<p>ಸೈದಾಪುರ: ಡಾ. ಭೀಮಣ್ಣ ಮೇಟಿ ಹಾಗೂ ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಪಟ್ಟಣದ ಡಿಡಿಯು ಸಿಬಿಎಸ್ಇ ಶಾಲೆಯ ಆವರಣದಲ್ಲಿ ಇಂದು ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>‘ಮೆ 13ರಂದು ಬೆಳಿಗ್ಗೆ 9.30ಕ್ಕೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ 2 ರಿಂದ 5 ವರ್ಷದೊಳಗಿನ ಮಕ್ಕಳಿಗೆ ಬೆಂಗಳೂರಿನ ಸೂರ್ಯವರ್ಧನ ಗುರೂಜಿ ನೇತೃತ್ವದಲ್ಲಿ ಅಕ್ಷರಾಭ್ಯಾಸ ನೆರವೇರಿಸಲಾಗುತ್ತದೆ’ ಎಂದು ಶಿಕ್ಷಣ ಸಂಸ್ಥೆಯ ದೇವೇಂದ್ರಪ್ಪ ಕೂಡಲೂರ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಗ್ರಾಮೀಣ ಭಾಗದ ಮಕ್ಕಳು ಹಾಗೂ ಅವರ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>‘ಈ ಕಾರ್ಯಕ್ರಮವು ಮಕ್ಕಳ ಶಿಕ್ಷಣದ ಆರಂಭಕ್ಕೆ ಶುಭ ಸಂಕೇತವಾಗಿದ್ದು, ಪೋಷಕರಿಗೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪ್ರೇರಣೆಯಾಗಲಿದೆ’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-30-625976337</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೈದಾಪುರ: ಡಾ. ಭೀಮಣ್ಣ ಮೇಟಿ ಹಾಗೂ ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಪಟ್ಟಣದ ಡಿಡಿಯು ಸಿಬಿಎಸ್ಇ ಶಾಲೆಯ ಆವರಣದಲ್ಲಿ ಇಂದು ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>‘ಮೆ 13ರಂದು ಬೆಳಿಗ್ಗೆ 9.30ಕ್ಕೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ 2 ರಿಂದ 5 ವರ್ಷದೊಳಗಿನ ಮಕ್ಕಳಿಗೆ ಬೆಂಗಳೂರಿನ ಸೂರ್ಯವರ್ಧನ ಗುರೂಜಿ ನೇತೃತ್ವದಲ್ಲಿ ಅಕ್ಷರಾಭ್ಯಾಸ ನೆರವೇರಿಸಲಾಗುತ್ತದೆ’ ಎಂದು ಶಿಕ್ಷಣ ಸಂಸ್ಥೆಯ ದೇವೇಂದ್ರಪ್ಪ ಕೂಡಲೂರ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಗ್ರಾಮೀಣ ಭಾಗದ ಮಕ್ಕಳು ಹಾಗೂ ಅವರ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>‘ಈ ಕಾರ್ಯಕ್ರಮವು ಮಕ್ಕಳ ಶಿಕ್ಷಣದ ಆರಂಭಕ್ಕೆ ಶುಭ ಸಂಕೇತವಾಗಿದ್ದು, ಪೋಷಕರಿಗೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪ್ರೇರಣೆಯಾಗಲಿದೆ’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-30-625976337</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>