳಿಗೆ, ಹುಲ್ಲಿನ ಬಣವೆಗಳಿಗೆ, ಮರದ ರಾಶಿಗಳಿಗೆ ವಿದ್ಯುತ್ ಸಾಮಗ್ರಿಗಳಿಗೆ, ಸಿಲಿಂಡರ್ಗಳಿಗೆ ಬೆಂಕಿ ತಗುಲಿದಾಗ ನೀರು, ಮರಳು, ದಪ್ಪನೆ ಹೊದಿಕೆ ಬಳಸಿ ಬೆಂಕಿ ನಂದಿಸಬಹುದು’ ಎಂದು ಅಗ್ನಿಶಾಮಕ ದಳದ ಅಧಿಕಾರಿ ವಿನಯ ಎಂ.ಕೆ. ಹೇಳಿದರು.</p>.<p>ಪಟ್ಟಣದ ಪ್ರಿಯದರ್ಶಿನಿ ಮಹಾವಿದ್ಯಾಲಯದಲ್ಲಿ ಶನಿವಾರ ಜರುಗಿದ ಅಗ್ನಿಶಾಮಕ ಸೇವಾ ಸಪ್ತಾಹ ದಿನಾಚರಣೆಯಲ್ಲಿ ಮಾತನಾಡಿ, ‘ಬೆಂಕಿ ದೊಡ್ಡದಿರಲಿ, ಚಿಕ್ಕದಿರಲಿ ಮೊದಲು ಅಗ್ನಿಶಾಮಕ ಠಾಣೆಗೆ ಮಾಹಿತಿ ತಿಳಿಸಬೇಕು. ಜೀವ ರಕ್ಷಣಗೆ ಅಗ್ನಿ ಸುರಕ್ಷತಾ ವಿಧಾನಗಳನ್ನು ವಿದ್ಯಾರ್ಥಿಗಳು ಅರಿತುಕೊಂಡಿರಬೇಕು’ ಎಂದರು.</p>.<p>ಉಪನ್ಯಾಸಕ ಎಂ.ಆರ್. ಅಂಚಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ವಿದ್ಯಾರ್ಥಿಗಳು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಲು ಹಾಗೂ ನಾಯಕತ್ವ ಗುಣಕ್ಕೆ ಇಂತಹ ಅರಿವು ಕಾರ್ಯಕ್ರಮ ಸಹಕಾರಿ’ ಎಂದರು.</p>.<p>ಕಾರ್ಯಕ್ರಮ ಅಧ್ಯಕ್ಷತೆಯನ್ನು ಪ್ರಾಚಾರ್ಯ ರಾಘವೇಂದ್ರ ಎ.ಜಿ. ವಹಿಸಿ ಮಾತನಾಡಿದರು. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸಂಜೀವ ಬೋಗಲ, ನವೀನ ಎಸ್. ಹನುಮಂತ ಕೆ. ಸಂತೋಷ ಸತ್ತಗಿಹಳ್ಳಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸದ ನಂತರ ಬೆಂಕಿ ನಂದಿಸುವ ಪ್ರಾತ್ಯಕ್ಷತೆಯನ್ನು ತೋರಿಸಿದರು.</p>.<p>ಉಪನ್ಯಾಸಕರಾದ ಸಿ.ಎಸ್. ಕಮ್ಮಾರ, ಎಂ.ಬಿ. ತಲ್ಲೂರ, ಎಚ್.ಬಿ. ಕೆಂಚಳ್ಳಿ, ಬಿ.ಸಿ. ತಿಮ್ಮೇನಹಳ್ಳಿ, ವಿ.ಎಸ್. ರೂಳಿ, ಸಿ.ಆರ್. ಹಿತ್ತಲಮನಿ, ವೈ.ವೈ. ಮರಳಿಹಳ್ಳಿ, ಎಂ.