<p>ಶಿಗ್ಗಾವಿ: ‘ರಕ್ತದಾನ ಶ್ರೇಷ್ಟವಾಗಿದ್ದು, ಜೀವ ಸಂಜೀವಿನಿ ಇದ್ದಂತೆ. ಪ್ರತಿಯೊಬ್ಬರು ರಕ್ತದಾನ ಮಾಡುವ ಮೂಲಕ ಜೀವದಾನ ಮಾಡುವ ಪರೋಪಕಾರದ ಗುಣಗಳನ್ನು ಬೆಳಸಿಕೊಳ್ಳಬೇಕು. ರಕ್ತದಾನ ಮಾಡಿರುವ ವ್ಯಕ್ತಿಯ ಆರೋಗ್ಯ ಉತ್ತಮವಾಗಿರಲು ಸಾಧ್ಯ’ ಎಂದು ಜಿಲ್ಲಾ ಆಸ್ಪತ್ರೆ ರಕ್ತನಿಧಿ ವೈದ್ಯಾಧಿಕಾರಿ ಡಾ.ಬಸವರಾಜ ತಳವಾರ ಸಲಹೆ ನೀಡಿದರು.</p>.<p>ಪಟ್ಟಣದ ಗೌರಮ್ಮ ಅಂಕಲಕೋಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಯುವ ರೆಡ್ ಕ್ರಾಸ್, ಕನ್ನಡ ನುಡಿ ವೇದಿಕೆ, ರೋವರ್ಸ್ ಮತ್ತು ರೇಂಜರ್ಸ್, ಜಿಲ್ಲಾ ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ , ಶಿಗ್ಗಾವಿ ರಕ್ತ ಶೇಖರಣಾ ಘಟಕದ ಸಹಯೋಗದಲ್ಲಿ ಶುಕ್ರವಾರ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಒಬ್ಬರು ಮಾಡುವ ರಕ್ತದಾನದಿಂದ ಮೂರು ಜನರ ಜೀವ ಉಳಿಸಬಹುದು. ರಕ್ತ ದಾನದಿಂದ ಸಂತೃಪ್ತಿ, ಹೃದಯದ ಆರೋಗ್ಯ, ಸಾಮಾಜಿಕ ಮನೋಭಾವ, ಹೊಸ ರಕ್ತಕಣಗಳ ಉತ್ಪತ್ತಿಯಂತಹ ಪ್ರಯೋಜನ ಪಡೆಯಲು ಸಾಧ್ಯ’ ಎಂದರು.</p>.<p>ಅಂಕಲಕೋಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎ.ಸಿ. ವಾಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಕಳೆದ ಹತ್ತು ವರ್ಷಗಳಿಂದ ಈ ಕಾಲೇಜು ನಾಲ್ಕು ಸಾವಿರ ಜೀವಗಳನ್ನು ಉಳಿಸುವ ಕೆಲಸ ಮಾಡಿದೆ. ಇಂದಿನ ಶಿಬಿರದಲ್ಲಿ ಒಟ್ಟು 55 ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದ್ದು, ವಿದ್ಯಾರ್ಥಿನಿಯರು ರಕ್ತದಾನ ಮಾಡಿದ್ದಾರೆ’ ಎಂದರು.</p>.<p>ಜಿಲ್ಲಾ ಆಸ್ಪತ್ರೆ ರಕ್ತನಿಧಿ ಆಪ್ತ ಸಮಾಲೋಚಕ ರೇವಣ್ಣ ತೆಂಬದ, ಪ್ರೊ.ಆನಂದ ಇಂದೂರ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕರಾದ ಆರ್.ಪಿ. ನದಾಫ್, ಮಹಂತೇಶ ಪಾಟೀಲ, ವಿನಯ ಕುಲಕರ್ಣಿ, ಡಿ.ಎಸ್. ಭಟ್ , ಡಿ.ಎಸ್. ಸೊಗಲದ, ಮೇಘ ಚಲವಾದಿ, ಅಂಬಿಳಿ ಪಿಳ್ಳೆ, ಮುತ್ತು ಸುಣಗಾರ, ಆರ್.ಪಿ.