<p>ಶಿಡ್ಲಘಟ್ಟ: ವಿದ್ಯಾರ್ಥಿಗಳು ಮತ್ತು ಯುವ ಜನರ ಮೇಲೆ ಈ ಸಮಾಜ ಬಹಳ ನಿರೀಕ್ಷೆ ಇಟ್ಟುಕೊಂಡಿದೆ. ನಿರೀಕ್ಷೆಗಳನ್ನು ಹುಸಿಗೊಳಿಸದೆ ಎಲ್ಲವನ್ನೂ ಸಾಕಾರಗೊಳಿಸುವ ನಿಟ್ಟಿನಲ್ಲಿ ಬದುಕು ಸಾಗಬೇಕು ಎಂದು ವಿಜಯಪುರದ ಗುರಪ್ಪಸ್ವಾಮಿ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಹಂಡಿಗನಾಳದ ವೀರಣ್ಣಸ್ವಾಮಿ ಕೆಂಪಣ್ಣಸ್ವಾಮಿ ದೇವಾಲಯ ಟ್ರಸ್ಟ್ ಹಂಡಿಗನಾಳದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 12ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ವೀರಣ್ಣ ಕೆಂಪಣ್ಣ ಈ ನೆಲದ ಸಾಂಸ್ಕೃತಿಕ ಪ್ರತಿನಿಧಿಗಳು, ರಾಯಭಾರಿಗಳು. ಧ್ವನಿ ಇಲ್ಲದವರ ಪರ, ಶೋಷಿತರ ಪರ ನಿಂತವರು ಮತ್ತು ಅವರ ತ್ಯಾಗ, ದಾನ ಧರ್ಮದ ಒಳ್ಳೆಯ ಚಿಂತನೆಗಳಿಂದ ಮತ್ತು ಹಾಗೆ ಬದುಕಿ ದೇವರ ಸ್ವರೂಪ ಪಡೆದವರು ಎಂದು ಹೇಳಿದರು.</p>.<p>ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಮಾತನಾಡಿ, ಶಿಕ್ಷಣ ಬದುಕನ್ನು ರೂಪಿಸುತ್ತದೆ. ಸ್ಪರ್ಧಾ ಯುಗದಲ್ಲಿ ಕೇವಲ ಶಿಕ್ಷಣ ಪಡೆದರಷ್ಟೆ ಸಾಲದು, ವೃತ್ತಿ ಕೌಶಲ ಪಡೆದು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದರು.</p>.<p>ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ 120 ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ, ನಗದು ನೀಡಿ ಪುರಸ್ಕರಿಸಲಾಯಿತು.</p>.<p>ಜ್ಯೋತಿಪುರ ಚಿರಾಗ್, ಸಾವುಕನಹಳ್ಳಿ ಲಾವಣ್ಯ, ಮೇಲೂರು ಡಾ.ವರಲಕ್ಷ್ಮಿ ನವೀನ್ಗೌಡ, ಮಲ್ಲೇನಹಳ್ಳಿ ಡಾ.ದಾಮಿನಿ, ಜಂಗಾಲಹಳ್ಳಿ ಜೆ.ಎನ್.ಮನೀಷ ಅವರನ್ನು ಸನ್ಮಾನಿಸಲಾಯಿತು.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿದರು. ಎನ್.ನಾಗರಾಜ್, ಬಿಳಿಶಿವಾಲೆ ರವಿ, ಅಶ್ವತ್ಥಯ್ಯ, ಮುನಿಸ್ವಾಮಿಗೌಡ, ರಾಮದಾಸ್, ಸ್ಕೂಲ್ ದೇವರಾಜ್, ಗೊರಮಡಗು ರಾಜಣ್ಣ, ಆನೂರು ವಿಜಯೇಂದ್ರ, ಡಾ.