<p>ಸೈದಾಪುರ: ‘ಶ್ರಮದಿಂದ ಗಳಿಸಿದ ಹಣ, ಆಸ್ತಿ ಸಂಪತ್ತನ್ನು ಖರ್ಚು ಮಾಡಿ ಖಾಲಿ ಮಾಡಬಹುದು, ಅದನ್ನು ಬೇರೆಯವರು ದೋಚಬಹುದು. ಆದರೆ, ಜ್ಞಾನವನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ’ ಎಂದು ಶಿಕ್ಷಕ ಬಸವರಾಜ ಚಂದ್ರಗಿರಿ ಹೇಳಿದರು.</p>.<p>ಸಮೀಪದ ಬಾಡಿಯಾಳ ಗ್ರಾಮದ ಗ್ರಾಮ ಪಂಚಾಯಿತಿ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿ, ‘ಮಕ್ಕಳ ಶೈಕ್ಷಣಿಕ ಬೆಳವಣಿಗೆ ಜೊತೆಗೆ ಅವರಿಗೆ ಸಂಸ್ಕಾರ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪೋಷಕರು ಗಮನಹರಿಸಬೇಕು’ ಎಂದು ಹೇಳಿದರು.</p>.<p>ಇದಕ್ಕೂ ಮೊದಲು ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್.ರಂಗನಾಥ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಶಿಬಿರದಲ್ಲಿ ಮಕ್ಕಳಿಗೆ ತಮ್ಮನ್ನು ತಾವು ಸ್ವಯಂ ಪರಿಚಯಿಸಿಕೊಳ್ಳುವ ಬಾಲ್ ಪಾಸಿಂಗ್ ಗೇಮ್ ಆಡಿಸಲಾಯಿತು.</p>.<p>ಕಾ ಅಧ್ಯಕ್ಷತೆಯನ್ನು ಲಿಂಗಣ್ಣಗೌಡ ಪೊಲೀಸ್ ಪಾಟೀಲ ವಹಿಸಿದ್ದರು. ಗ್ರಾ.ಪಂ ಕಾರ್ಯದರ್ಶಿ ಅಬ್ದುಲ್ ಬಾಷಾ, ಕಲಿಕಾ ಪ್ರೇರಕರಾದ ವೇಕಟೇಶ ಕಾವಲಿ, ಗ್ರಾ.ಪಂ ಕರವಸೂಲಿಗಾರ ಮರೆಪ್ಪ ಮಕ್ತಲ್, ವೆಂಕಟೇಶ ಕಾವಲಿ, ಮರೆಪ್ಪ ಮಕ್ತಾಲ್ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-30-432190626</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೈದಾಪುರ: ‘ಶ್ರಮದಿಂದ ಗಳಿಸಿದ ಹಣ, ಆಸ್ತಿ ಸಂಪತ್ತನ್ನು ಖರ್ಚು ಮಾಡಿ ಖಾಲಿ ಮಾಡಬಹುದು, ಅದನ್ನು ಬೇರೆಯವರು ದೋಚಬಹುದು. ಆದರೆ, ಜ್ಞಾನವನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ’ ಎಂದು ಶಿಕ್ಷಕ ಬಸವರಾಜ ಚಂದ್ರಗಿರಿ ಹೇಳಿದರು.</p>.<p>ಸಮೀಪದ ಬಾಡಿಯಾಳ ಗ್ರಾಮದ ಗ್ರಾಮ ಪಂಚಾಯಿತಿ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿ, ‘ಮಕ್ಕಳ ಶೈಕ್ಷಣಿಕ ಬೆಳವಣಿಗೆ ಜೊತೆಗೆ ಅವರಿಗೆ ಸಂಸ್ಕಾರ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪೋಷಕರು ಗಮನಹರಿಸಬೇಕು’ ಎಂದು ಹೇಳಿದರು.</p>.<p>ಇದಕ್ಕೂ ಮೊದಲು ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್.ರಂಗನಾಥ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಶಿಬಿರದಲ್ಲಿ ಮಕ್ಕಳಿಗೆ ತಮ್ಮನ್ನು ತಾವು ಸ್ವಯಂ ಪರಿಚಯಿಸಿಕೊಳ್ಳುವ ಬಾಲ್ ಪಾಸಿಂಗ್ ಗೇಮ್ ಆಡಿಸಲಾಯಿತು.</p>.<p>ಕಾ ಅಧ್ಯಕ್ಷತೆಯನ್ನು ಲಿಂಗಣ್ಣಗೌಡ ಪೊಲೀಸ್ ಪಾಟೀಲ ವಹಿಸಿದ್ದರು. ಗ್ರಾ.ಪಂ ಕಾರ್ಯದರ್ಶಿ ಅಬ್ದುಲ್ ಬಾಷಾ, ಕಲಿಕಾ ಪ್ರೇರಕರಾದ ವೇಕಟೇಶ ಕಾವಲಿ, ಗ್ರಾ.ಪಂ ಕರವಸೂಲಿಗಾರ ಮರೆಪ್ಪ ಮಕ್ತಲ್, ವೆಂಕಟೇಶ ಕಾವಲಿ, ಮರೆಪ್ಪ ಮಕ್ತಾಲ್ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-30-432190626</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>