<p>ಶಿವಮೊಗ್ಗ: ಸಾಗರ ರಸ್ತೆಯಲ್ಲಿರುವ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ಮ್ಯಾನೇಜ್ಮೆಂಟ್ ಸ್ಟಡೀಸ್ ಕಾಲೇಜಿನ ಎಂ.ಕಾಂ ವಿಭಾಗವು ಪಿಇಎಸ್ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ ಮತ್ತು ಎಂ.ಬಿ.ಎ ವಿಭಾಗಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ‘ಸಮನ್ವಯ-2026’ ಅಂತರ ಕಾಲೇಜು ಫೆಸ್ಟ್ ಈಚೆಗೆ ಪ್ರೇರಣಾ ಕನ್ವೆನ್ಷನ್ ಹಾಲ್ನಲ್ಲಿ ಅದ್ದೂರಿಯಾಗಿ ಚಾಲನೆ ಪಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಪಿಇಎಸ್ ಸಂಸ್ಥೆಯ ಕುಲಸಚಿವ ಪ್ರೊ.ಆರ್.ನಾಗರಾಜ್, ‘ಪ್ರತಿಯೊಬ್ಬ ವಿದ್ಯಾರ್ಥಿಗೂ ಸ್ಫೂರ್ತಿ ಅತ್ಯಗತ್ಯ. ಶೈಕ್ಷಣಿಕ ಸಂಸ್ಥೆಯ ಉನ್ನತಿಯಲ್ಲಿ ವಿದ್ಯಾರ್ಥಿ ಸಮೂಹ, ಗುಣಮಟ್ಟದ ಶಿಕ್ಷಣ, ನೈಪುಣ್ಯವುಳ್ಳ ಅಧ್ಯಾಪಕರು ಹಾಗೂ ಉತ್ತಮ ಫಲಿತಾಂಶ ಮತ್ತು ಉದ್ಯೋಗಾವಕಾಶ ಪ್ರಮುಖ ಪಾತ್ರ ವಹಿಸುತ್ತವೆ’ ಎಂದು ತಿಳಿಸಿದರು.</p>.<p>‘ಅತ್ಯಂತ ಕಡಿಮೆ ಅವಧಿಯಲ್ಲಿ ಪಿಇಎಸ್ ಸಂಸ್ಥೆಯು ಈ ಎಲ್ಲಾ ಮಾನದಂಡಗಳಲ್ಲಿ ಸಾಧನೆ ಮಾಡಿ ಅನೇಕ ಮೈಲಿಗಲ್ಲುಗಳನ್ನು ಸ್ಥಾಪಿಸಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ ಸಂಸ್ಥೆಯು ನಿರಂತರವಾಗಿ ಇಂತಹ ವೈವಿಧ್ಯಮಯ ಚಟುವಟಿಕೆಗಳನ್ನು ಆಯೋಜಿಸುತ್ತಾ ಬಂದಿದೆ’ ಎಂದು ಹೇಳಿದರು.</p>.<p>ವೇದಿಕೆಯಲ್ಲಿ ಪಿಇಎಸ್ ಐಎಎಂಎಸ್ ಪ್ರಾಂಶುಪಾಲ ಜಿ.ಎಂ.ಸುದರ್ಶನ್, ಪಿಇಎಸ್ ಐಟಿಎಂ ಪ್ರಾಂಶುಪಾಲ ಪ್ರೊ.ಡಿ.ಆರ್. ಸ್ವಾಮಿ, ಉಪ ಪ್ರಾಂಶುಪಾಲ ಪ್ರೊ.ಆರ್.ಶಂಕರ್ ಉಪಸ್ಥಿತರಿದ್ದರು. ಸಂಚಾಲಕರಾದ ಟಿ.ಆರ್. ನಾಗರಾಜ್, ಪ್ರೊ.ಅರ್ಜುನ್, ಪ್ರೊ.ತೇಜಸ್ವಿನಿ ಹಾಗೂ ಎಸ್.ಡಿ.ಆರತಿ ಕುಮಾರ್ ಭಾಗವಹಿಸಿದ್ದರು.</p>.<p>ಈ ಬಾರಿಯ ಫೆಸ್ಟ್ನಲ್ಲಿ ರಾಜ್ಯದ ವಿವಿಧ ಕಾಲೇಜುಗಳಿಂದ ಒಟ್ಟು 48 ತಂಡಗಳು ಭಾಗವಹಿಸಿದ್ದವು. ಶ್ಯಾಮ್ ಪ್ರಾರ್ಥನಾ ಗೀತೆ ಹಾಡಿದರು. ತೃಪ್ತಿ ಎಸ್. ಭಟ್ ಸ್ವಾಗತಿಸಿದರು. ಪ್ರೇರಣಾ ಕಾರ್ಯಕ್ರಮ ನಿರೂಪಿಸಿದರು. ಎಸ್.ಬಿ.ಸ್ನೇಹಾ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-42-2137211951</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಸಾಗರ ರಸ್ತೆಯಲ್ಲಿರುವ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ಮ್ಯಾನೇಜ್ಮೆಂಟ್ ಸ್ಟಡೀಸ್ ಕಾಲೇಜಿನ ಎಂ.