<p>ಶಿರಾ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಸಂಸ್ಕಾರ ಮತ್ತು ಸಮನ್ವಯತೆ ರೂಢಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ಶರಣ ಸಾಹಿತ್ಯ ಮತ್ತು ಸಂತ ಶಿಶುನಾಳ ಶರೀಫರ ತತ್ವ ಪ್ರಚಾರಕ ಎಂ.ಸಿ. ನರಸಿಂಹಮೂರ್ತಿ ಹೇಳಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025- 26ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಯುವಜನತೆ ದೇಶದ ಸಂಸ್ಕೃತಿ ಮತ್ತು ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಅತ್ಯುತ್ತಮ ಆಕರ ಗ್ರಂಥಗಳನ್ನು ಓದುವುದರ ಮೂಲಕ ಅದರಲ್ಲಿ ಇರುವ ಸಾರಾಂಶಗಳನ್ನು ತಮ್ಮ ಬದುಕಿಗೆ ಅಳವಡಿಸಿಕೊಳ್ಳಬೇಕು ಎಂದರು.</p>.<p>ಪ್ರಾಂಶುಪಾಲ ಪ್ರೊ.ಡಿ.ಚಂದ್ರಶೇಖರಪ್ಪ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳಿಗೂ ಒತ್ತು ನೀಡಬೇಕು ಎಂದರು.</p>.<p>ಸಾಂಸ್ಕೃತಿಕ ಸಮಿತಿ ಸಂಚಾಲಕ ಹೊನ್ನಾಂಜಿನಯ್ಯ ಡಿ.ಆರ್. ಅವರು 2025- 26ನೇ ಶೈಕ್ಷಣಿಕ ಸಾಲಿನಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಿದರು.</p>.<p>ಪ್ರಾಧ್ಯಾಪಕ ಬಾಳಪ್ಪ ಎ.ಬಿ., ಪ್ರಭಾಸ್ ಪಂಡಿತ್, ಹನುಮಂತರಾಜು, ಪತ್ರಾಂಕಿತ ವ್ಯವಸ್ಥಾಪಕ ಕೆ.ವಿ.ಶ್ರೀನಿವಾಸ್ ಮೂರ್ತಿ, ಲಿಂಗರಾಜು, ತಿಪ್ಪೇಸ್ವಾಮಿ, ವೆಂಕಟನಾರಾಯಣ್ ಎಸ್., ಲೆಫ್ಟಿನೆಂಟ್ ಶ್ರೀಕೃಷ್ಣ ವಿ.ವೈ., ಸತೀಶ್ ಕುಮಾರ್, ಮಮತಾ, ಕಾವ್ಯಶ್ರೀ, ಹರೀಶ್, ಕುಮಾರ್, ವೀಣಾ, ಸುಕನ್ಯಾ ಟಿ.ಎಲ್., ಪ್ರತಿಭಾ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-17-626398704</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಾ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಸಂಸ್ಕಾರ ಮತ್ತು ಸಮನ್ವಯತೆ ರೂಢಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ಶರಣ ಸಾಹಿತ್ಯ ಮತ್ತು ಸಂತ ಶಿಶುನಾಳ ಶರೀಫರ ತತ್ವ ಪ್ರಚಾರಕ ಎಂ.ಸಿ. ನರಸಿಂಹಮೂರ್ತಿ ಹೇಳಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025- 26ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಯುವಜನತೆ ದೇಶದ ಸಂಸ್ಕೃತಿ ಮತ್ತು ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಅತ್ಯುತ್ತಮ ಆಕರ ಗ್ರಂಥಗಳನ್ನು ಓದುವುದರ ಮೂಲಕ ಅದರಲ್ಲಿ ಇರುವ ಸಾರಾಂಶಗಳನ್ನು ತಮ್ಮ ಬದುಕಿಗೆ ಅಳವಡಿಸಿಕೊಳ್ಳಬೇಕು ಎಂದರು.</p>.<p>ಪ್ರಾಂಶುಪಾಲ ಪ್ರೊ.ಡಿ.ಚಂದ್ರಶೇಖರಪ್ಪ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳಿಗೂ ಒತ್ತು ನೀಡಬೇಕು ಎಂದರು.</p>.<p>ಸಾಂಸ್ಕೃತಿಕ ಸಮಿತಿ ಸಂಚಾಲಕ ಹೊನ್ನಾಂಜಿನಯ್ಯ ಡಿ.ಆರ್. ಅವರು 2025- 26ನೇ ಶೈಕ್ಷಣಿಕ ಸಾಲಿನಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಿದರು.</p>.<p>ಪ್ರಾಧ್ಯಾಪಕ ಬಾಳಪ್ಪ ಎ.ಬಿ., ಪ್ರಭಾಸ್ ಪಂಡಿತ್, ಹನುಮಂತರಾಜು, ಪತ್ರಾಂಕಿತ ವ್ಯವಸ್ಥಾಪಕ ಕೆ.ವಿ.ಶ್ರೀನಿವಾಸ್ ಮೂರ್ತಿ, ಲಿಂಗರಾಜು, ತಿಪ್ಪೇಸ್ವಾಮಿ, ವೆಂಕಟನಾರಾಯಣ್ ಎಸ್., ಲೆಫ್ಟಿನೆಂಟ್ ಶ್ರೀಕೃಷ್ಣ ವಿ.ವೈ., ಸತೀಶ್ ಕುಮಾರ್, ಮಮತಾ, ಕಾವ್ಯಶ್ರೀ, ಹರೀಶ್, ಕುಮಾರ್, ವೀಣಾ, ಸುಕನ್ಯಾ ಟಿ.ಎಲ್., ಪ್ರತಿಭಾ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-17-626398704</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>