ನದಾಫ್, ಪ್ರಬಲ ರೋಡ್ಡಣ್ಣನವರ, ಸೌಭಾಗ್ಯ ದೊಡ್ಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-22-355560160</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಗ್ಗಾವಿ: ‘ರಕ್ತದಾನ ಶ್ರೇಷ್ಟವಾಗಿದ್ದು, ಜೀವ ಸಂಜೀವಿನಿ ಇದ್ದಂತೆ. ಪ್ರತಿಯೊಬ್ಬರು ರಕ್ತದಾನ ಮಾಡುವ ಮೂಲಕ ಜೀವದಾನ ಮಾಡುವ ಪರೋಪಕಾರದ ಗುಣಗಳನ್ನು ಬೆಳಸಿಕೊಳ್ಳಬೇಕು. ರಕ್ತದಾನ ಮಾಡಿರುವ ವ್ಯಕ್ತಿಯ ಆರೋಗ್ಯ ಉತ್ತಮವಾಗಿರಲು ಸಾಧ್ಯ’ ಎಂದು ಜಿಲ್ಲಾ ಆಸ್ಪತ್ರೆ ರಕ್ತನಿಧಿ ವೈದ್ಯಾಧಿಕಾರಿ ಡಾ.ಬಸವರಾಜ ತಳವಾರ ಸಲಹೆ ನೀಡಿದರು.</p>.<p>ಪಟ್ಟಣದ ಗೌರಮ್ಮ ಅಂಕಲಕೋಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಯುವ ರೆಡ್ ಕ್ರಾಸ್, ಕನ್ನಡ ನುಡಿ ವೇದಿಕೆ, ರೋವರ್ಸ್ ಮತ್ತು ರೇಂಜರ್ಸ್, ಜಿಲ್ಲಾ ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ , ಶಿಗ್ಗಾವಿ ರಕ್ತ ಶೇಖರಣಾ ಘಟಕದ ಸಹಯೋಗದಲ್ಲಿ ಶುಕ್ರವಾರ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಒಬ್ಬರು ಮಾಡುವ ರಕ್ತದಾನದಿಂದ ಮೂರು ಜನರ ಜೀವ ಉಳಿಸಬಹುದು. ರಕ್ತ ದಾನದಿಂದ ಸಂತೃಪ್ತಿ, ಹೃದಯದ ಆರೋಗ್ಯ, ಸಾಮಾಜಿಕ ಮನೋಭಾವ, ಹೊಸ ರಕ್ತಕಣಗಳ ಉತ್ಪತ್ತಿಯಂತಹ ಪ್ರಯೋಜನ ಪಡೆಯಲು ಸಾಧ್ಯ’ ಎಂದರು.</p>.<p>ಅಂಕಲಕೋಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎ.ಸಿ. ವಾಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಕಳೆದ ಹತ್ತು ವರ್ಷಗಳಿಂದ ಈ ಕಾಲೇಜು ನಾಲ್ಕು ಸಾವಿರ ಜೀವಗಳನ್ನು ಉಳಿಸುವ ಕೆಲಸ ಮಾಡಿದೆ. ಇಂದಿನ ಶಿಬಿರದಲ್ಲಿ ಒಟ್ಟು 55 ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದ್ದು, ವಿದ್ಯಾರ್ಥಿನಿಯರು ರಕ್ತದಾನ ಮಾಡಿದ್ದಾರೆ’ ಎಂದರು.</p>.<p>ಜಿಲ್ಲಾ ಆಸ್ಪತ್ರೆ ರಕ್ತನಿಧಿ ಆಪ್ತ ಸಮಾಲೋಚಕ ರೇವಣ್ಣ ತೆಂಬದ, ಪ್ರೊ.ಆನಂದ ಇಂದೂರ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕರಾದ ಆರ್.ಪಿ. ನದಾಫ್, ಮಹಂತೇಶ ಪಾಟೀಲ, ವಿನಯ ಕುಲಕರ್ಣಿ, ಡಿ.ಎಸ್. ಭಟ್ , ಡಿ.ಎಸ್. ಸೊಗಲದ, ಮೇಘ ಚಲವಾದಿ, ಅಂಬಿಳಿ ಪಿಳ್ಳೆ, ಮುತ್ತು ಸುಣಗಾರ, ಆರ್.ಪಿ.ನದಾಫ್, ಪ್ರಬಲ ರೋಡ್ಡಣ್ಣನವರ, ಸೌಭಾಗ್ಯ ದೊಡ್ಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-22-355560160</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>