<p>ಶಿರಸಿ: ‘ಪ್ರಸ್ತುತ ಸಮಾಜವನ್ನು ಶ್ರೇಷ್ಠತೆಯ ವ್ಯಸನ ಕಾಡುತ್ತಿದೆ. ಇಲ್ಲಿ ಎಲ್ಲಾ ವರ್ಗದವರೂ ಮುಖ್ಯವಾಗಿದ್ದು, ಎಲ್ಲರನ್ನೂ ಗೌರವಿಸಿದಾಗ ಮಾತ್ರ ಸಾಮಾಜಿಕ ಸಮತೋಲನ ಸಾಧ್ಯ’ ಎಂದು ಸಾಮಾಜಿಕ ಕಾರ್ಯಕರ್ತ ವಿ.ಪಿ.ಹೆಗಡೆ ವೈಶಾಲಿ ಹೇಳಿದರು.</p>.<p>ಇಲ್ಲಿನ ಎಂ.ಎಂ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜ್ ಉಪಸಮಿತಿ ಅಧ್ಯಕ್ಷ ಎಸ್.ಕೆ.ಭಾಗವತ ಮಾತನಾಡಿ, ‘ಜಿಲ್ಲೆಯಲ್ಲಿ ಅಕ್ಷರ ಜ್ಞಾನ ನೀಡಲು ಆರಂಭವಾದ ಎರಡನೇ ಮಹಾವಿದ್ಯಾಲಯ ಇದಾಗಿದ್ದು, ಜಿಲ್ಲೆಯಲ್ಲಿ ಶ್ರೇಷ್ಠ ಸ್ಥಾನ ಗಳಿಸಿದೆ’ ಎಂದರು.</p>.<p>ಇದೇ ಸಂದರ್ಭದಲ್ಲಿ ಎಂ.ಇ.ಎಸ್. ಸಂಸ್ಥಾಪಕ ಸದಸ್ಯರಾದ ತಿಮ್ಮಪ್ಪ ಹೆಗಡೆ ಬಿಸಲಕೊಪ್ಪ ಅವರ ಸಂಸ್ಮರಣೆಯ ಅಂಗವಾಗಿ, ಅವರ ಪುತ್ರ ಪ್ರಕಾಶ ಹೆಗಡೆ ಬಿಸಲಕೊಪ್ಪ ಅವರನ್ನು ಸನ್ಮಾನಿಸಲಾಯಿತು.</p>.<p>ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p>ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಗಣೇಶ ಹೆಗಡೆ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಪ್ರಾಚಾರ್ಯ ಪ್ರೊ. ಜಿ. ಟಿ.ಭಟ್ ಸ್ವಾಗತಿಸಿದರು. ಪ್ರೊ. ರಾಘವೇಂದ್ರ ಜಾಜಿಗುಡ್ಡೆ ವಂದಿಸಿದರು. ಪ್ರಾಧ್ಯಾಪಕಿಯರಾದ ದಿವ್ಯಾ ಹೆಗಡೆ, ವರ್ಷಾ ರಾಚೋಟಿ ಹಾಗೂ ಪ್ರಿಯಾ ಜೋಶಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-20-1752649685</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ‘ಪ್ರಸ್ತುತ ಸಮಾಜವನ್ನು ಶ್ರೇಷ್ಠತೆಯ ವ್ಯಸನ ಕಾಡುತ್ತಿದೆ. ಇಲ್ಲಿ ಎಲ್ಲಾ ವರ್ಗದವರೂ ಮುಖ್ಯವಾಗಿದ್ದು, ಎಲ್ಲರನ್ನೂ ಗೌರವಿಸಿದಾಗ ಮಾತ್ರ ಸಾಮಾಜಿಕ ಸಮತೋಲನ ಸಾಧ್ಯ’ ಎಂದು ಸಾಮಾಜಿಕ ಕಾರ್ಯಕರ್ತ ವಿ.ಪಿ.ಹೆಗಡೆ ವೈಶಾಲಿ ಹೇಳಿದರು.</p>.<p>ಇಲ್ಲಿನ ಎಂ.ಎಂ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜ್ ಉಪಸಮಿತಿ ಅಧ್ಯಕ್ಷ ಎಸ್.ಕೆ.ಭಾಗವತ ಮಾತನಾಡಿ, ‘ಜಿಲ್ಲೆಯಲ್ಲಿ ಅಕ್ಷರ ಜ್ಞಾನ ನೀಡಲು ಆರಂಭವಾದ ಎರಡನೇ ಮಹಾವಿದ್ಯಾಲಯ ಇದಾಗಿದ್ದು, ಜಿಲ್ಲೆಯಲ್ಲಿ ಶ್ರೇಷ್ಠ ಸ್ಥಾನ ಗಳಿಸಿದೆ’ ಎಂದರು.</p>.<p>ಇದೇ ಸಂದರ್ಭದಲ್ಲಿ ಎಂ.ಇ.ಎಸ್. ಸಂಸ್ಥಾಪಕ ಸದಸ್ಯರಾದ ತಿಮ್ಮಪ್ಪ ಹೆಗಡೆ ಬಿಸಲಕೊಪ್ಪ ಅವರ ಸಂಸ್ಮರಣೆಯ ಅಂಗವಾಗಿ, ಅವರ ಪುತ್ರ ಪ್ರಕಾಶ ಹೆಗಡೆ ಬಿಸಲಕೊಪ್ಪ ಅವರನ್ನು ಸನ್ಮಾನಿಸಲಾಯಿತು.</p>.<p>ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p>ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಗಣೇಶ ಹೆಗಡೆ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಪ್ರಾಚಾರ್ಯ ಪ್ರೊ. ಜಿ. ಟಿ.ಭಟ್ ಸ್ವಾಗತಿಸಿದರು. ಪ್ರೊ. ರಾಘವೇಂದ್ರ ಜಾಜಿಗುಡ್ಡೆ ವಂದಿಸಿದರು. ಪ್ರಾಧ್ಯಾಪಕಿಯರಾದ ದಿವ್ಯಾ ಹೆಗಡೆ, ವರ್ಷಾ ರಾಚೋಟಿ ಹಾಗೂ ಪ್ರಿಯಾ ಜೋಶಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-20-1752649685</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>