<p>ಸಾಗರ: ‘ಲಾಭದ ಉದ್ದೇಶವಿಲ್ಲದೆ ಈ ಭಾಗದ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ 60ರ ದಶಕದಿಂದಲೂ ಕಾರ್ಯ ನಿರ್ವಹಿಸುತ್ತಿರುವುದು ನಮ್ಮ ಸಂಸ್ಥೆಯ ಹೆಗ್ಗಳಿಕೆ’ ಎಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್.ಜಯಂತ್ ಹೇಳಿದರು.</p>.<p>ಇಲ್ಲಿನ ಎಲ್ಬಿ ಮತ್ತು ಎಸ್ಬಿಎಸ್ ಕಾಲೇಜಿನಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಉತ್ತಮ ಫಲಿತಾಂಶ ಬರಲು ಕಾರಣರಾದ ಪ್ರತಿಷ್ಠಾನದ ಶಿಕ್ಷಣ ಸಂಸ್ಥೆಯ ಅಧ್ಯಾಪಕರು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.</p>.<p>‘ಶಿಕ್ಷಣವು ವ್ಯಾಪಾರವಾಗಿರುವ ಇಂದಿನ ದಿನಗಳಲ್ಲಿ ಅತಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಎಂಡಿಎಫ್ ಒತ್ತು ನೀಡುತ್ತಿದೆ. ಸಂಸ್ಥೆಯ ವ್ಯಾಪ್ತಿಗೆ ಒಳಪಟ್ಟ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಫಲಿತಾಂಶ ಬರಲು ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದ ಶ್ರಮ ಕಾರಣ’ ಎಂದರು.</p>.<p>ಎಂಡಿಎಫ್ನ ನಿಕಟಪೂರ್ವ ಅಧ್ಯಕ್ಷ ಎಂ.ಹರನಾಥ್ ರಾವ್, ಉಪಾಧ್ಯಕ್ಷ ಕೆ.ಎಂ.ಸೂರ್ಯನಾರಾಯಣ, ಕಾರ್ಯದರ್ಶಿ ಎಚ್.ಎಂ.ಶಿವಕುಮಾರ್, ಕೋಶಾಧ್ಯಕ್ಷ ಕವಲಕೋಡು ವೆಂಕಟೇಶ್, ಬಿ.ಎಸ್.ಪ್ರಕಾಶ್ ತಲಕಾಲುಕೊಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-42-2045230214</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ಲಾಭದ ಉದ್ದೇಶವಿಲ್ಲದೆ ಈ ಭಾಗದ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ 60ರ ದಶಕದಿಂದಲೂ ಕಾರ್ಯ ನಿರ್ವಹಿಸುತ್ತಿರುವುದು ನಮ್ಮ ಸಂಸ್ಥೆಯ ಹೆಗ್ಗಳಿಕೆ’ ಎಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್.ಜಯಂತ್ ಹೇಳಿದರು.</p>.<p>ಇಲ್ಲಿನ ಎಲ್ಬಿ ಮತ್ತು ಎಸ್ಬಿಎಸ್ ಕಾಲೇಜಿನಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಉತ್ತಮ ಫಲಿತಾಂಶ ಬರಲು ಕಾರಣರಾದ ಪ್ರತಿಷ್ಠಾನದ ಶಿಕ್ಷಣ ಸಂಸ್ಥೆಯ ಅಧ್ಯಾಪಕರು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.</p>.<p>‘ಶಿಕ್ಷಣವು ವ್ಯಾಪಾರವಾಗಿರುವ ಇಂದಿನ ದಿನಗಳಲ್ಲಿ ಅತಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಎಂಡಿಎಫ್ ಒತ್ತು ನೀಡುತ್ತಿದೆ. ಸಂಸ್ಥೆಯ ವ್ಯಾಪ್ತಿಗೆ ಒಳಪಟ್ಟ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಫಲಿತಾಂಶ ಬರಲು ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದ ಶ್ರಮ ಕಾರಣ’ ಎಂದರು.</p>.<p>ಎಂಡಿಎಫ್ನ ನಿಕಟಪೂರ್ವ ಅಧ್ಯಕ್ಷ ಎಂ.ಹರನಾಥ್ ರಾವ್, ಉಪಾಧ್ಯಕ್ಷ ಕೆ.ಎಂ.ಸೂರ್ಯನಾರಾಯಣ, ಕಾರ್ಯದರ್ಶಿ ಎಚ್.ಎಂ.ಶಿವಕುಮಾರ್, ಕೋಶಾಧ್ಯಕ್ಷ ಕವಲಕೋಡು ವೆಂಕಟೇಶ್, ಬಿ.ಎಸ್.ಪ್ರಕಾಶ್ ತಲಕಾಲುಕೊಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-42-2045230214</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>