<p>ಸಾಗರ: ‘ಕಲಿಕೆಯಲ್ಲಿ ಹುಮ್ಮಸ್ಸು ಇದ್ದಾಗ ಮಾತ್ರ ವಿದ್ಯಾರ್ಥಿಗಳಿಗೆ ಯಶಸ್ಸು ಖಚಿತ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ಮುಖ್ಯಸ್ಥ ವೀರೇಶ್ ಬಡಿಗೇರ ಹೇಳಿದರು.</p>.<p>ನಗರದ ಕುಡುಪಲಿ ಸದಾನಂದ ಸ್ವರಾಲಯ ಸಭಾಂಗಣದಲ್ಲಿ ನಮ್ಮ ರಂಗ ಸ್ವರೂಪ ಟ್ರಸ್ಟ್, ಕುಡುಪಲಿ ಸದಾನಂದ ಸಂಗೀತ ಸೇವಾ ಟ್ರಸ್ಟ್ ಶನಿವಾರ ಏರ್ಪಡಿಸಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಗೀತ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ, ಸಾಂಸ್ಕೃತಿಕವಾಗಿ ಪ್ರತಿಭೆ ಉಳ್ಳವರನ್ನು ಗುರುತಿಸಿ ಸಂಗೀತ, ನಾಟಕ ಕ್ಷೇತ್ರದಲ್ಲಿ ತರಬೇತಿ ನೀಡಿ ಅವರ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ’ ಎಂದರು.</p>.<p>ಸದ್ಗುರು ಹಿಂದೂಸ್ತಾನಿ ಸಂಗೀತ ವಿದ್ಯಾಲಯದ ವಿದುಷಿ ವಸುಧಾ ಶರ್ಮ ಗೀತ ಗಾಯನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಪ್ರಮುಖರಾದ ಸಿ.ಟಿ.ಬ್ರಹ್ಮಾಚಾರ್, ಶ್ರೀನಾಥ್, ಎಂ.ಎಸ್. ಚಂದ್ರಶೇಖರ್, ಶ್ರೀಧರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-42-996399732</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ಕಲಿಕೆಯಲ್ಲಿ ಹುಮ್ಮಸ್ಸು ಇದ್ದಾಗ ಮಾತ್ರ ವಿದ್ಯಾರ್ಥಿಗಳಿಗೆ ಯಶಸ್ಸು ಖಚಿತ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ಮುಖ್ಯಸ್ಥ ವೀರೇಶ್ ಬಡಿಗೇರ ಹೇಳಿದರು.</p>.<p>ನಗರದ ಕುಡುಪಲಿ ಸದಾನಂದ ಸ್ವರಾಲಯ ಸಭಾಂಗಣದಲ್ಲಿ ನಮ್ಮ ರಂಗ ಸ್ವರೂಪ ಟ್ರಸ್ಟ್, ಕುಡುಪಲಿ ಸದಾನಂದ ಸಂಗೀತ ಸೇವಾ ಟ್ರಸ್ಟ್ ಶನಿವಾರ ಏರ್ಪಡಿಸಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಗೀತ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ, ಸಾಂಸ್ಕೃತಿಕವಾಗಿ ಪ್ರತಿಭೆ ಉಳ್ಳವರನ್ನು ಗುರುತಿಸಿ ಸಂಗೀತ, ನಾಟಕ ಕ್ಷೇತ್ರದಲ್ಲಿ ತರಬೇತಿ ನೀಡಿ ಅವರ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ’ ಎಂದರು.</p>.<p>ಸದ್ಗುರು ಹಿಂದೂಸ್ತಾನಿ ಸಂಗೀತ ವಿದ್ಯಾಲಯದ ವಿದುಷಿ ವಸುಧಾ ಶರ್ಮ ಗೀತ ಗಾಯನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಪ್ರಮುಖರಾದ ಸಿ.ಟಿ.ಬ್ರಹ್ಮಾಚಾರ್, ಶ್ರೀನಾಥ್, ಎಂ.ಎಸ್. ಚಂದ್ರಶೇಖರ್, ಶ್ರೀಧರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-42-996399732</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>