<p>ಸಾಗರ: ‘ಸಮುದಾಯದ ಸಹಭಾಗಿತ್ವ ಇದ್ದರೆ ಶೈಕ್ಷಣಿಕ ಚಟುವಟಿಕೆ ಅರ್ಥಪೂರ್ಣಗೊಳ್ಳುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಿ. ಹೇಳಿದರು.</p>.<p>ಇಲ್ಲಿನ ಅಜಿತ್ ಸಭಾಭವನದಲ್ಲಿ ಶಿಕ್ಷಣ ಇಲಾಖೆಯು ತಾಲ್ಲೂಕಿನ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಈಚೆಗೆ ಏರ್ಪಡಿಸಿದ್ದ ಶೈಕ್ಷಣಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಜೂನ್ 1ರಿಂದ ಶಾಲೆಗಳು ಪುನರರಾಂಭಗೊಳ್ಳುತ್ತಿವೆ. ಹೊಸ ಶೈಕ್ಷಣಿಕ ವರ್ಷದಲ್ಲಿ ಹೊಸ ಉತ್ಸಾಹದೊಂದಿಗೆ ಶಿಕ್ಷಕರಾದವರು ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಸಿದ್ಧರಾಗ ಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ತಾಲ್ಲೂಕಿನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರತಿಭಾವಂತ ಶಿಕ್ಷಕರು ಇದ್ದಾರೆ. ಪ್ರತಿಯೊಬ್ಬ ಶಿಕ್ಷಕರೂ ಅನ್ಯೋನ್ಯತೆಯಿಂದ ಕಾರ್ಯ ನಿರ್ವಹಿಸಿ ಸಮಾಜಕ್ಕೆ ಮಾದರಿಯಾಗಬೇಕು’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಾಲತೇಶ್ ತಿಳಿಸಿದರು.</p>.<p>ಸಮನ್ವಯಾಧಿಕಾರಿ ಅನ್ನಪೂರ್ಣ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಭೂಮೇಶ್, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಭೂಕೇಶಪ್ಪ, ಮಂಜುಳಾ ಇದ್ದರು.</p>.<p>ಗೌರಿ ಭಟ್ ಪ್ರಾರ್ಥಿಸಿದರು. ಕುಮಾರಸ್ವಾಮಿ ಸ್ವಾಗತಿಸಿದರು. ದಿನೇಶ್ ವಂದಿಸಿದರು, ವಿ.ಟಿ.ಸ್ವಾಮಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-42-1114246163</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ಸಮುದಾಯದ ಸಹಭಾಗಿತ್ವ ಇದ್ದರೆ ಶೈಕ್ಷಣಿಕ ಚಟುವಟಿಕೆ ಅರ್ಥಪೂರ್ಣಗೊಳ್ಳುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಿ. ಹೇಳಿದರು.</p>.<p>ಇಲ್ಲಿನ ಅಜಿತ್ ಸಭಾಭವನದಲ್ಲಿ ಶಿಕ್ಷಣ ಇಲಾಖೆಯು ತಾಲ್ಲೂಕಿನ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಈಚೆಗೆ ಏರ್ಪಡಿಸಿದ್ದ ಶೈಕ್ಷಣಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಜೂನ್ 1ರಿಂದ ಶಾಲೆಗಳು ಪುನರರಾಂಭಗೊಳ್ಳುತ್ತಿವೆ. ಹೊಸ ಶೈಕ್ಷಣಿಕ ವರ್ಷದಲ್ಲಿ ಹೊಸ ಉತ್ಸಾಹದೊಂದಿಗೆ ಶಿಕ್ಷಕರಾದವರು ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಸಿದ್ಧರಾಗ ಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ತಾಲ್ಲೂಕಿನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರತಿಭಾವಂತ ಶಿಕ್ಷಕರು ಇದ್ದಾರೆ. ಪ್ರತಿಯೊಬ್ಬ ಶಿಕ್ಷಕರೂ ಅನ್ಯೋನ್ಯತೆಯಿಂದ ಕಾರ್ಯ ನಿರ್ವಹಿಸಿ ಸಮಾಜಕ್ಕೆ ಮಾದರಿಯಾಗಬೇಕು’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಾಲತೇಶ್ ತಿಳಿಸಿದರು.</p>.<p>ಸಮನ್ವಯಾಧಿಕಾರಿ ಅನ್ನಪೂರ್ಣ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಭೂಮೇಶ್, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಭೂಕೇಶಪ್ಪ, ಮಂಜುಳಾ ಇದ್ದರು.</p>.<p>ಗೌರಿ ಭಟ್ ಪ್ರಾರ್ಥಿಸಿದರು. ಕುಮಾರಸ್ವಾಮಿ ಸ್ವಾಗತಿಸಿದರು. ದಿನೇಶ್ ವಂದಿಸಿದರು, ವಿ.ಟಿ.ಸ್ವಾಮಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-42-1114246163</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>