<p>ಶಿವಮೊಗ್ಗ: ‘ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯಿಂದ ಮೇ 17ರಂದು ವಾರ್ಷಿಕ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ಸಂಘದ ಅಧ್ಯಕ್ಷ ಎಚ್.ಯು.ವೈದ್ಯನಾಥ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಅಂದು ಬೆಳಿಗ್ಗೆ 9 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಪತ್ರಿಕಾ ಭವನದಲ್ಲಿ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಸಮಾರಂಭವನ್ನು ಜಿ.ಪಂ ಸಿಇಒ ಎನ್.ಹೇಮಂತ್ ಉದ್ಘಾಟಿಸಲಿದ್ದಾರೆ’ ಎಂದರು.</p>.<p>‘ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಆರ್.ಪಿ.ಭರತ್ರಾಜ್ ಸಿಂಗ್, ಡಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ ಪುರಸ್ಕೃತರಾದ ಶರತ್ಕುಮಾರ್, ಅಭಿಮಾನಿ ಪ್ರಕಾಶನ ಪ್ರಶಸ್ತಿ ಪುರಸ್ಕೃತರಾದ ಮಹೇಶ್ ಹೆಗಡೆ, ಗಣೇಶ ಜಿ.ದತ್ತಿ ಪ್ರಶಸ್ತಿ ಪುರಸ್ಕೃತರಾದ ಅರುಣ್ ಮಾಸಡಿ ಇವರನ್ನು ಗೌರವಿಸಲಾಗುವುದು’ ಎಂದು ಹೇಳಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಎಸ್.ಹಾಲಸ್ವಾಮಿ, ಉಪಾಧ್ಯಕ್ಷರಾದ ಕೆ.ಎಸ್.ಹುಚ್ರಾಯಪ್ಪ, ಟಿ.ಸತ್ಯನಾರಾಯಣ, ದೇಶಾದ್ರಿ ಹೊಸ್ಮನೆ, ಕಾರ್ಯದರ್ಶಿ ಕೆ.ಆರ್.ಸೋಮನಾಥ್, ಖಜಾಂಚಿ ಎಸ್.ಆರ್.ರೋಹಿತ್, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ವಿ.ಶೆಟ್ಟಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-42-887809057</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ‘ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯಿಂದ ಮೇ 17ರಂದು ವಾರ್ಷಿಕ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ಸಂಘದ ಅಧ್ಯಕ್ಷ ಎಚ್.ಯು.ವೈದ್ಯನಾಥ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಅಂದು ಬೆಳಿಗ್ಗೆ 9 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಪತ್ರಿಕಾ ಭವನದಲ್ಲಿ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಸಮಾರಂಭವನ್ನು ಜಿ.ಪಂ ಸಿಇಒ ಎನ್.ಹೇಮಂತ್ ಉದ್ಘಾಟಿಸಲಿದ್ದಾರೆ’ ಎಂದರು.</p>.<p>‘ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಆರ್.ಪಿ.ಭರತ್ರಾಜ್ ಸಿಂಗ್, ಡಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ ಪುರಸ್ಕೃತರಾದ ಶರತ್ಕುಮಾರ್, ಅಭಿಮಾನಿ ಪ್ರಕಾಶನ ಪ್ರಶಸ್ತಿ ಪುರಸ್ಕೃತರಾದ ಮಹೇಶ್ ಹೆಗಡೆ, ಗಣೇಶ ಜಿ.ದತ್ತಿ ಪ್ರಶಸ್ತಿ ಪುರಸ್ಕೃತರಾದ ಅರುಣ್ ಮಾಸಡಿ ಇವರನ್ನು ಗೌರವಿಸಲಾಗುವುದು’ ಎಂದು ಹೇಳಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಎಸ್.ಹಾಲಸ್ವಾಮಿ, ಉಪಾಧ್ಯಕ್ಷರಾದ ಕೆ.ಎಸ್.ಹುಚ್ರಾಯಪ್ಪ, ಟಿ.ಸತ್ಯನಾರಾಯಣ, ದೇಶಾದ್ರಿ ಹೊಸ್ಮನೆ, ಕಾರ್ಯದರ್ಶಿ ಕೆ.ಆರ್.ಸೋಮನಾಥ್, ಖಜಾಂಚಿ ಎಸ್.ಆರ್.ರೋಹಿತ್, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ವಿ.ಶೆಟ್ಟಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-42-887809057</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>