<p>ಶಹಾಬಾದ್: ‘ಸಮಾಜದಲ್ಲಿನ ಕೆಡುಕು ತಿದ್ದುವ ಶಕ್ತಿ ಶಿಕ್ಷಣಕ್ಕಿದೆ, ಗುಡಿ–ಗುಂಡಾರಗಳಿಗಿಲ್ಲ. ಅವು ನಮ್ಮನ್ನು ಕಣ್ಣು ಮುಚ್ಚಿಸುತ್ತವೆ ಗ್ರಂಥಾಲಯ ನಮ್ಮ ಕಣ್ಣನ್ನು ತೆರೆಯುತ್ತದೆ’ ಎಂದು ಮೈಸೂರಿನ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.</p>.<p>ನಗರದ ರಾಯಲ್ ಫಂಕ್ಷನ್ ಹಾಲ್ನಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ನಿಮಿತ್ತ ಆಯೋಜಿಸಲಾಗಿದ್ದ ‘ಅಂಬೇಡ್ಕರ್ ಹಬ್ಬ’ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಉಪನ್ಯಾಸಕರಾಗಿ ಆಗಮಿಸಿದ ವಿಜಯಕುಮಾರ ಸಾಲಿಮನಿ ಮಾತನಾಡಿ, ‘ಜಗತ್ತು ಅಂಬೇಡ್ಕರ್ ಅವರ ಜ್ಞಾನವನ್ನು ನೋಡುತ್ತಿದೆ. ಆದರೆ, ನಮ್ಮ ಭಾರತದಲ್ಲಿ ಅವರ ಜಾತಿಯನ್ನು ನೋಡುತ್ತಿರುವುದು ಬದಲಾಗಬೇಕು’ ಎಂದು ಹೇಳಿದರು.</p>.<p>ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಹಾಗೂ ಜಿ.ಪಂ ಮಾಜಿ ಸದಸ್ಯ ಶಿವಾನಂದ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಣದೂರಿನ ವರಜ್ಯೋತಿ ಭಂತೇಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಎಂ.ಎ.ರಶೀದ್, ಸುರೇಶ ಮೆಂಗನ, ಅಣ್ಣಾರಾವ ಪಾಟೀಲ, ಡಾ.ಫಾರೂಕ್ ಮಣ್ಣೂರ, ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ರಾಜೇಶ ಯನಗುಂಟಿಕರ, ಗೌರವಾಧ್ಯಕ್ಷ ವಸಂತ ಕಾಂಬಳೆ, ಪಿಐ ಪರಶುರಾಮ ವನಂಜಕರ, ಮಾಣಿಕಗೌಡ ಪಾಟೀಲ, ಭೀಮಾಶಂಕರ ಖೇಣಿ, ಸತೀಶ ಕೋಬಾಳ, ಸುನಿಲ ದೊಡ್ಡಮನಿ, ಮಲ್ಲಣ್ಣ ಮಸ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p>ಪೂಜಪ್ಪ ಮೈತ್ರಿ, ಪ್ರವೀಣ ರಾಜನ್ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು. ಬಸವೇಶ್ವರ ವೃತ್ತದಿಂದ ಪ್ರಮುಖ ಬೀದಿಯಲ್ಲಿ ಅಂಬೇಡ್ಕರ್ ಪುತ್ಥಳಿಯನ್ನು ಮೆರವಣಿಗೆ ಮಾಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-31-1252910407</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಹಾಬಾದ್: ‘ಸಮಾಜದಲ್ಲಿನ ಕೆಡುಕು ತಿದ್ದುವ ಶಕ್ತಿ ಶಿಕ್ಷಣಕ್ಕಿದೆ, ಗುಡಿ–ಗುಂಡಾರಗಳಿಗಿಲ್ಲ. ಅವು ನಮ್ಮನ್ನು ಕಣ್ಣು ಮುಚ್ಚಿಸುತ್ತವೆ ಗ್ರಂಥಾಲಯ ನಮ್ಮ ಕಣ್ಣನ್ನು ತೆರೆಯುತ್ತದೆ’ ಎಂದು ಮೈಸೂರಿನ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.</p>.<p>ನಗರದ ರಾಯಲ್ ಫಂಕ್ಷನ್ ಹಾಲ್ನಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ನಿಮಿತ್ತ ಆಯೋಜಿಸಲಾಗಿದ್ದ ‘ಅಂಬೇಡ್ಕರ್ ಹಬ್ಬ’ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಉಪನ್ಯಾಸಕರಾಗಿ ಆಗಮಿಸಿದ ವಿಜಯಕುಮಾರ ಸಾಲಿಮನಿ ಮಾತನಾಡಿ, ‘ಜಗತ್ತು ಅಂಬೇಡ್ಕರ್ ಅವರ ಜ್ಞಾನವನ್ನು ನೋಡುತ್ತಿದೆ. ಆದರೆ, ನಮ್ಮ ಭಾರತದಲ್ಲಿ ಅವರ ಜಾತಿಯನ್ನು ನೋಡುತ್ತಿರುವುದು ಬದಲಾಗಬೇಕು’ ಎಂದು ಹೇಳಿದರು.</p>.<p>ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಹಾಗೂ ಜಿ.ಪಂ ಮಾಜಿ ಸದಸ್ಯ ಶಿವಾನಂದ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಣದೂರಿನ ವರಜ್ಯೋತಿ ಭಂತೇಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಎಂ.ಎ.ರಶೀದ್, ಸುರೇಶ ಮೆಂಗನ, ಅಣ್ಣಾರಾವ ಪಾಟೀಲ, ಡಾ.ಫಾರೂಕ್ ಮಣ್ಣೂರ, ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ರಾಜೇಶ ಯನಗುಂಟಿಕರ, ಗೌರವಾಧ್ಯಕ್ಷ ವಸಂತ ಕಾಂಬಳೆ, ಪಿಐ ಪರಶುರಾಮ ವನಂಜಕರ, ಮಾಣಿಕಗೌಡ ಪಾಟೀಲ, ಭೀಮಾಶಂಕರ ಖೇಣಿ, ಸತೀಶ ಕೋಬಾಳ, ಸುನಿಲ ದೊಡ್ಡಮನಿ, ಮಲ್ಲಣ್ಣ ಮಸ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p>ಪೂಜಪ್ಪ ಮೈತ್ರಿ, ಪ್ರವೀಣ ರಾಜನ್ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು. ಬಸವೇಶ್ವರ ವೃತ್ತದಿಂದ ಪ್ರಮುಖ ಬೀದಿಯಲ್ಲಿ ಅಂಬೇಡ್ಕರ್ ಪುತ್ಥಳಿಯನ್ನು ಮೆರವಣಿಗೆ ಮಾಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-31-1252910407</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>