<p>ಶಿಗ್ಗಾವಿ: ಬಡವರು ಹಾಗೂ ಕೂಲಿ ಕಾರ್ಮಿಕರ ಮಕ್ಕಳು ಓದುತ್ತಿರುವ, ಇಲ್ಲಿಯ ಆಶ್ರಯ ಕಾಲೊನಿಯಲ್ಲಿರುವ ಸರ್ಕಾರಿ ಪ್ರೌಢಶಾಲೆಯು ಮೂಲ ಸೌಕರ್ಯವಿಲ್ಲದೇ ನರಳುತ್ತಿದೆ.</p>.<p>8ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಓದುತ್ತಿರುವ ಶಾಲೆಯು ಸ್ಥಾಪನೆಯಾಗಿ 20 ವರ್ಷ ಕಳೆದರೂ ಅಭಿವೃದ್ಧಿ ಮರೀಚಿಕೆಯಾಗಿದೆ. ಮೂಲ ಸೌಕರ್ಯಗಳ ಕೊರತೆ ನಡುವೆಯೂ ಶಾಲೆಯಲ್ಲಿ ಸುಮಾರು 200 ಮಕ್ಕಳು ಓದುತ್ತಿದ್ದಾರೆ.</p>.<p>ಪ್ರತಿ ವರ್ಷವೂ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಸುಮಾರು 200 ಮಕ್ಕಳಿಗೆ ಕೇವಲ 11 ಶಿಕ್ಷಕರಿದ್ದಾರೆ. ಆದರೂ ಪ್ರತಿ ವರ್ಷ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುತ್ತಿದ್ದಾರೆ.</p>.<p>‘ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು. ಕನ್ನಡ ಭಾಷೆ ಬಳಕೆಯ ಜತೆಗೆ ಬೆಳವಣಿಗೆಯಾಗಬೇಕು’ ಎಂದು ವೇದಿಕೆಯಲ್ಲಿ ಭಾಷಣ ಮಾಡುವ ಜನಪ್ರತಿನಿಧಿಗಳು, ಅಧಿಕಾರಿಗಳು ಈ ಶಾಲೆಯತ್ತ ಗಮನ ಹರಿಸದಿರುವುದು ಸ್ಥಳೀಯರ ಬೇಸರಕ್ಕೆ ಕಾರಣವಾಗಿದೆ.</p>.<p>ಈ ಸರ್ಕಾರಿ ಪ್ರೌಢ ಶಾಲೆಯು ಪಟ್ಟಣದಿಂದ ಹೊರವಲಯದಲ್ಲಿದೆ. ಇದೇ ಕಾರಣಕ್ಕೆ ಅಭಿವೃದ್ಧಿಯಾಗುತ್ತಿಲ್ಲವೆಂಬ ಅಳಲು ಸ್ಥಳೀಯರದ್ದು.</p>.<p>ಶಾಲೆಗೆ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ಕು ಕಿಡಿಗೇಡಿಗಳು ಒಡೆದುಹಾಕಿದ್ದಾರೆ. ಶೌಚಾಲಯಗಳು ಮತ್ತು ಅಡುಗೆ ಕೊಠಡಿಗಳ ಬಾಗಿಲಗಳನ್ನು ಮುರಿದು ಹಾಕಿದ್ದಾರೆ. ರಾತ್ರಿ ವೇಳೆ ಕಿಡಿಗೇಡಿಗಳು ಶಾಲಾ ಕೊಠಡಿಗಳ ಮುಂದೆ ಕುಳಿತು ಮದ್ಯದ ಪಾರ್ಟಿ ಮಾಡಿ ಗಲೀಜು ಮಾಡುತ್ತಿದ್ದಾರೆ.</p>.<p>ಶಾಲೆ ಆವರಣದಲ್ಲಿ ನಿತ್ಯವೂ ಬೆಳಿಗ್ಗೆ ಖಾಲಿ ಬಾಟಲಿಗಳು, ಪ್ಲಾಸ್ಟಿಕ್ ಚೀಲಗಳು, ಅರ್ಧ ತಿದ್ದು ಬಿಸಾಡಿದ ಆಹಾರ ಪೊಟ್ಟಣಗಳು, ಪಾನ ಬೀಡಾ ತಿದ್ದು ಉಗುಳಿರುವ ಕಲೆಗಳೇ ಕಣ್ಣಿಗೆ ರಾಚುತ್ತಿವೆ. ಅಲ್ಲದೆ, ಅಕ್ರಮ ಚಟುವಟಿಗಳು ಸಹ ನಡೆಯುತ್ತಿವೆ.