ನವೀನ್, ಸೌಭಾಗ್ಯ, ರಾಜಗೋಪಾಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-16-109733271</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ವಿದ್ಯಾರ್ಥಿಗಳು ಮತ್ತು ಯುವ ಜನರ ಮೇಲೆ ಈ ಸಮಾಜ ಬಹಳ ನಿರೀಕ್ಷೆ ಇಟ್ಟುಕೊಂಡಿದೆ. ನಿರೀಕ್ಷೆಗಳನ್ನು ಹುಸಿಗೊಳಿಸದೆ ಎಲ್ಲವನ್ನೂ ಸಾಕಾರಗೊಳಿಸುವ ನಿಟ್ಟಿನಲ್ಲಿ ಬದುಕು ಸಾಗಬೇಕು ಎಂದು ವಿಜಯಪುರದ ಗುರಪ್ಪಸ್ವಾಮಿ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಹಂಡಿಗನಾಳದ ವೀರಣ್ಣಸ್ವಾಮಿ ಕೆಂಪಣ್ಣಸ್ವಾಮಿ ದೇವಾಲಯ ಟ್ರಸ್ಟ್ ಹಂಡಿಗನಾಳದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 12ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ವೀರಣ್ಣ ಕೆಂಪಣ್ಣ ಈ ನೆಲದ ಸಾಂಸ್ಕೃತಿಕ ಪ್ರತಿನಿಧಿಗಳು, ರಾಯಭಾರಿಗಳು. ಧ್ವನಿ ಇಲ್ಲದವರ ಪರ, ಶೋಷಿತರ ಪರ ನಿಂತವರು ಮತ್ತು ಅವರ ತ್ಯಾಗ, ದಾನ ಧರ್ಮದ ಒಳ್ಳೆಯ ಚಿಂತನೆಗಳಿಂದ ಮತ್ತು ಹಾಗೆ ಬದುಕಿ ದೇವರ ಸ್ವರೂಪ ಪಡೆದವರು ಎಂದು ಹೇಳಿದರು.</p>.<p>ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಮಾತನಾಡಿ, ಶಿಕ್ಷಣ ಬದುಕನ್ನು ರೂಪಿಸುತ್ತದೆ. ಸ್ಪರ್ಧಾ ಯುಗದಲ್ಲಿ ಕೇವಲ ಶಿಕ್ಷಣ ಪಡೆದರಷ್ಟೆ ಸಾಲದು, ವೃತ್ತಿ ಕೌಶಲ ಪಡೆದು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದರು.</p>.<p>ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ 120 ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ, ನಗದು ನೀಡಿ ಪುರಸ್ಕರಿಸಲಾಯಿತು.</p>.<p>ಜ್ಯೋತಿಪುರ ಚಿರಾಗ್, ಸಾವುಕನಹಳ್ಳಿ ಲಾವಣ್ಯ, ಮೇಲೂರು ಡಾ.ವರಲಕ್ಷ್ಮಿ ನವೀನ್ಗೌಡ, ಮಲ್ಲೇನಹಳ್ಳಿ ಡಾ.ದಾಮಿನಿ, ಜಂಗಾಲಹಳ್ಳಿ ಜೆ.ಎನ್.ಮನೀಷ ಅವರನ್ನು ಸನ್ಮಾನಿಸಲಾಯಿತು.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿದರು. ಎನ್.ನಾಗರಾಜ್, ಬಿಳಿಶಿವಾಲೆ ರವಿ, ಅಶ್ವತ್ಥಯ್ಯ, ಮುನಿಸ್ವಾಮಿಗೌಡ, ರಾಮದಾಸ್, ಸ್ಕೂಲ್ ದೇವರಾಜ್, ಗೊರಮಡಗು ರಾಜಣ್ಣ, ಆನೂರು ವಿಜಯೇಂದ್ರ, ಡಾ.ನವೀನ್, ಸೌಭಾಗ್ಯ, ರಾಜಗೋಪಾಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-16-109733271</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>