<p>ಶಿರ್ವ: ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ 2003–04ನೇ ಶೈಕ್ಷಣಿಕ ವರ್ಷದ ಬಿ.ಕಾಂ ಹಳೆವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.</p>.<p>ಅಧ್ಯಕ್ಷತೆ ವಹಿಸಿದ್ದ ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ. ಭಾಸ್ಕರ್ ಶೆಟ್ಟಿ ಮಾತನಾಡಿ, ತಾವು ಕಲಿತ ಸಂಸ್ಥೆಯ ಬಗ್ಗೆ ಗೌರವಾದರ ಇಟ್ಟುಕೊಂಡು ಸಹಾಯ ಮಾಡುವುದು ಕ್ರಿಯಾಶೀಲ ವಿದ್ಯಾರ್ಥಿಗಳ ಹೆಗ್ಗುರುತು. ಈ ದಿಶೆಯಲ್ಲಿ ಸಂಸ್ಥೆ ವಿದ್ಯಾರ್ಥಿಗಳ ಕೊಡುಗೆಯನ್ನು ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದರು.</p>.<p>ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ, ಬದಲಾದ ಕಾಲಮಾನದಲ್ಲಿ ಹಳೆವಿದ್ಯಾರ್ಥಿಗಳು ಸಂಸ್ಥೆಗೆ ಬಂದು ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.</p>.<p>ಕಾರ್ಯಕ್ರಮದಲ್ಲಿ 2003–04ನೇ ಸಾಲಿನ ಉಪನ್ಯಾಸಕರು, ಕಚೇರಿ ಸಿಬ್ಬದಿ ಭಾಗವಹಿಸಿ ಅನಿಸಿಕೆಗಳನ್ನು ಹಂಚಿಕೊಂಡರು. ಹಳೆ ವಿದ್ಯಾರ್ಥಿಗಳು ಕಾಲೇಜಿನ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ₹1.50 ಲಕ್ಷ ದೇಣಿಗೆ ನೀಡಿದರು. ನಿವೃತ್ತ, ಪ್ರಸ್ತುತ ಇರುವ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಯನ್ನು ಸನ್ಮಾನಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸೋನಾ ಎಚ್.ಸಿ. ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-28-1257561014</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರ್ವ: ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ 2003–04ನೇ ಶೈಕ್ಷಣಿಕ ವರ್ಷದ ಬಿ.ಕಾಂ ಹಳೆವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.</p>.<p>ಅಧ್ಯಕ್ಷತೆ ವಹಿಸಿದ್ದ ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ. ಭಾಸ್ಕರ್ ಶೆಟ್ಟಿ ಮಾತನಾಡಿ, ತಾವು ಕಲಿತ ಸಂಸ್ಥೆಯ ಬಗ್ಗೆ ಗೌರವಾದರ ಇಟ್ಟುಕೊಂಡು ಸಹಾಯ ಮಾಡುವುದು ಕ್ರಿಯಾಶೀಲ ವಿದ್ಯಾರ್ಥಿಗಳ ಹೆಗ್ಗುರುತು. ಈ ದಿಶೆಯಲ್ಲಿ ಸಂಸ್ಥೆ ವಿದ್ಯಾರ್ಥಿಗಳ ಕೊಡುಗೆಯನ್ನು ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದರು.</p>.<p>ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ, ಬದಲಾದ ಕಾಲಮಾನದಲ್ಲಿ ಹಳೆವಿದ್ಯಾರ್ಥಿಗಳು ಸಂಸ್ಥೆಗೆ ಬಂದು ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.</p>.<p>ಕಾರ್ಯಕ್ರಮದಲ್ಲಿ 2003–04ನೇ ಸಾಲಿನ ಉಪನ್ಯಾಸಕರು, ಕಚೇರಿ ಸಿಬ್ಬದಿ ಭಾಗವಹಿಸಿ ಅನಿಸಿಕೆಗಳನ್ನು ಹಂಚಿಕೊಂಡರು. ಹಳೆ ವಿದ್ಯಾರ್ಥಿಗಳು ಕಾಲೇಜಿನ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ₹1.50 ಲಕ್ಷ ದೇಣಿಗೆ ನೀಡಿದರು. ನಿವೃತ್ತ, ಪ್ರಸ್ತುತ ಇರುವ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಯನ್ನು ಸನ್ಮಾನಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸೋನಾ ಎಚ್.ಸಿ. ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-28-1257561014</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>