<p><strong>ಸವದತ್ತಿ :</strong> ಇಲ್ಲಿನ ಆದರ್ಶ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಸುಮಿತ ಸದಾಶಿವ ಪೋತದಾರ ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಜೊತೆ ನಡೆಸಿದ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾನೆ.</p>.<p>ಈ ಕಾರ್ಯಕ್ರಮವನ್ನು ಶಾಲೆಯಲ್ಲಿ ಪ್ರೊಜೆಕ್ಟರ್ ಮೂಲಕ ದೊಡ್ಡ ಪರದೆಯ ಮೇಲೆ ವಿದ್ಯಾರ್ಥಿಗಳಿಗೆ ತೋರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಮಾತುಗಳನ್ನು ವಿದ್ಯಾರ್ಥಿಗಳು ಅತ್ಯಂತ ಶ್ರದ್ಧೆಯಿಂದ ಆಲಿಸಿದರು.</p>.<p>ಟಿ.ವಿ ಪರದೆ ಮೇಲೆ ಸುಮಿತ ಕಂಡಾಗ ವಿದ್ಯಾರ್ಥಿಗಳು ಪುಳಕಿತರಾಗುತ್ತಿದ್ದರು. ‘ಹೋ..’ ಎಂದು ಸಣ್ಣದಾಗಿ ಕೂಗುತ್ತಿದ್ದರು. ಆತ ನಮ್ಮೆಲ್ಲರ ಪ್ರತಿನಿಧಿಯಾಗಿ ಭಾಗಿಯಾಗಿದ್ದಾನೆ. ಆತ ನಮ್ಮ ಶಾಲೆಗೆ ಹೆಮ್ಮೆ ತಂದಿದ್ದಾನೆ ಎಂದು ಸ್ನೇಹಿತ ವಿದ್ಯಾರ್ಥಿಗಳು ಕೊಂಡಾಡಿದರು.</p>.<p>ಶಾಲೆಯ ಮುಖ್ಯೋಪಾಧ್ಯಾಯ ಬಿ.ಎನ್ ಬ್ಯಾಳಿ ಮಾತನಾಡಿ, ‘ಸುಮಿತ ಆದರ್ಶ ವಿದ್ಯಾರ್ಥಿಯಾಗಿದ್ದಾನೆ. ವಿಭಾಗ ಮಟ್ಟದ ಹ್ಯಾಂಡಬಾಲ್ ಸ್ಪರ್ಧೆಯಲ್ಲೂ ಭಾಗವಹಿಸಿದ್ದಾನೆ. ಶಾಲೆಯಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾನೆ’ ಎಂದು ಪ್ರಶಂಶಿಸಿದರು.</p>.<p>ತಂದೆ ಸದಾಶಿವ ಮಾತನಾಡಿ, ‘ಸುಮಿತ ಸದಾ ಕ್ರೀಯಾಶೀಲನಾಗಿರುತ್ತಾನೆ. ಎಲ್ಲರೊಂದಿಗೆ ಸದಾ ನಗುತ್ತ ಗೌರವದಿಂದ ಮಾತನಾಡಿಸುವ ವ್ಯಕ್ತಿತ್ವ ಹೊಂದಿದ್ದಾನೆ. ಆರ್.ಎಸ್.ಎಸ್ ಸ್ವಯಂ ಸೇವಕನಾಗಿದ್ದಾನೆ’ ಎಂದರು.</p>.<p>ಸುಮಿತ ಜೊತೆಗೆ ಆತನ ತಾಯಿ ಮೀನಾಕ್ಷಿ ಪೋತದಾರ ಹಾಗೂ ಶಿಕ್ಷಕಿ ರುಕ್ಮಿಣಿಬಾಯಿ ಕಳ್ಳಿಮನಿ ದೆಹಲಿಗೆ ಹೋಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವದತ್ತಿ :</strong> ಇಲ್ಲಿನ ಆದರ್ಶ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಸುಮಿತ ಸದಾಶಿವ ಪೋತದಾರ ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಜೊತೆ ನಡೆಸಿದ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾನೆ.</p>.<p>ಈ ಕಾರ್ಯಕ್ರಮವನ್ನು ಶಾಲೆಯಲ್ಲಿ ಪ್ರೊಜೆಕ್ಟರ್ ಮೂಲಕ ದೊಡ್ಡ ಪರದೆಯ ಮೇಲೆ ವಿದ್ಯಾರ್ಥಿಗಳಿಗೆ ತೋರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಮಾತುಗಳನ್ನು ವಿದ್ಯಾರ್ಥಿಗಳು ಅತ್ಯಂತ ಶ್ರದ್ಧೆಯಿಂದ ಆಲಿಸಿದರು.</p>.<p>ಟಿ.ವಿ ಪರದೆ ಮೇಲೆ ಸುಮಿತ ಕಂಡಾಗ ವಿದ್ಯಾರ್ಥಿಗಳು ಪುಳಕಿತರಾಗುತ್ತಿದ್ದರು. ‘ಹೋ..’ ಎಂದು ಸಣ್ಣದಾಗಿ ಕೂಗುತ್ತಿದ್ದರು. ಆತ ನಮ್ಮೆಲ್ಲರ ಪ್ರತಿನಿಧಿಯಾಗಿ ಭಾಗಿಯಾಗಿದ್ದಾನೆ. ಆತ ನಮ್ಮ ಶಾಲೆಗೆ ಹೆಮ್ಮೆ ತಂದಿದ್ದಾನೆ ಎಂದು ಸ್ನೇಹಿತ ವಿದ್ಯಾರ್ಥಿಗಳು ಕೊಂಡಾಡಿದರು.</p>.<p>ಶಾಲೆಯ ಮುಖ್ಯೋಪಾಧ್ಯಾಯ ಬಿ.ಎನ್ ಬ್ಯಾಳಿ ಮಾತನಾಡಿ, ‘ಸುಮಿತ ಆದರ್ಶ ವಿದ್ಯಾರ್ಥಿಯಾಗಿದ್ದಾನೆ. ವಿಭಾಗ ಮಟ್ಟದ ಹ್ಯಾಂಡಬಾಲ್ ಸ್ಪರ್ಧೆಯಲ್ಲೂ ಭಾಗವಹಿಸಿದ್ದಾನೆ. ಶಾಲೆಯಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾನೆ’ ಎಂದು ಪ್ರಶಂಶಿಸಿದರು.</p>.<p>ತಂದೆ ಸದಾಶಿವ ಮಾತನಾಡಿ, ‘ಸುಮಿತ ಸದಾ ಕ್ರೀಯಾಶೀಲನಾಗಿರುತ್ತಾನೆ. ಎಲ್ಲರೊಂದಿಗೆ ಸದಾ ನಗುತ್ತ ಗೌರವದಿಂದ ಮಾತನಾಡಿಸುವ ವ್ಯಕ್ತಿತ್ವ ಹೊಂದಿದ್ದಾನೆ. ಆರ್.ಎಸ್.ಎಸ್ ಸ್ವಯಂ ಸೇವಕನಾಗಿದ್ದಾನೆ’ ಎಂದರು.</p>.<p>ಸುಮಿತ ಜೊತೆಗೆ ಆತನ ತಾಯಿ ಮೀನಾಕ್ಷಿ ಪೋತದಾರ ಹಾಗೂ ಶಿಕ್ಷಕಿ ರುಕ್ಮಿಣಿಬಾಯಿ ಕಳ್ಳಿಮನಿ ದೆಹಲಿಗೆ ಹೋಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>