<p>ಶಿರಸಿ: ‘ಸೋಲದೆ ಗೆದ್ದರೆ ಅದು ಕೇವಲ ಮಂದಹಾಸ, ಆದರೆ ಸೋತು ಗೆದ್ದರೆ ಅದು ಇತಿಹಾಸ’ ಎಂದು ಮನುವಿಕಾಸ ಸಂಸ್ಥೆಯ ಅಧ್ಯಕ್ಷ ಗಣಪತಿ ಭಟ್ ಹೇಳಿದರು.</p>.<p>ಇತ್ತೀಚೆಗೆ ಇಲ್ಲಿನ ಪಿ.ಜಿ.ಎಸ್.ಎಸ್. ಕಾಲೇಜಿನ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಸುಲಭದ ಜೀವನ ಬಯಸುವುದನ್ನು ಬಿಟ್ಟು ಹೋರಾಟದ ಮನೋಭಾವ ಬೆಳೆಸಿಕೊಂಡರೆ ಜೀವನ ಉತ್ಸಾಹದಿಂದ ಕೂಡಿರುತ್ತದೆ’ ಎಂದು ಕಿವಿಮಾತು ಹೇಳಿದರು.</p>.<p>ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿದರು. ಡಿವೈಎಸ್ಪಿ ಗೀತಾ ಪಾಟೀಲ, ಧನುಷ್ಕುಮಾರ್ ಶೆಟ್ಟಿ, ಪ್ರಾಚಾರ್ಯ ರಾಜು ಎನ್. ಕದಂ ಮಾತನಾಡಿದರು. ಈ ವೇಳೆ ಸುದೀರ್ಘ ಸೇವೆ ಸಲ್ಲಿಸಿದ ಅಶ್ವಿನಿ ಬಿ.ಎಚ್. ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.</p>.<p>ರಾಷ್ಟ್ರೀಯ ಸುರಕ್ಷತಾ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ, ಕುಶಲಕರ್ಮಿಗಳಿಗೆ ಉಚಿತ ಹೆಲ್ಮೆಟ್ ವಿತರಿಸಲಾಯಿತು. ಶಿಕ್ಷಕರಾದ ಝೇಬಾ ಚಂದಾವರ ಸ್ವಾಗತಿಸಿದರು. ವಿ.ಎಸ್. ಪವಾರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-20-830441543</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ‘ಸೋಲದೆ ಗೆದ್ದರೆ ಅದು ಕೇವಲ ಮಂದಹಾಸ, ಆದರೆ ಸೋತು ಗೆದ್ದರೆ ಅದು ಇತಿಹಾಸ’ ಎಂದು ಮನುವಿಕಾಸ ಸಂಸ್ಥೆಯ ಅಧ್ಯಕ್ಷ ಗಣಪತಿ ಭಟ್ ಹೇಳಿದರು.</p>.<p>ಇತ್ತೀಚೆಗೆ ಇಲ್ಲಿನ ಪಿ.ಜಿ.ಎಸ್.ಎಸ್. ಕಾಲೇಜಿನ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಸುಲಭದ ಜೀವನ ಬಯಸುವುದನ್ನು ಬಿಟ್ಟು ಹೋರಾಟದ ಮನೋಭಾವ ಬೆಳೆಸಿಕೊಂಡರೆ ಜೀವನ ಉತ್ಸಾಹದಿಂದ ಕೂಡಿರುತ್ತದೆ’ ಎಂದು ಕಿವಿಮಾತು ಹೇಳಿದರು.</p>.<p>ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿದರು. ಡಿವೈಎಸ್ಪಿ ಗೀತಾ ಪಾಟೀಲ, ಧನುಷ್ಕುಮಾರ್ ಶೆಟ್ಟಿ, ಪ್ರಾಚಾರ್ಯ ರಾಜು ಎನ್. ಕದಂ ಮಾತನಾಡಿದರು. ಈ ವೇಳೆ ಸುದೀರ್ಘ ಸೇವೆ ಸಲ್ಲಿಸಿದ ಅಶ್ವಿನಿ ಬಿ.ಎಚ್. ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.</p>.<p>ರಾಷ್ಟ್ರೀಯ ಸುರಕ್ಷತಾ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ, ಕುಶಲಕರ್ಮಿಗಳಿಗೆ ಉಚಿತ ಹೆಲ್ಮೆಟ್ ವಿತರಿಸಲಾಯಿತು. ಶಿಕ್ಷಕರಾದ ಝೇಬಾ ಚಂದಾವರ ಸ್ವಾಗತಿಸಿದರು. ವಿ.ಎಸ್. ಪವಾರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-20-830441543</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>