ಕಾಂ ವಿಭಾಗವು ಪಿಇಎಸ್ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ ಮತ್ತು ಎಂ.ಬಿ.ಎ ವಿಭಾಗಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ‘ಸಮನ್ವಯ-2026’ ಅಂತರ ಕಾಲೇಜು ಫೆಸ್ಟ್ ಈಚೆಗೆ ಪ್ರೇರಣಾ ಕನ್ವೆನ್ಷನ್ ಹಾಲ್ನಲ್ಲಿ ಅದ್ದೂರಿಯಾಗಿ ಚಾಲನೆ ಪಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಪಿಇಎಸ್ ಸಂಸ್ಥೆಯ ಕುಲಸಚಿವ ಪ್ರೊ.ಆರ್.ನಾಗರಾಜ್, ‘ಪ್ರತಿಯೊಬ್ಬ ವಿದ್ಯಾರ್ಥಿಗೂ ಸ್ಫೂರ್ತಿ ಅತ್ಯಗತ್ಯ. ಶೈಕ್ಷಣಿಕ ಸಂಸ್ಥೆಯ ಉನ್ನತಿಯಲ್ಲಿ ವಿದ್ಯಾರ್ಥಿ ಸಮೂಹ, ಗುಣಮಟ್ಟದ ಶಿಕ್ಷಣ, ನೈಪುಣ್ಯವುಳ್ಳ ಅಧ್ಯಾಪಕರು ಹಾಗೂ ಉತ್ತಮ ಫಲಿತಾಂಶ ಮತ್ತು ಉದ್ಯೋಗಾವಕಾಶ ಪ್ರಮುಖ ಪಾತ್ರ ವಹಿಸುತ್ತವೆ’ ಎಂದು ತಿಳಿಸಿದರು.</p>.<p>‘ಅತ್ಯಂತ ಕಡಿಮೆ ಅವಧಿಯಲ್ಲಿ ಪಿಇಎಸ್ ಸಂಸ್ಥೆಯು ಈ ಎಲ್ಲಾ ಮಾನದಂಡಗಳಲ್ಲಿ ಸಾಧನೆ ಮಾಡಿ ಅನೇಕ ಮೈಲಿಗಲ್ಲುಗಳನ್ನು ಸ್ಥಾಪಿಸಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ ಸಂಸ್ಥೆಯು ನಿರಂತರವಾಗಿ ಇಂತಹ ವೈವಿಧ್ಯಮಯ ಚಟುವಟಿಕೆಗಳನ್ನು ಆಯೋಜಿಸುತ್ತಾ ಬಂದಿದೆ’ ಎಂದು ಹೇಳಿದರು.</p>.<p>ವೇದಿಕೆಯಲ್ಲಿ ಪಿಇಎಸ್ ಐಎಎಂಎಸ್ ಪ್ರಾಂಶುಪಾಲ ಜಿ.ಎಂ.ಸುದರ್ಶನ್, ಪಿಇಎಸ್ ಐಟಿಎಂ ಪ್ರಾಂಶುಪಾಲ ಪ್ರೊ.ಡಿ.ಆರ್. ಸ್ವಾಮಿ, ಉಪ ಪ್ರಾಂಶುಪಾಲ ಪ್ರೊ.ಆರ್.ಶಂಕರ್ ಉಪಸ್ಥಿತರಿದ್ದರು. ಸಂಚಾಲಕರಾದ ಟಿ.ಆರ್. ನಾಗರಾಜ್, ಪ್ರೊ.ಅರ್ಜುನ್, ಪ್ರೊ.ತೇಜಸ್ವಿನಿ ಹಾಗೂ ಎಸ್.ಡಿ.ಆರತಿ ಕುಮಾರ್ ಭಾಗವಹಿಸಿದ್ದರು.</p>.<p>ಈ ಬಾರಿಯ ಫೆಸ್ಟ್ನಲ್ಲಿ ರಾಜ್ಯದ ವಿವಿಧ ಕಾಲೇಜುಗಳಿಂದ ಒಟ್ಟು 48 ತಂಡಗಳು ಭಾಗವಹಿಸಿದ್ದವು. ಶ್ಯಾಮ್ ಪ್ರಾರ್ಥನಾ ಗೀತೆ ಹಾಡಿದರು. ತೃಪ್ತಿ ಎಸ್. ಭಟ್ ಸ್ವಾಗತಿಸಿದರು. ಪ್ರೇರಣಾ ಕಾರ್ಯಕ್ರಮ ನಿರೂಪಿಸಿದರು. ಎಸ್.ಬಿ.ಸ್ನೇಹಾ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-42-2137211951</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>