<p>ಸಾಲಿಗ್ರಾಮ: ‘ದೇಶದ ಜನರಿಗೆ ಸಮಾನತೆ, ಸ್ವಾತಂತ್ರ್ಯಮತ್ತು ಭ್ರಾತೃತ್ವವನ್ನು ಸಮಾನವಾಗಿ ಹಂಚುವ ಮೂಲಕ ಆಧುನಿಕ ಭಾರತವನ್ನು ಕಟ್ಟಿದ ಮಹಾಶಿಲ್ಪಿ ಡಾ.ಬಿ.ಅರ್.ಅಂಬೇಡ್ಕರ್ ಅವರು ದೇಶದ ಅಸ್ಮಿತೆ’ ಎಂದು ತಹಶೀಲ್ದಾರ್ ರುಕಿಯಾಬೇಗಂ ಹೇಳಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದ ಅಂಗವಾಗಿ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಮಾತನಾಡಿದರು.</p>.<p>‘ದೇಶದ ಪ್ರತಿಯೊಬ್ಬ ಪ್ರಜೆ ಇಂದಿಗೂ ನೆಮ್ಮದಿಯ ಬದುಕು ಕಟ್ಟಿಕೊಂಡು ತಮ್ಮ ಪಾಲಿನ ಹಕ್ಕುಗಳನ್ನು ಯಾವುದೇ ಆತಂಕ ಇಲ್ಲದೆ ಅನುಭವಿಸುವಂತೆ ಮಾಡಿರುವ ಅಂಬೇಡ್ಕರ್ ಅವರ ಶ್ರಮ ಹಾಗೂ ತ್ಯಾಗವನ್ನು ಯಾರೂ ಮರೆಯಬಾರದು’ ಎಂದು ತಿಳಿಸಿದರು.</p>.<p>‘ಅಂಬೇಡ್ಕರ್ ಅವರ ವಿಚಾರಧಾರೆಗಳು ಇಂದಿನ ಪೀಳಿಗೆಗೆ ದಾರಿದೀಪವಾಗಿದ್ದು, ಇದನ್ನು ನಮ್ಮ ಯುವ ಪೀಳಿಗೆ ಅನುಸರಿಸುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.</p>.<p>‘ಶಿಕ್ಷಣದ ಮೂಲಕವೇ ಸಮಾಜದ ಬದಲಾವಣೆ ಸಾಧ್ಯ ಎಂಬುದನ್ನು ಬಲವಾಗಿ ನಂಬಿದ್ದ ಬಾಬಾ ಸಾಹೇಬರ ಆಶಯಗಳನ್ನು ಯುವ ಪೀಳಿಗೆ ಅರ್ಥ ಮಾಡಿಕೊಂಡು ಅನುಸರಿಸಲು ಮುಂದಾ ಗಬೇಕು’ ಎಂದು ಮನವಿ ಮಾಡಿದರು.</p>.<p>ಉಪ ತಹಶೀಲ್ದಾರ್ ಮಿರ್ಲೆ ಮಹೇಶ್, ಶಿರಸ್ತೇದ್ದಾರ್ ತಿಮ್ಮಯ್ಯ, ದಲಿತ ಸಂಘದ ಮುಖಂಡರಾದ ಕಂಠಿಕುಮಾರ್, ಕಳ್ಳಿಮುದ್ದನಹಳ್ಳಿ ಚಂದ್ರು, ಮೂರ್ತಿ, ಪುರಿಗೋವಿಂದ, ಭೇರ್ಯ ಕೃಷ್ಣ, ಪ್ರಭಾಕರ್, ದೊಡ್ಡಕೊಪ್ಪಲು ಮೀನು ಶಿವು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-38-1426799210</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಲಿಗ್ರಾಮ: ‘ದೇಶದ ಜನರಿಗೆ ಸಮಾನತೆ, ಸ್ವಾತಂತ್ರ್ಯಮತ್ತು ಭ್ರಾತೃತ್ವವನ್ನು ಸಮಾನವಾಗಿ ಹಂಚುವ ಮೂಲಕ ಆಧುನಿಕ ಭಾರತವನ್ನು ಕಟ್ಟಿದ ಮಹಾಶಿಲ್ಪಿ ಡಾ.ಬಿ.ಅರ್.ಅಂಬೇಡ್ಕರ್ ಅವರು ದೇಶದ ಅಸ್ಮಿತೆ’ ಎಂದು ತಹಶೀಲ್ದಾರ್ ರುಕಿಯಾಬೇಗಂ ಹೇಳಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದ ಅಂಗವಾಗಿ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಮಾತನಾಡಿದರು.</p>.<p>‘ದೇಶದ ಪ್ರತಿಯೊಬ್ಬ ಪ್ರಜೆ ಇಂದಿಗೂ ನೆಮ್ಮದಿಯ ಬದುಕು ಕಟ್ಟಿಕೊಂಡು ತಮ್ಮ ಪಾಲಿನ ಹಕ್ಕುಗಳನ್ನು ಯಾವುದೇ ಆತಂಕ ಇಲ್ಲದೆ ಅನುಭವಿಸುವಂತೆ ಮಾಡಿರುವ ಅಂಬೇಡ್ಕರ್ ಅವರ ಶ್ರಮ ಹಾಗೂ ತ್ಯಾಗವನ್ನು ಯಾರೂ ಮರೆಯಬಾರದು’ ಎಂದು ತಿಳಿಸಿದರು.</p>.<p>‘ಅಂಬೇಡ್ಕರ್ ಅವರ ವಿಚಾರಧಾರೆಗಳು ಇಂದಿನ ಪೀಳಿಗೆಗೆ ದಾರಿದೀಪವಾಗಿದ್ದು, ಇದನ್ನು ನಮ್ಮ ಯುವ ಪೀಳಿಗೆ ಅನುಸರಿಸುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.</p>.<p>‘ಶಿಕ್ಷಣದ ಮೂಲಕವೇ ಸಮಾಜದ ಬದಲಾವಣೆ ಸಾಧ್ಯ ಎಂಬುದನ್ನು ಬಲವಾಗಿ ನಂಬಿದ್ದ ಬಾಬಾ ಸಾಹೇಬರ ಆಶಯಗಳನ್ನು ಯುವ ಪೀಳಿಗೆ ಅರ್ಥ ಮಾಡಿಕೊಂಡು ಅನುಸರಿಸಲು ಮುಂದಾ ಗಬೇಕು’ ಎಂದು ಮನವಿ ಮಾಡಿದರು.</p>.<p>ಉಪ ತಹಶೀಲ್ದಾರ್ ಮಿರ್ಲೆ ಮಹೇಶ್, ಶಿರಸ್ತೇದ್ದಾರ್ ತಿಮ್ಮಯ್ಯ, ದಲಿತ ಸಂಘದ ಮುಖಂಡರಾದ ಕಂಠಿಕುಮಾರ್, ಕಳ್ಳಿಮುದ್ದನಹಳ್ಳಿ ಚಂದ್ರು, ಮೂರ್ತಿ, ಪುರಿಗೋವಿಂದ, ಭೇರ್ಯ ಕೃಷ್ಣ, ಪ್ರಭಾಕರ್, ದೊಡ್ಡಕೊಪ್ಪಲು ಮೀನು ಶಿವು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-38-1426799210</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>