<p>ಶಿರಾ: ನಗರದ ಸಪ್ತಗಿರಿ ಬಡಾವಣೆಯಲ್ಲಿ ಸೋಮವಾರ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಮನೆಮನೆಗೆ ತೆರಳಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಪೋಷಕರ ಮನವೊಲಿಸಿದರು.</p>.<p>‘ನಿಮ್ಮ ಆಯ್ಕೆ ಸರ್ಕಾರಿ ಶಾಲೆಗಳೇ ಆಗಿರಲಿ’ ಎಂಬ ಘೋಷಣೆಯೊಂದಿಗೆ ವಿಶೇಷ ಜನಜಾಗೃತಿ ಆಂದೋಲನ ನಡೆಸಿದರು.</p>.<p>ನಗರದ ಪ್ರವಾಸಿ ಮಂದಿರ ವೃತ್ತದಲ್ಲಿ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಹಾಗೂ ಸ್ವಂತ ಬಂಡವಾಳದಲ್ಲಿ ಸುಮಾರು ₹5 ಕೋಟಿ ವೆಚ್ಚದಲ್ಲಿ ಹೈ–ಟೆಕ್ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢಶಾಲೆ ನಿರ್ಮಿಸಿದ್ದು, ಎಲ್ಲಾ ರೀತಿಯ ಸೌಕರ್ಯಗಳೊಂದಿಗೆ ಇಲ್ಲಿ ಉಚಿತ ಹಾಗೂ ಅತ್ಯುನ್ನತ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್, ಭಾಸ್ಕರ್, ಗೌಡಪ್ಪ, ತೇಜಸ್ವರ್, ಭೂತರಾಜು, ರಂಗನಾಥ್, ಡಿ.ಎಚ್.ಗೌಡ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-17-1188331288</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಾ: ನಗರದ ಸಪ್ತಗಿರಿ ಬಡಾವಣೆಯಲ್ಲಿ ಸೋಮವಾರ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಮನೆಮನೆಗೆ ತೆರಳಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಪೋಷಕರ ಮನವೊಲಿಸಿದರು.</p>.<p>‘ನಿಮ್ಮ ಆಯ್ಕೆ ಸರ್ಕಾರಿ ಶಾಲೆಗಳೇ ಆಗಿರಲಿ’ ಎಂಬ ಘೋಷಣೆಯೊಂದಿಗೆ ವಿಶೇಷ ಜನಜಾಗೃತಿ ಆಂದೋಲನ ನಡೆಸಿದರು.</p>.<p>ನಗರದ ಪ್ರವಾಸಿ ಮಂದಿರ ವೃತ್ತದಲ್ಲಿ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಹಾಗೂ ಸ್ವಂತ ಬಂಡವಾಳದಲ್ಲಿ ಸುಮಾರು ₹5 ಕೋಟಿ ವೆಚ್ಚದಲ್ಲಿ ಹೈ–ಟೆಕ್ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢಶಾಲೆ ನಿರ್ಮಿಸಿದ್ದು, ಎಲ್ಲಾ ರೀತಿಯ ಸೌಕರ್ಯಗಳೊಂದಿಗೆ ಇಲ್ಲಿ ಉಚಿತ ಹಾಗೂ ಅತ್ಯುನ್ನತ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್, ಭಾಸ್ಕರ್, ಗೌಡಪ್ಪ, ತೇಜಸ್ವರ್, ಭೂತರಾಜು, ರಂಗನಾಥ್, ಡಿ.ಎಚ್.ಗೌಡ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-17-1188331288</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>