<p>ಶಿರಸಿ: ‘ಇಂದಿನ ಆಧುನಿಕ ಜೀವನಶೈಲಿಯಲ್ಲಿ ಮನುಷ್ಯ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ. ನಮ್ಮ ಪೂರ್ವಜರು ಬಳುವಳಿಯಾಗಿ ನೀಡಿದ ಪುರಾತನ ಆಯುರ್ವೇದ ಚಿಕಿತ್ಸಾ ಪದ್ಧತಿಯು ರೋಗ ಮುಕ್ತ ಮತ್ತು ಸದೃಢ ಸಮಾಜದ ನಿರ್ಮಾಣಕ್ಕೆ ಅತ್ಯಂತ ಪೂರಕವಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ನಗರದ ಕೆ.ಎಚ್.ಬಿ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮೃದ್ಧಿ ಮಹಿಳಾ ಮಂಡಳ ಹಾಗೂ ವಿವಿಧ ಸಮಾನ ಮನಸ್ಕ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಬೃಹತ್ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>'ಅನಾರೋಗ್ಯಕ್ಕೆ ತುತ್ತಾದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಮುಖ್ಯ. ಆ ನಿಟ್ಟಿನಲ್ಲಿ ಆಯುರ್ವೇದವು ಜೀವನ ಕ್ರಮದ ಬಗ್ಗೆ ನಮಗೆ ತಿಳಿಸಿಕೊಡುತ್ತದೆ. ಸಂಘ ಸಂಸ್ಥೆಗಳು ಇಂತಹ ಜನಪದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವೈದ್ಯಕೀಯ ಸೌಲಭ್ಯ ತಲುಪಿಸುವಂತಾಗಬೇಕು. ಇಂತಹ ಉಚಿತ ಆರೋಗ್ಯ ಶಿಬಿರಗಳ ಪ್ರಯೋಜನ ಪಡೆಯಿರಿ ಎಂದರು.</p>.<p>ಪ್ರಮುಖರಾದ ಎಸ್.ಕೆ. ಭಾಗವತ, ಸರಸ್ವತಿ ಎನ್. ರವಿ, ಎಸ್.ಎನ್.ಹೆಗಡೆ ಉಪಸ್ಥಿತರಿದ್ದರು.</p>.<p>ಇದೇ ಸಂದರ್ಭದಲ್ಲಿ ಸಮೃದ್ಧಿ ಮಹಿಳಾ ಮಂಡಳದ ಪದಾಧಿಕಾರಿಗಳು ಹಾಗೂ ಪಂಚವಟಿ ಚಾರಿಟೇಬಲ್ ಟ್ರಸ್ಟ್ನ ಸದಸ್ಯರು, ಸ್ಥಳೀಯರು ಭಾಗವಹಿಸಿ ಶಿಬಿರದ ನಿರ್ವಹಣೆಯಲ್ಲಿ ಸಹಕರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-20-824681547</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ‘ಇಂದಿನ ಆಧುನಿಕ ಜೀವನಶೈಲಿಯಲ್ಲಿ ಮನುಷ್ಯ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ. ನಮ್ಮ ಪೂರ್ವಜರು ಬಳುವಳಿಯಾಗಿ ನೀಡಿದ ಪುರಾತನ ಆಯುರ್ವೇದ ಚಿಕಿತ್ಸಾ ಪದ್ಧತಿಯು ರೋಗ ಮುಕ್ತ ಮತ್ತು ಸದೃಢ ಸಮಾಜದ ನಿರ್ಮಾಣಕ್ಕೆ ಅತ್ಯಂತ ಪೂರಕವಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ನಗರದ ಕೆ.ಎಚ್.ಬಿ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮೃದ್ಧಿ ಮಹಿಳಾ ಮಂಡಳ ಹಾಗೂ ವಿವಿಧ ಸಮಾನ ಮನಸ್ಕ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಬೃಹತ್ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>'ಅನಾರೋಗ್ಯಕ್ಕೆ ತುತ್ತಾದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಮುಖ್ಯ. ಆ ನಿಟ್ಟಿನಲ್ಲಿ ಆಯುರ್ವೇದವು ಜೀವನ ಕ್ರಮದ ಬಗ್ಗೆ ನಮಗೆ ತಿಳಿಸಿಕೊಡುತ್ತದೆ. ಸಂಘ ಸಂಸ್ಥೆಗಳು ಇಂತಹ ಜನಪದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವೈದ್ಯಕೀಯ ಸೌಲಭ್ಯ ತಲುಪಿಸುವಂತಾಗಬೇಕು. ಇಂತಹ ಉಚಿತ ಆರೋಗ್ಯ ಶಿಬಿರಗಳ ಪ್ರಯೋಜನ ಪಡೆಯಿರಿ ಎಂದರು.</p>.<p>ಪ್ರಮುಖರಾದ ಎಸ್.ಕೆ. ಭಾಗವತ, ಸರಸ್ವತಿ ಎನ್. ರವಿ, ಎಸ್.ಎನ್.ಹೆಗಡೆ ಉಪಸ್ಥಿತರಿದ್ದರು.</p>.<p>ಇದೇ ಸಂದರ್ಭದಲ್ಲಿ ಸಮೃದ್ಧಿ ಮಹಿಳಾ ಮಂಡಳದ ಪದಾಧಿಕಾರಿಗಳು ಹಾಗೂ ಪಂಚವಟಿ ಚಾರಿಟೇಬಲ್ ಟ್ರಸ್ಟ್ನ ಸದಸ್ಯರು, ಸ್ಥಳೀಯರು ಭಾಗವಹಿಸಿ ಶಿಬಿರದ ನಿರ್ವಹಣೆಯಲ್ಲಿ ಸಹಕರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-20-824681547</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>