ಎಂ. ಪ್ಯಾಟ, ಯಲ್ಲಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-22-205219684</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಟ್ಟೀಹಳ್ಳಿ: ‘ಮನೆಗಳಿಗೆ, ಹುಲ್ಲಿನ ಬಣವೆಗಳಿಗೆ, ಮರದ ರಾಶಿಗಳಿಗೆ ವಿದ್ಯುತ್ ಸಾಮಗ್ರಿಗಳಿಗೆ, ಸಿಲಿಂಡರ್ಗಳಿಗೆ ಬೆಂಕಿ ತಗುಲಿದಾಗ ನೀರು, ಮರಳು, ದಪ್ಪನೆ ಹೊದಿಕೆ ಬಳಸಿ ಬೆಂಕಿ ನಂದಿಸಬಹುದು’ ಎಂದು ಅಗ್ನಿಶಾಮಕ ದಳದ ಅಧಿಕಾರಿ ವಿನಯ ಎಂ.ಕೆ. ಹೇಳಿದರು.</p>.<p>ಪಟ್ಟಣದ ಪ್ರಿಯದರ್ಶಿನಿ ಮಹಾವಿದ್ಯಾಲಯದಲ್ಲಿ ಶನಿವಾರ ಜರುಗಿದ ಅಗ್ನಿಶಾಮಕ ಸೇವಾ ಸಪ್ತಾಹ ದಿನಾಚರಣೆಯಲ್ಲಿ ಮಾತನಾಡಿ, ‘ಬೆಂಕಿ ದೊಡ್ಡದಿರಲಿ, ಚಿಕ್ಕದಿರಲಿ ಮೊದಲು ಅಗ್ನಿಶಾಮಕ ಠಾಣೆಗೆ ಮಾಹಿತಿ ತಿಳಿಸಬೇಕು. ಜೀವ ರಕ್ಷಣಗೆ ಅಗ್ನಿ ಸುರಕ್ಷತಾ ವಿಧಾನಗಳನ್ನು ವಿದ್ಯಾರ್ಥಿಗಳು ಅರಿತುಕೊಂಡಿರಬೇಕು’ ಎಂದರು.</p>.<p>ಉಪನ್ಯಾಸಕ ಎಂ.ಆರ್. ಅಂಚಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ವಿದ್ಯಾರ್ಥಿಗಳು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಲು ಹಾಗೂ ನಾಯಕತ್ವ ಗುಣಕ್ಕೆ ಇಂತಹ ಅರಿವು ಕಾರ್ಯಕ್ರಮ ಸಹಕಾರಿ’ ಎಂದರು.</p>.<p>ಕಾರ್ಯಕ್ರಮ ಅಧ್ಯಕ್ಷತೆಯನ್ನು ಪ್ರಾಚಾರ್ಯ ರಾಘವೇಂದ್ರ ಎ.ಜಿ. ವಹಿಸಿ ಮಾತನಾಡಿದರು. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸಂಜೀವ ಬೋಗಲ, ನವೀನ ಎಸ್. ಹನುಮಂತ ಕೆ. ಸಂತೋಷ ಸತ್ತಗಿಹಳ್ಳಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸದ ನಂತರ ಬೆಂಕಿ ನಂದಿಸುವ ಪ್ರಾತ್ಯಕ್ಷತೆಯನ್ನು ತೋರಿಸಿದರು.</p>.<p>ಉಪನ್ಯಾಸಕರಾದ ಸಿ.ಎಸ್. ಕಮ್ಮಾರ, ಎಂ.ಬಿ. ತಲ್ಲೂರ, ಎಚ್.ಬಿ. ಕೆಂಚಳ್ಳಿ, ಬಿ.ಸಿ. ತಿಮ್ಮೇನಹಳ್ಳಿ, ವಿ.ಎಸ್. ರೂಳಿ, ಸಿ.ಆರ್. ಹಿತ್ತಲಮನಿ, ವೈ.ವೈ. ಮರಳಿಹಳ್ಳಿ, ಎಂ.ಎಂ. ಪ್ಯಾಟ, ಯಲ್ಲಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-22-205219684</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>