<p>ಸಾಸ್ವೆಹಳ್ಳಿ: ‘ಇತ್ತೀಚಿನ ದಿನಗಳಲ್ಲಿ ಜೀವನಶೈಲಿ, ಆಹಾರ ಪದ್ಧತಿಯಲ್ಲಿನ ಬದಲಾವಣೆಗಳಿಂದಾಗಿ ಬಂಜೆತನದಂತಹ ಸಮಸ್ಯೆಗಳು ಸಾಮಾನ್ಯವಾಗುತ್ತಿವೆ. ಪ್ರತಿ ಎಂಟು ದಂಪತಿಗಳಲ್ಲಿ ಒಬ್ಬರಿಗೆ ಈ ಸಮಸ್ಯೆ ಕಾಡುತ್ತಿದ್ದು, ದಂಪತಿಗಳು ಹಿಂಜರಿಯದೆ ವೈದ್ಯಕೀಯ ಚಿಕಿತ್ಸೆ ಹಾಗೂ ಸಮಾಲೋಚನೆ ಪಡೆಯಬೇಕು’ ಎಂದು ಕಡ್ಲಿ ಬಂಜೆತನ ಆಸ್ಪತ್ರೆಯ ವೈದ್ಯೆ ವರದಾಕಿರಣ್ ಸಲಹೆ ನೀಡಿದರು.</p>.<p>ಕ್ಯಾಸಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತೀಯ ಕಿಸಾನ್ ಸಂಘ, ಕಡ್ಲಿ ಆಸ್ಪತ್ರೆಯ ಆಶ್ರಯದಲ್ಲಿ ನಡೆದ ಬಂಜೆತನ ನಿವಾರಣಾ ಜಾಗೃತಿ ಹಾಗೂ ಸಮಾಲೋಚನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ವಿವಾಹವಾಗಿ ಒಂದು ವರ್ಷ ಕಳೆದರೂ ಮಕ್ಕಳು ಆಗದಿದ್ದಲ್ಲಿ, ದಂಪತಿ ಯಾವುದೇ ಮುಜುಗರ ಪಟ್ಟುಕೊಳ್ಳದೆ ತಕ್ಷಣ ತಜ್ಞ ವೈದ್ಯರನ್ನು ಭೇಟಿ ಮಾಡಬೇಕು. ಆರಂಭಿಕ ಹಂತದಲ್ಲಿ ಸೂಕ್ತ ಚಿಕಿತ್ಸೆ ಪಡೆದರೆ ಬಂಜೆತನ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದು’ ಎಂದರು.</p>.<p>ಕ್ಯಾಸಿನಕೆರೆ ಆಸ್ಪತ್ರೆಯ ವೈದ್ಯಾಧಿಕಾರಿ ಚಂದ್ರಪ್ಪ ಮಾತನಾಡಿ, ‘ಗ್ರಾಮೀಣ ಪ್ರದೇಶಗಳಲ್ಲಿ ಬಂಜೆತನದ ಸಮಸ್ಯೆ ಬಗ್ಗೆ ಜನರಲ್ಲಿ ಜಾಗೃತಿಯ ಕೊರತೆ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಕುರಿತಾದ ಸೌಲಭ್ಯಗಳ ಕೊರತೆ ಇರುವುದರಿಂದ, ಇಂತಹ ವಿಶೇಷ ಶಿಬಿರಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಚಿಕಿತ್ಸೆ ಒದಗಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಾಂತರಾಜ್, ಕೋರಿಯೋಗೇಶ್ ಮಾತನಾಡಿದರು.</p>.<p>ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ತಿಪ್ಪೇಶ್ ಕೆ.ಸಿ., ಮಲ್ಲೇಶ್, ರಮೇಶ್, ಹಾಲೇಶ್, ಕಡ್ಲಿ ಆಸ್ಪತ್ರೆಯ ಸಿಬ್ಬಂದಿ ಶಂಬಣ್ಣ ಆರ್. ಚಕ್ರಸಾಲಿ, ಅನಿತಾ, ಮೀನಾಕ್ಷಿ, ರೇಷ್ಮಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-43-1696069911</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಸ್ವೆಹಳ್ಳಿ: ‘ಇತ್ತೀಚಿನ ದಿನಗಳಲ್ಲಿ ಜೀವನಶೈಲಿ, ಆಹಾರ ಪದ್ಧತಿಯಲ್ಲಿನ ಬದಲಾವಣೆಗಳಿಂದಾಗಿ ಬಂಜೆತನದಂತಹ ಸಮಸ್ಯೆಗಳು ಸಾಮಾನ್ಯವಾಗುತ್ತಿವೆ. ಪ್ರತಿ ಎಂಟು ದಂಪತಿಗಳಲ್ಲಿ ಒಬ್ಬರಿಗೆ ಈ ಸಮಸ್ಯೆ ಕಾಡುತ್ತಿದ್ದು, ದಂಪತಿಗಳು ಹಿಂಜರಿಯದೆ ವೈದ್ಯಕೀಯ ಚಿಕಿತ್ಸೆ ಹಾಗೂ ಸಮಾಲೋಚನೆ ಪಡೆಯಬೇಕು’ ಎಂದು ಕಡ್ಲಿ ಬಂಜೆತನ ಆಸ್ಪತ್ರೆಯ ವೈದ್ಯೆ ವರದಾಕಿರಣ್ ಸಲಹೆ ನೀಡಿದರು.</p>.<p>ಕ್ಯಾಸಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತೀಯ ಕಿಸಾನ್ ಸಂಘ, ಕಡ್ಲಿ ಆಸ್ಪತ್ರೆಯ ಆಶ್ರಯದಲ್ಲಿ ನಡೆದ ಬಂಜೆತನ ನಿವಾರಣಾ ಜಾಗೃತಿ ಹಾಗೂ ಸಮಾಲೋಚನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ವಿವಾಹವಾಗಿ ಒಂದು ವರ್ಷ ಕಳೆದರೂ ಮಕ್ಕಳು ಆಗದಿದ್ದಲ್ಲಿ, ದಂಪತಿ ಯಾವುದೇ ಮುಜುಗರ ಪಟ್ಟುಕೊಳ್ಳದೆ ತಕ್ಷಣ ತಜ್ಞ ವೈದ್ಯರನ್ನು ಭೇಟಿ ಮಾಡಬೇಕು. ಆರಂಭಿಕ ಹಂತದಲ್ಲಿ ಸೂಕ್ತ ಚಿಕಿತ್ಸೆ ಪಡೆದರೆ ಬಂಜೆತನ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದು’ ಎಂದರು.</p>.<p>ಕ್ಯಾಸಿನಕೆರೆ ಆಸ್ಪತ್ರೆಯ ವೈದ್ಯಾಧಿಕಾರಿ ಚಂದ್ರಪ್ಪ ಮಾತನಾಡಿ, ‘ಗ್ರಾಮೀಣ ಪ್ರದೇಶಗಳಲ್ಲಿ ಬಂಜೆತನದ ಸಮಸ್ಯೆ ಬಗ್ಗೆ ಜನರಲ್ಲಿ ಜಾಗೃತಿಯ ಕೊರತೆ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಕುರಿತಾದ ಸೌಲಭ್ಯಗಳ ಕೊರತೆ ಇರುವುದರಿಂದ, ಇಂತಹ ವಿಶೇಷ ಶಿಬಿರಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಚಿಕಿತ್ಸೆ ಒದಗಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಾಂತರಾಜ್, ಕೋರಿಯೋಗೇಶ್ ಮಾತನಾಡಿದರು.</p>.<p>ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ತಿಪ್ಪೇಶ್ ಕೆ.ಸಿ., ಮಲ್ಲೇಶ್, ರಮೇಶ್, ಹಾಲೇಶ್, ಕಡ್ಲಿ ಆಸ್ಪತ್ರೆಯ ಸಿಬ್ಬಂದಿ ಶಂಬಣ್ಣ ಆರ್. ಚಕ್ರಸಾಲಿ, ಅನಿತಾ, ಮೀನಾಕ್ಷಿ, ರೇಷ್ಮಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-43-1696069911</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>