</p>.<p>ಜ್ಞಾನ ನೀಡುವ ತಾಣದಲ್ಲಿ ಇಂತಹಅನೈತಿಕ ಚಟುವಟಿಕೆಗಳು ನಡೆಯುವುದುಪ್ರಜ್ಞಾವಂತ ಜನರ ತಲೆ ತಗ್ಗಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು, ಶಾಲೆ ಉಳಿವಿಗೆ ಗಮನ ಹರಿಸಬೇಕು. ಇಲ್ಲದಿದ್ದರೆ, ಹೋರಾಟ ಆರಂಭಿಸುವುದಾಗಿ ಪೋಷಕರು ಎಚ್ಚರಿಸುತ್ತಿದ್ದಾರೆ.</p>.<p>‘ಶಾಲೆಗಳ ಕೊಠಡಿಗಳನ್ನು ಕಿಡಿಗೇಡಿಗಳು ಹಾಳು ಮಾಡುತ್ತಿದ್ದಾರೆ. ಮೈದಾನದಲ್ಲಿನ ಸಸಿಗಳನ್ನು ಹಾಳು ಮಾಡಿದ್ದಾರೆ. ಸಿ.ಸಿ.ಟಿ.ವಿ. ಕ್ಯಾಮೆರಾ, ಶೌಚಾಲಯಗಳ ಬಾಗಿಲು ಮುರಿದು, ನೀರಿನ ಟ್ಯಾಂಕ್ ಕಳವು ಮಾಡಿದ್ದಾರೆ. ಶಾಲೆಗೆ ಪೊಲೀಸರು ಭದ್ರತೆ ನೀಡಬೇಕಿದೆ’ ಎಂದು ಸ್ಥಳೀಯ ನಿವಾಸಿ ಷಣ್ಮುಖಪ್ಪ ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-22-1779898633</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಗ್ಗಾವಿ: ಬಡವರು ಹಾಗೂ ಕೂಲಿ ಕಾರ್ಮಿಕರ ಮಕ್ಕಳು ಓದುತ್ತಿರುವ, ಇಲ್ಲಿಯ ಆಶ್ರಯ ಕಾಲೊನಿಯಲ್ಲಿರುವ ಸರ್ಕಾರಿ ಪ್ರೌಢಶಾಲೆಯು ಮೂಲ ಸೌಕರ್ಯವಿಲ್ಲದೇ ನರಳುತ್ತಿದೆ.</p>.<p>8ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಓದುತ್ತಿರುವ ಶಾಲೆಯು ಸ್ಥಾಪನೆಯಾಗಿ 20 ವರ್ಷ ಕಳೆದರೂ ಅಭಿವೃದ್ಧಿ ಮರೀಚಿಕೆಯಾಗಿದೆ. ಮೂಲ ಸೌಕರ್ಯಗಳ ಕೊರತೆ ನಡುವೆಯೂ ಶಾಲೆಯಲ್ಲಿ ಸುಮಾರು 200 ಮಕ್ಕಳು ಓದುತ್ತಿದ್ದಾರೆ.</p>.<p>ಪ್ರತಿ ವರ್ಷವೂ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಸುಮಾರು 200 ಮಕ್ಕಳಿಗೆ ಕೇವಲ 11 ಶಿಕ್ಷಕರಿದ್ದಾರೆ. ಆದರೂ ಪ್ರತಿ ವರ್ಷ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುತ್ತಿದ್ದಾರೆ.</p>.