<p>ಶಿರಸಿ: ವಿಶ್ವ ಪರಂಪರಾ ದಿನದ ಅಂಗವಾಗಿ ತಾಲ್ಲೂಕಿನ ಐತಿಹಾಸಿಕ ಪರಂಪರೆಯ ಪ್ರಸಿದ್ಧ ನೆಲೆಯಾದ ಸೋಂದಾದಲ್ಲಿ ಶನಿವಾರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕ್ಷೇತ್ರಾಧ್ಯಯನ ಕಾರ್ಯಕ್ರಮವು ಅರ್ಥಪೂರ್ಣವಾಗಿ ಜರುಗಿತು. ರಂಗಚರಿತ ಸೋಂದಾ ಮತ್ತು ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಅಧ್ಯಯನ ಪ್ರವಾಸದ ನೇತೃತ್ವ ವಹಿಸಿದ್ದ ಹಿರಿಯ ಇತಿಹಾಸ ಸಂಶೋಧಕ ಲಕ್ಷ್ಮೀಶ ಸೋಂದಾ ಮಾತನಾಡಿ, ‘ಸೋಂದಾ ಕೇವಲ ಒಂದು ಗ್ರಾಮವಲ್ಲ, ಅದು ಕಲೆ, ಸಾಹಿತ್ಯ ಮತ್ತು ವಾಸ್ತುಶಿಲ್ಪದ ಭವ್ಯ ಇತಿಹಾಸವನ್ನು ತನ್ನೊಡಲಲ್ಲಿ ಇಟ್ಟುಕೊಂಡಿರುವ ಮಹಾನ್ ಸಂಸ್ಥಾನ. ಈ ಭವ್ಯ ಪರಂಪರೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಜ್ಞಾನಯಾನ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಕ್ಷೇತ್ರಾಧ್ಯಯನದ ತಂಡವು ಸೋಂದಾದ ಪ್ರಮುಖ ಐತಿಹಾಸಿಕ ತಾಣಗಳಿಗೆ ಭೇಟಿ ನೀಡಿತು. ಅಧ್ಯಾತ್ಮ ಮತ್ತು ಶಕ್ತಿಯ ಕೇಂದ್ರಗಳಾದ ಸ್ವರ್ಣವಲ್ಲೀ ಮಹಾಸಂಸ್ಥಾನ ಹಾಗೂ ವಾದಿರಾಜ ಮಠಗಳಿಂದ ಆರಂಭವಾದ ಈ ಪಯಣವು, ಅಲ್ಲಿನ ಶಿಲ್ಪಕಲೆ ಮತ್ತು ಸಂಪ್ರದಾಯಗಳ ಪರಿಚಯದೊಂದಿಗೆ ಮುಂದುವರಿಯಿತು. ನಂತರ ತಂಡವು ವಿಶಿಷ್ಟ ಶೈಲಿಯ ಹುಣಸೆಹೊಂಡ ದೇವಾಲಯ, ಮನಮೋಹಕ ಕೆರೆಯ ದಂಡೆಯಲ್ಲಿರುವ ಮುತ್ತಿನಕೆರೆ ವೆಂಕಟರಮಣ ದೇವಾಲಯ ಹಾಗೂ ಹಳೆಯೂರು ಶಂಕರ ನಾರಾಯಣ ದೇವಾಲಯಗಳಿಗೆ ಭೇಟಿ ನೀಡಿತು.</p>.<p>ಜತೆಗೆ, ಮಹಂತಿನ ಮಠ, ಜೈನ ನಿಷಧಿಗಳು ಹಾಗೂ ಐತಿಹಾಸಿಕ ಕೋಟೆಯ ಪ್ರದೇಶಗಳಿಗೂ ಭೇಟಿ ನೀಡಿ, ಸೋಂದಾದಲ್ಲಿದ್ದ ಸರ್ವಧರ್ಮ ಸಮನ್ವಯದ ಇತಿಹಾಸವನ್ನು ಮೆಲುಕು ಹಾಕಲಾಯಿತು. ಕೋಟೆಯ ಅವಶೇಷಗಳು ಮತ್ತು ಅಂದಿನ ರಕ್ಷಣಾ ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳು ಕುತೂಹಲದಿಂದ ಮಾಹಿತಿ ಪಡೆದುಕೊಂಡರು.</p>.<p>ಯಲ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಶಾಂತೇರಿ ಪೈ ಮತ್ತು ಉಮಾ ಗೌಡ ಉಪಸ್ಥಿತರಿದ್ದು, ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಅನುಭವಗಳನ್ನು ಹಂಚಿಕೊಂಡರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-20-2052028011</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ವಿಶ್ವ ಪರಂಪರಾ ದಿನದ ಅಂಗವಾಗಿ ತಾಲ್ಲೂಕಿನ ಐತಿಹಾಸಿಕ ಪರಂಪರೆಯ ಪ್ರಸಿದ್ಧ ನೆಲೆಯಾದ ಸೋಂದಾದಲ್ಲಿ ಶನಿವಾರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕ್ಷೇತ್ರಾಧ್ಯಯನ ಕಾರ್ಯಕ್ರಮವು ಅರ್ಥಪೂರ್ಣವಾಗಿ ಜರುಗಿತು. ರಂಗಚರಿತ ಸೋಂದಾ ಮತ್ತು ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಅಧ್ಯಯನ ಪ್ರವಾಸದ ನೇತೃತ್ವ ವಹಿಸಿದ್ದ ಹಿರಿಯ ಇತಿಹಾಸ ಸಂಶೋಧಕ ಲಕ್ಷ್ಮೀಶ ಸೋಂದಾ ಮಾತನಾಡಿ, ‘ಸೋಂದಾ ಕೇವಲ ಒಂದು ಗ್ರಾಮವಲ್ಲ, ಅದು ಕಲೆ, ಸಾಹಿತ್ಯ ಮತ್ತು ವಾಸ್ತುಶಿಲ್ಪದ ಭವ್ಯ ಇತಿಹಾಸವನ್ನು ತನ್ನೊಡಲಲ್ಲಿ ಇಟ್ಟುಕೊಂಡಿರುವ ಮಹಾನ್ ಸಂಸ್ಥಾನ. ಈ ಭವ್ಯ ಪರಂಪರೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಜ್ಞಾನಯಾನ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಕ್ಷೇತ್ರಾಧ್ಯಯನದ ತಂಡವು ಸೋಂದಾದ ಪ್ರಮುಖ ಐತಿಹಾಸಿಕ ತಾಣಗಳಿಗೆ ಭೇಟಿ ನೀಡಿತು. ಅಧ್ಯಾತ್ಮ ಮತ್ತು ಶಕ್ತಿಯ ಕೇಂದ್ರಗಳಾದ ಸ್ವರ್ಣವಲ್ಲೀ ಮಹಾಸಂಸ್ಥಾನ ಹಾಗೂ ವಾದಿರಾಜ ಮಠಗಳಿಂದ ಆರಂಭವಾದ ಈ ಪಯಣವು, ಅಲ್ಲಿನ ಶಿಲ್ಪಕಲೆ ಮತ್ತು ಸಂಪ್ರದಾಯಗಳ ಪರಿಚಯದೊಂದಿಗೆ ಮುಂದುವರಿಯಿತು. ನಂತರ ತಂಡವು ವಿಶಿಷ್ಟ ಶೈಲಿಯ ಹುಣಸೆಹೊಂಡ ದೇವಾಲಯ, ಮನಮೋಹಕ ಕೆರೆಯ ದಂಡೆಯಲ್ಲಿರುವ ಮುತ್ತಿನಕೆರೆ ವೆಂಕಟರಮಣ ದೇವಾಲಯ ಹಾಗೂ ಹಳೆಯೂರು ಶಂಕರ ನಾರಾಯಣ ದೇವಾಲಯಗಳಿಗೆ ಭೇಟಿ ನೀಡಿತು.</p>.<p>ಜತೆಗೆ, ಮಹಂತಿನ ಮಠ, ಜೈನ ನಿಷಧಿಗಳು ಹಾಗೂ ಐತಿಹಾಸಿಕ ಕೋಟೆಯ ಪ್ರದೇಶಗಳಿಗೂ ಭೇಟಿ ನೀಡಿ, ಸೋಂದಾದಲ್ಲಿದ್ದ ಸರ್ವಧರ್ಮ ಸಮನ್ವಯದ ಇತಿಹಾಸವನ್ನು ಮೆಲುಕು ಹಾಕಲಾಯಿತು. ಕೋಟೆಯ ಅವಶೇಷಗಳು ಮತ್ತು ಅಂದಿನ ರಕ್ಷಣಾ ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳು ಕುತೂಹಲದಿಂದ ಮಾಹಿತಿ ಪಡೆದುಕೊಂಡರು.</p>.<p>ಯಲ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಶಾಂತೇರಿ ಪೈ ಮತ್ತು ಉಮಾ ಗೌಡ ಉಪಸ್ಥಿತರಿದ್ದು, ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಅನುಭವಗಳನ್ನು ಹಂಚಿಕೊಂಡರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-20-2052028011</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>