<p>ಶಿವಮೊಗ್ಗ: ‘ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವರಿಗೆ ವಿಶಿಷ್ಟ ಹಕ್ಕುಗಳಿವೆ. ಅವರು ಆರೋಗ್ಯ, ಆಸ್ತಿ ರಕ್ಷಣೆ ಮಾಡಿಕೊಳ್ಳಲು ಉಚಿತ ಕಾನೂನಿನ ಸೇವೆಗಳನ್ನು ಸರ್ಕಾರ ಒದಗಿಸಿದೆ. ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಎ. ಮಂಜುನಾಥ್ ಸಲಹೆ ನೀಡಿದರು.</p>.<p>ನಗರದ ಮೆಗ್ಗಾನ್ ಆಸ್ಪತ್ರೆಯ ಮಾನಸಿಕ ಆರೋಗ್ಯ ವಿಮರ್ಶಾ ಮಂಡಳಿಯ ಕಚೇರಿಯಲ್ಲಿ ಬುಧವಾರ ಕಾನೂನು ಉಚಿತ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದರು.</p>.<p>‘ಮಾನಸಿಕ ಅಸ್ವಸ್ಥತೆಗೆ ಒಳಗಾದ ವ್ಯಕ್ತಿಗಳ ವೈದ್ಯಕೀಯ, ಆರೋಗ್ಯ, ಆಸ್ತಿ ರಕ್ಷಣೆಗೆ ಕಾನೂನು ಸೇವಾ ಪ್ರಾಧಿಕಾರದಡಿಯೂ ಸಹಾಯ ಲಭ್ಯವಿದೆ’ ಎಂದರು.</p>.<p>‘ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯ ಮಾನಸಿಕ ಆರೋಗ್ಯ ವಿಮರ್ಶಾ ಮಂಡಳಿಯ ಕಚೇರಿಯಲ್ಲಿ ಕಾನೂನು ಸಲಹಾ ಕೇಂದ್ರ ಸ್ಥಾಪಿಸಿರುವುದು ಬಹಳ ಉಪಯುಕ್ತ’ ಎಂದು ಅಧ್ಯಕ್ಷತೆ ವಹಿಸಿದ್ದ ಸಿಮ್ಸ್ ನಿರ್ದೇಶಕ ಡಾ.ವಿರೂಪಾಕ್ಷಪ್ಪ ಹೇಳಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>‘ಶಿವಮೊಗ್ಗದಲ್ಲಿ ಸಾರ್ವಜನಿಕರಿಗೆ ಕಾನೂನು ಸೇವೆಗಳನ್ನು ಒದಗಿಸಲು ಸಿಡಿಪಿಒ ಕಚೇರಿ, ಮೆಗ್ಗಾನ್ ಆಸ್ಪತ್ರೆಯ ಎಆರ್ಟಿ ಕ್ಲಿನಿಕ್, ಬಾಲನ್ಯಾಯ ಮಂಡಳಿ, ಜಿಲ್ಲಾ ಸೈನಿಕ ಬೋರ್ಡ್, ಹಿರಿಯ ನಾಗರಿಕರ ಸಹಾಯವಾಣಿ, ಕೇಂದ್ರ ಕಾರಾಗೃಹ ಹಾಗೂ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಕಾನೂನು ಸಲಹಾ ಕೇಂದ್ರಗಳ ತೆರೆದು ಅಲ್ಲಿ ನುರಿತ ವಕೀಲರನ್ನು ನಿಯೋಜಿಸಲಾಗಿದೆ’ ಎಂದರು.</p>.<p>‘ಮಕ್ಕಳು, ಮಹಿಳೆಯರು ಕಾಣೆಯಾದ ಬಗ್ಗೆ ದೂರು ನೀಡಲು ಬಂದವರಿಗೆ, ಕಾನೂನು ನೆರವು ಬಯಸುವ ಬಂಧಿತ ಆರೋಪಿಗಳಿಗೆ ಮಾಹಿತಿ ನೀಡಲು ದೊಡ್ಡಪೇಟೆ, ತುಂಗಾನಗರ ಹಾಗೂ ಮಹಿಳಾ ಪೊಲೀಸ್ ಠಾಣೆಗಳಲ್ಲಿ ತಲಾ ಒಬ್ಬ ಅರೆಕಾಲಿಕ ಕಾನೂನು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಟಿ.ಡಿ. ತಿಮ್ಮಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ. ಗೀತಾ, ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ರಾಮ್ ಪ್ರಸಾದ್, ಶುಶ್ರೂಷಕಾಧೀಕ್ಷಕಿ ಶೇಷಮ್ಮ, ಮಾನಸಿಕ ಆರೋಗ್ಯ ವಿಮರ್ಶಾ ಮಂಡಳಿ ಸದಸ್ಯೆ ರಜನಿ ಪೈ, ಪರಿಶೀಲನಾ ಮಂಡಳಿ ಸದಸ್ಯೆ ಶುಭ್ರತಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-42-1961479033</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ‘ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವರಿಗೆ ವಿಶಿಷ್ಟ ಹಕ್ಕುಗಳಿವೆ. ಅವರು ಆರೋಗ್ಯ, ಆಸ್ತಿ ರಕ್ಷಣೆ ಮಾಡಿಕೊಳ್ಳಲು ಉಚಿತ ಕಾನೂನಿನ ಸೇವೆಗಳನ್ನು ಸರ್ಕಾರ ಒದಗಿಸಿದೆ. ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಎ. ಮಂಜುನಾಥ್ ಸಲಹೆ ನೀಡಿದರು.</p>.<p>ನಗರದ ಮೆಗ್ಗಾನ್ ಆಸ್ಪತ್ರೆಯ ಮಾನಸಿಕ ಆರೋಗ್ಯ ವಿಮರ್ಶಾ ಮಂಡಳಿಯ ಕಚೇರಿಯಲ್ಲಿ ಬುಧವಾರ ಕಾನೂನು ಉಚಿತ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದರು.</p>.<p>‘ಮಾನಸಿಕ ಅಸ್ವಸ್ಥತೆಗೆ ಒಳಗಾದ ವ್ಯಕ್ತಿಗಳ ವೈದ್ಯಕೀಯ, ಆರೋಗ್ಯ, ಆಸ್ತಿ ರಕ್ಷಣೆಗೆ ಕಾನೂನು ಸೇವಾ ಪ್ರಾಧಿಕಾರದಡಿಯೂ ಸಹಾಯ ಲಭ್ಯವಿದೆ’ ಎಂದರು.</p>.<p>‘ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯ ಮಾನಸಿಕ ಆರೋಗ್ಯ ವಿಮರ್ಶಾ ಮಂಡಳಿಯ ಕಚೇರಿಯಲ್ಲಿ ಕಾನೂನು ಸಲಹಾ ಕೇಂದ್ರ ಸ್ಥಾಪಿಸಿರುವುದು ಬಹಳ ಉಪಯುಕ್ತ’ ಎಂದು ಅಧ್ಯಕ್ಷತೆ ವಹಿಸಿದ್ದ ಸಿಮ್ಸ್ ನಿರ್ದೇಶಕ ಡಾ.ವಿರೂಪಾಕ್ಷಪ್ಪ ಹೇಳಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>‘ಶಿವಮೊಗ್ಗದಲ್ಲಿ ಸಾರ್ವಜನಿಕರಿಗೆ ಕಾನೂನು ಸೇವೆಗಳನ್ನು ಒದಗಿಸಲು ಸಿಡಿಪಿಒ ಕಚೇರಿ, ಮೆಗ್ಗಾನ್ ಆಸ್ಪತ್ರೆಯ ಎಆರ್ಟಿ ಕ್ಲಿನಿಕ್, ಬಾಲನ್ಯಾಯ ಮಂಡಳಿ, ಜಿಲ್ಲಾ ಸೈನಿಕ ಬೋರ್ಡ್, ಹಿರಿಯ ನಾಗರಿಕರ ಸಹಾಯವಾಣಿ, ಕೇಂದ್ರ ಕಾರಾಗೃಹ ಹಾಗೂ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಕಾನೂನು ಸಲಹಾ ಕೇಂದ್ರಗಳ ತೆರೆದು ಅಲ್ಲಿ ನುರಿತ ವಕೀಲರನ್ನು ನಿಯೋಜಿಸಲಾಗಿದೆ’ ಎಂದರು.</p>.<p>‘ಮಕ್ಕಳು, ಮಹಿಳೆಯರು ಕಾಣೆಯಾದ ಬಗ್ಗೆ ದೂರು ನೀಡಲು ಬಂದವರಿಗೆ, ಕಾನೂನು ನೆರವು ಬಯಸುವ ಬಂಧಿತ ಆರೋಪಿಗಳಿಗೆ ಮಾಹಿತಿ ನೀಡಲು ದೊಡ್ಡಪೇಟೆ, ತುಂಗಾನಗರ ಹಾಗೂ ಮಹಿಳಾ ಪೊಲೀಸ್ ಠಾಣೆಗಳಲ್ಲಿ ತಲಾ ಒಬ್ಬ ಅರೆಕಾಲಿಕ ಕಾನೂನು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಟಿ.ಡಿ. ತಿಮ್ಮಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ. ಗೀತಾ, ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ರಾಮ್ ಪ್ರಸಾದ್, ಶುಶ್ರೂಷಕಾಧೀಕ್ಷಕಿ ಶೇಷಮ್ಮ, ಮಾನಸಿಕ ಆರೋಗ್ಯ ವಿಮರ್ಶಾ ಮಂಡಳಿ ಸದಸ್ಯೆ ರಜನಿ ಪೈ, ಪರಿಶೀಲನಾ ಮಂಡಳಿ ಸದಸ್ಯೆ ಶುಭ್ರತಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-42-1961479033</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>