<p>ಶಿವಮೊಗ್ಗ: ‘ಈ ಬಾರಿ ಜೂನ್ ಆರಂಭದಿಂದಲೇ ಅತಿಥಿ ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗುತ್ತಿದೆ. ಒಟ್ಟು 52 ಸಾವಿರ ‘ಅತಿಥಿ’ಗಳನ್ನು ನೇಮಕ ಮಾಡಿಕೊಳ್ಳಲಾಗುವುದು’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>ಜೂನ್ 1ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಎಸ್ ಶಾಲೆಗಳಿಗೆ ಚಾಲನೆ ನೀಡಲಿದ್ದು, ಈ ಕಾರ್ಯಕ್ರಮದ ಪೂರ್ವಸಿದ್ಧತೆ ಪರಿಶೀಲಿಸಲು ಶುಕ್ರವಾರ ಇಲ್ಲಿನ ಅಲ್ಲಮಪ್ರಭು ಮೈದಾನಕ್ಕೆ ಭೇಟಿ ನೀಡಿದ್ದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಶಿವಮೊಗ್ಗದಲ್ಲಿ 19 ಸೇರಿದಂತೆ ರಾಜ್ಯದಲ್ಲಿ 1,000 ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರತೀ ಶಾಲೆಗೆ ಕನಿಷ್ಠ ₹3.5 ಕೋಟಿ ವ್ಯಯಿಸಲಾಗುತ್ತಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಪರಿಕಲ್ಪನೆ ಈಗ ದೇಶದಲ್ಲಿಯೇ ಮಾದರಿ ಆಗಿದ್ದು, ಇದೇ ಮಾದರಿ ಅಳವಡಿಸಿಕೊಂಡು ತೆಲಂಗಾಣ ಸರ್ಕಾರ ಟಿಪಿಎಸ್ ಆರಂಭಿಸಲು ಮುಂದಾಗಿದೆ. ಆ ರಾಜ್ಯದ ಶಿಕ್ಷಣ ಇಲಾಖೆ ಅಧಿಕಾರಿಗಳು ಬೆಂಗಳೂರಿಗೆ ಬಂದು ಕೆಪಿಎಸ್ ಬಗ್ಗೆ ಅಧ್ಯಯನ ನಡೆಸಿದ್ದಾರೆ’ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>‘ಶಿಕ್ಷಣ ಇಲಾಖೆಯಲ್ಲಿ ಈ ಹಿಂದೆ ಇದ್ದ ಬಹಳಷ್ಟು ನ್ಯೂನತೆಗಳನ್ನು ಈಗ ಸರಿಪಡಿಸಲಾಗಿದೆ. ಶಿಕ್ಷಣದ ಗುಣಮಟ್ಟವೂ ಹೆಚ್ಚಾಗಿದ್ದು, ಈ ಬಾರಿಯ ಎಸ್ಎಸ್ಎಲ್ಸಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವವರ ಸಂಖ್ಯೆ ಶೇ 6.4ರಷ್ಟು ಹೆಚ್ಚಳಗೊಂಡಿರುವುದೇ ಅದಕ್ಕೆ ಸಾಕ್ಷಿ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-42-104156355</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ‘ಈ ಬಾರಿ ಜೂನ್ ಆರಂಭದಿಂದಲೇ ಅತಿಥಿ ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗುತ್ತಿದೆ. ಒಟ್ಟು 52 ಸಾವಿರ ‘ಅತಿಥಿ’ಗಳನ್ನು ನೇಮಕ ಮಾಡಿಕೊಳ್ಳಲಾಗುವುದು’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>ಜೂನ್ 1ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಎಸ್ ಶಾಲೆಗಳಿಗೆ ಚಾಲನೆ ನೀಡಲಿದ್ದು, ಈ ಕಾರ್ಯಕ್ರಮದ ಪೂರ್ವಸಿದ್ಧತೆ ಪರಿಶೀಲಿಸಲು ಶುಕ್ರವಾರ ಇಲ್ಲಿನ ಅಲ್ಲಮಪ್ರಭು ಮೈದಾನಕ್ಕೆ ಭೇಟಿ ನೀಡಿದ್ದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಶಿವಮೊಗ್ಗದಲ್ಲಿ 19 ಸೇರಿದಂತೆ ರಾಜ್ಯದಲ್ಲಿ 1,000 ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರತೀ ಶಾಲೆಗೆ ಕನಿಷ್ಠ ₹3.5 ಕೋಟಿ ವ್ಯಯಿಸಲಾಗುತ್ತಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಪರಿಕಲ್ಪನೆ ಈಗ ದೇಶದಲ್ಲಿಯೇ ಮಾದರಿ ಆಗಿದ್ದು, ಇದೇ ಮಾದರಿ ಅಳವಡಿಸಿಕೊಂಡು ತೆಲಂಗಾಣ ಸರ್ಕಾರ ಟಿಪಿಎಸ್ ಆರಂಭಿಸಲು ಮುಂದಾಗಿದೆ. ಆ ರಾಜ್ಯದ ಶಿಕ್ಷಣ ಇಲಾಖೆ ಅಧಿಕಾರಿಗಳು ಬೆಂಗಳೂರಿಗೆ ಬಂದು ಕೆಪಿಎಸ್ ಬಗ್ಗೆ ಅಧ್ಯಯನ ನಡೆಸಿದ್ದಾರೆ’ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>‘ಶಿಕ್ಷಣ ಇಲಾಖೆಯಲ್ಲಿ ಈ ಹಿಂದೆ ಇದ್ದ ಬಹಳಷ್ಟು ನ್ಯೂನತೆಗಳನ್ನು ಈಗ ಸರಿಪಡಿಸಲಾಗಿದೆ. ಶಿಕ್ಷಣದ ಗುಣಮಟ್ಟವೂ ಹೆಚ್ಚಾಗಿದ್ದು, ಈ ಬಾರಿಯ ಎಸ್ಎಸ್ಎಲ್ಸಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವವರ ಸಂಖ್ಯೆ ಶೇ 6.4ರಷ್ಟು ಹೆಚ್ಚಳಗೊಂಡಿರುವುದೇ ಅದಕ್ಕೆ ಸಾಕ್ಷಿ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-42-104156355</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>