<p>ಸಾಗರ: ‘ದೈಹಿಕ, ಮಾನಸಿಕ ನ್ಯೂನತೆಯುಳ್ಳ ವಿಶೇಷ ಮಕ್ಕಳ ಶಿಕ್ಷಣಕ್ಕೆ ಮುಂದಾಗುವ ಸಂಸ್ಥೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರಕಬೇಕಿದೆ’ ಎಂದು ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ಹೇಳಿದರು.</p>.<p>ಸಮೀಪದ ಭೀಮನಕೋಣೆ ಗ್ರಾಮದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಮಕ್ಕಳ ಚೈತನ್ಯ ಶಿಕ್ಷಣ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಚಿತ್ರ ಸಂಪುಟವನ್ನು ಬಿಡುಗಡೆ ಮಾಡಿ ಮಾತನಾಡಿದರು.</p>.<p>‘ವಿಶೇಷ ಮಕ್ಕಳ ಆರೋಗ್ಯವನ್ನು ಕಾಪಾಡುವತ್ತ ಹೆಚ್ಚಿನ ನಿಗಾ ವಹಿಸಬೇಕಾಗುತ್ತದೆ. ಇಂತಹ ಸನ್ನಿವೇಶದಲ್ಲಿ ಅವರನ್ನು ಮನೆಯಿಂದ ಹೊರಗೆ ಕರೆತಂದು ಅವರಿಗಾಗಿಯೇ ಶಾಲೆ ನಿರ್ಮಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿರುವ ಚೈತನ್ಯ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ’ ಎಂದರು.</p>.<p>ಇದೇ ವೇಳೆ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ನಡೆಯಿತು. ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಚೈತನ್ಯ ಸಂಸ್ಥೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಚೈತನ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಎಚ್. ರಾಘವೇಂದ್ರ ಅಧ್ಯಕ್ಷತೆ ವಹಿಸಿದ್ದರು. ಅಂಗವಿಕಲರ ಕಲ್ಯಾಣಾಧಿಕಾರಿ ಸುವರ್ಣ ನಾಯ್ಕ್, ಡಾ.ರಾಧಿಕಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯಮಾಲ, ಶಾಂತಲಾ ಎಸ್.ಭಟ್, ಸುರೇಶ್ ಕೆ.ಎನ್. ಇದ್ದರು.</p>.<p>ಮಹ್ಮದ್ ಫಕೀರ್ ಫರಾನ್ ಪ್ರಾರ್ಥನಾ ಗೀತೆ ಹಾಡಿದರು. ಎಂ.ಡಿ. ನಾಗರಾಜ್ ಭಟ್ ಸ್ವಾಗತಿಸಿದರು. ಎಂ. ನಾಗರಾಜ್, ವೆಂಕಟೇಶ್ ಬಿ. ನಿರೂಪಿಸಿದರು. ಜ್ಯೋತಿ ಕೆರೆಮನೆ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-42-1067990761</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ದೈಹಿಕ, ಮಾನಸಿಕ ನ್ಯೂನತೆಯುಳ್ಳ ವಿಶೇಷ ಮಕ್ಕಳ ಶಿಕ್ಷಣಕ್ಕೆ ಮುಂದಾಗುವ ಸಂಸ್ಥೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರಕಬೇಕಿದೆ’ ಎಂದು ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ಹೇಳಿದರು.</p>.<p>ಸಮೀಪದ ಭೀಮನಕೋಣೆ ಗ್ರಾಮದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಮಕ್ಕಳ ಚೈತನ್ಯ ಶಿಕ್ಷಣ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಚಿತ್ರ ಸಂಪುಟವನ್ನು ಬಿಡುಗಡೆ ಮಾಡಿ ಮಾತನಾಡಿದರು.</p>.<p>‘ವಿಶೇಷ ಮಕ್ಕಳ ಆರೋಗ್ಯವನ್ನು ಕಾಪಾಡುವತ್ತ ಹೆಚ್ಚಿನ ನಿಗಾ ವಹಿಸಬೇಕಾಗುತ್ತದೆ. ಇಂತಹ ಸನ್ನಿವೇಶದಲ್ಲಿ ಅವರನ್ನು ಮನೆಯಿಂದ ಹೊರಗೆ ಕರೆತಂದು ಅವರಿಗಾಗಿಯೇ ಶಾಲೆ ನಿರ್ಮಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿರುವ ಚೈತನ್ಯ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ’ ಎಂದರು.</p>.<p>ಇದೇ ವೇಳೆ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ನಡೆಯಿತು. ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಚೈತನ್ಯ ಸಂಸ್ಥೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಚೈತನ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಎಚ್. ರಾಘವೇಂದ್ರ ಅಧ್ಯಕ್ಷತೆ ವಹಿಸಿದ್ದರು. ಅಂಗವಿಕಲರ ಕಲ್ಯಾಣಾಧಿಕಾರಿ ಸುವರ್ಣ ನಾಯ್ಕ್, ಡಾ.ರಾಧಿಕಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯಮಾಲ, ಶಾಂತಲಾ ಎಸ್.ಭಟ್, ಸುರೇಶ್ ಕೆ.ಎನ್. ಇದ್ದರು.</p>.<p>ಮಹ್ಮದ್ ಫಕೀರ್ ಫರಾನ್ ಪ್ರಾರ್ಥನಾ ಗೀತೆ ಹಾಡಿದರು. ಎಂ.ಡಿ. ನಾಗರಾಜ್ ಭಟ್ ಸ್ವಾಗತಿಸಿದರು. ಎಂ. ನಾಗರಾಜ್, ವೆಂಕಟೇಶ್ ಬಿ. ನಿರೂಪಿಸಿದರು. ಜ್ಯೋತಿ ಕೆರೆಮನೆ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-42-1067990761</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>