<p>ಶಿಡ್ಲಘಟ್ಟ: ‘ವಿಶೇಷಚೇತನರಲ್ಲಿ ಮಾನಸಿಕ ಹಾಗೂ ದೈಹಿಕ ದೃಢತೆ ಹೆಚ್ಚಿಸುವ ಉದ್ದೇಶದಿಂದ ಕ್ರೀಡಾಕೂಟ ಆಯೋಜಿಸಲಾಗಿದೆ’ ಎಂದು ಎಸ್ಸಿಐ ನವಜೀವನ ಸ್ವಯಂ ಸೇವಾ ಸಂಸ್ಥೆಯ ಅಧ್ಯಕ್ಷ ಮುನಿರಾಜು ಹೇಳಿದರು.</p>.<p>ನಗರದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ನವಜೀವನ ಸೇವಾ ಸಂಸ್ಥೆ, ಮಾರ್ಗದರ್ಶಿ ವಿಕಲಚೇತನರ ಸೇವಾ ಸಂಸ್ಥೆ ಹಾಗೂ ಸ್ಟೇಟ್ಸ್ಟ್ರೀಟ್ ಕಂಪನಿಯ ಸಹಯೋಗದಲ್ಲಿ ಬೆನ್ನುಹುರಿ ಅಪಘಾತಕ್ಕೆ ಒಳಗಾದ ಅಂಗವಿಕಲರಿಗೆ ಹಮ್ಮಿಕೊಂಡಿದ್ದ ಕ್ರೀಡಾಕೂಟದಲ್ಲಿ ಮಾತನಾಡಿದರು.</p>.<p>ಬೆನ್ನುಹುರಿ ಅಪಘಾತಕ್ಕೆ ಒಳಗಾದ ಬಹುತೇಕರು ಮನೆಯಲ್ಲಿಯೇ ಉಳಿದುಕೊಳ್ಳುವುದರಿಂದ ಒಂಟಿತನ, ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ಕ್ರೀಡಾಕೂಟ ಆಯೋಜಿಸಿದೆ ಎಂದರು.</p>.<p>ಕ್ರೀಡಾಕೂಟದಲ್ಲಿ ಸುಮಾರು 30ಕ್ಕೂ ಹೆಚ್ಚು ಅಂಗವಿಕಲರು ಪಾಲ್ಗೊಂಡಿದ್ದರು.</p>.<p>ಎಸ್ಸಿಐ ನವಜೀವನ ಸೇವಾ ಸಂಸ್ಥೆ ಕಾರ್ಯದರ್ಶಿ ಕೆ.ಪಿ.ರವಿ, ಉಪಾಧ್ಯಕ್ಷ ಮಂಜುನಾಥ್, ಖಜಾಂಚಿ ರಾಮಾಂಜಿ, ಮಾರ್ಗದರ್ಶಿ ವಿಕಲಚೇತನರ ಸೇವಾ ಸಂಸ್ಥೆ ಕಾರ್ಯದರ್ಶಿ ಗೀತಾಮೃತ, ಖಜಾಂಚಿ ವೆಂಕಟಾಚಲಂ, ಎಪಿಡಿ ಸಂಸ್ಥೆಯ ಗಿರಿಜಾ, ನಿರ್ದೇಶಕಿ ನೇತ್ರ, ಸ್ಟೇಟ್ ಸ್ಟ್ರೀಟ್ ಕಂಪನಿಯ 20 ಸ್ವಯಂ ಸೇವಕರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-16-2023970288</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ‘ವಿಶೇಷಚೇತನರಲ್ಲಿ ಮಾನಸಿಕ ಹಾಗೂ ದೈಹಿಕ ದೃಢತೆ ಹೆಚ್ಚಿಸುವ ಉದ್ದೇಶದಿಂದ ಕ್ರೀಡಾಕೂಟ ಆಯೋಜಿಸಲಾಗಿದೆ’ ಎಂದು ಎಸ್ಸಿಐ ನವಜೀವನ ಸ್ವಯಂ ಸೇವಾ ಸಂಸ್ಥೆಯ ಅಧ್ಯಕ್ಷ ಮುನಿರಾಜು ಹೇಳಿದರು.</p>.<p>ನಗರದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ನವಜೀವನ ಸೇವಾ ಸಂಸ್ಥೆ, ಮಾರ್ಗದರ್ಶಿ ವಿಕಲಚೇತನರ ಸೇವಾ ಸಂಸ್ಥೆ ಹಾಗೂ ಸ್ಟೇಟ್ಸ್ಟ್ರೀಟ್ ಕಂಪನಿಯ ಸಹಯೋಗದಲ್ಲಿ ಬೆನ್ನುಹುರಿ ಅಪಘಾತಕ್ಕೆ ಒಳಗಾದ ಅಂಗವಿಕಲರಿಗೆ ಹಮ್ಮಿಕೊಂಡಿದ್ದ ಕ್ರೀಡಾಕೂಟದಲ್ಲಿ ಮಾತನಾಡಿದರು.</p>.<p>ಬೆನ್ನುಹುರಿ ಅಪಘಾತಕ್ಕೆ ಒಳಗಾದ ಬಹುತೇಕರು ಮನೆಯಲ್ಲಿಯೇ ಉಳಿದುಕೊಳ್ಳುವುದರಿಂದ ಒಂಟಿತನ, ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ಕ್ರೀಡಾಕೂಟ ಆಯೋಜಿಸಿದೆ ಎಂದರು.</p>.<p>ಕ್ರೀಡಾಕೂಟದಲ್ಲಿ ಸುಮಾರು 30ಕ್ಕೂ ಹೆಚ್ಚು ಅಂಗವಿಕಲರು ಪಾಲ್ಗೊಂಡಿದ್ದರು.</p>.<p>ಎಸ್ಸಿಐ ನವಜೀವನ ಸೇವಾ ಸಂಸ್ಥೆ ಕಾರ್ಯದರ್ಶಿ ಕೆ.ಪಿ.ರವಿ, ಉಪಾಧ್ಯಕ್ಷ ಮಂಜುನಾಥ್, ಖಜಾಂಚಿ ರಾಮಾಂಜಿ, ಮಾರ್ಗದರ್ಶಿ ವಿಕಲಚೇತನರ ಸೇವಾ ಸಂಸ್ಥೆ ಕಾರ್ಯದರ್ಶಿ ಗೀತಾಮೃತ, ಖಜಾಂಚಿ ವೆಂಕಟಾಚಲಂ, ಎಪಿಡಿ ಸಂಸ್ಥೆಯ ಗಿರಿಜಾ, ನಿರ್ದೇಶಕಿ ನೇತ್ರ, ಸ್ಟೇಟ್ ಸ್ಟ್ರೀಟ್ ಕಂಪನಿಯ 20 ಸ್ವಯಂ ಸೇವಕರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-16-2023970288</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>