<p>‘ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು. ಕನ್ನಡ ಭಾಷೆ ಬಳಕೆಯ ಜತೆಗೆ ಬೆಳವಣಿಗೆಯಾಗಬೇಕು’ ಎಂದು ವೇದಿಕೆಯಲ್ಲಿ ಭಾಷಣ ಮಾಡುವ ಜನಪ್ರತಿನಿಧಿಗಳು, ಅಧಿಕಾರಿಗಳು ಈ ಶಾಲೆಯತ್ತ ಗಮನ ಹರಿಸದಿರುವುದು ಸ್ಥಳೀಯರ ಬೇಸರಕ್ಕೆ ಕಾರಣವಾಗಿದೆ.</p>.<p>ಈ ಸರ್ಕಾರಿ ಪ್ರೌಢ ಶಾಲೆಯು ಪಟ್ಟಣದಿಂದ ಹೊರವಲಯದಲ್ಲಿದೆ. ಇದೇ ಕಾರಣಕ್ಕೆ ಅಭಿವೃದ್ಧಿಯಾಗುತ್ತಿಲ್ಲವೆಂಬ ಅಳಲು ಸ್ಥಳೀಯರದ್ದು.</p>.<p>ಶಾಲೆಗೆ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ಕು ಕಿಡಿಗೇಡಿಗಳು ಒಡೆದುಹಾಕಿದ್ದಾರೆ. ಶೌಚಾಲಯಗಳು ಮತ್ತು ಅಡುಗೆ ಕೊಠಡಿಗಳ ಬಾಗಿಲಗಳನ್ನು ಮುರಿದು ಹಾಕಿದ್ದಾರೆ. ರಾತ್ರಿ ವೇಳೆ ಕಿಡಿಗೇಡಿಗಳು ಶಾಲಾ ಕೊಠಡಿಗಳ ಮುಂದೆ ಕುಳಿತು ಮದ್ಯದ ಪಾರ್ಟಿ ಮಾಡಿ ಗಲೀಜು ಮಾಡುತ್ತಿದ್ದಾರೆ.</p>.<p>ಶಾಲೆ ಆವರಣದಲ್ಲಿ ನಿತ್ಯವೂ ಬೆಳಿಗ್ಗೆ ಖಾಲಿ ಬಾಟಲಿಗಳು, ಪ್ಲಾಸ್ಟಿಕ್ ಚೀಲಗಳು, ಅರ್ಧ ತಿದ್ದು ಬಿಸಾಡಿದ ಆಹಾರ ಪೊಟ್ಟಣಗಳು, ಪಾನ ಬೀಡಾ ತಿದ್ದು ಉಗುಳಿರುವ ಕಲೆಗಳೇ ಕಣ್ಣಿಗೆ ರಾಚುತ್ತಿವೆ. ಅಲ್ಲದೆ, ಅಕ್ರಮ ಚಟುವಟಿಗಳು ಸಹ ನಡೆಯುತ್ತಿವೆ.</p>.<p>ಜ್ಞಾನ ನೀಡುವ ತಾಣದಲ್ಲಿ ಇಂತಹಅನೈತಿಕ ಚಟುವಟಿಕೆಗಳು ನಡೆಯುವುದುಪ್ರಜ್ಞಾವಂತ ಜನರ ತಲೆ ತಗ್ಗಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು, ಶಾಲೆ ಉಳಿವಿಗೆ ಗಮನ ಹರಿಸಬೇಕು. ಇಲ್ಲದಿದ್ದರೆ, ಹೋರಾಟ ಆರಂಭಿಸುವುದಾಗಿ ಪೋಷಕರು ಎಚ್ಚರಿಸುತ್ತಿದ್ದಾರೆ.</p>.<p>‘ಶಾಲೆಗಳ ಕೊಠಡಿಗಳನ್ನು ಕಿಡಿಗೇಡಿಗಳು ಹಾಳು ಮಾಡುತ್ತಿದ್ದಾರೆ. ಮೈದಾನದಲ್ಲಿನ ಸಸಿಗಳನ್ನು ಹಾಳು ಮಾಡಿದ್ದಾರೆ. ಸಿ.ಸಿ.ಟಿ.ವಿ. ಕ್ಯಾಮೆರಾ, ಶೌಚಾಲಯಗಳ ಬಾಗಿಲು ಮುರಿದು, ನೀರಿನ ಟ್ಯಾಂಕ್ ಕಳವು ಮಾಡಿದ್ದಾರೆ. ಶಾಲೆಗೆ ಪೊಲೀಸರು ಭದ್ರತೆ ನೀಡಬೇಕಿದೆ’ ಎಂದು ಸ್ಥಳೀಯ ನಿವಾಸಿ ಷಣ್ಮುಖಪ್ಪ ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-22-1779898633</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>